<p><strong>ನವದೆಹಲಿ: </strong>ಪೂರ್ವ ಲಡಾಖ್ನಲ್ಲಿ ನಿರ್ಮಾಣವಾಗಿರುವ ಬಿಕ್ಕಟ್ಟನ್ನು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಲು ಭಾರತ ಮತ್ತು ಚೀನಾದ ಸೇನಾ ಪಡೆಗಳು ಸಮ್ಮತಿ ಸೂಚಿಸಿವೆ.</p>.<p>ಶುಕ್ರವಾರ ಚುಶೂಲ್ನಲ್ಲಿ ನಡೆದಿದ್ದ ಭಾರತ ಮತ್ತು ಚೀನಾ ಸೇನೆಯ ಕಮಾಂಡರ್ ಮಟ್ಟದ ಎಂಟನೇ ಸುತ್ತಿನ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈ ಮಾತುಕತೆ ಕುರಿತು ಜಂಟಿ ಹೇಳಿಕೆಯನ್ನು ಭಾನುವಾರ ಉಭಯ ದೇಶಗಳು ಬಿಡುಗಡೆ ಮಾಡಿವೆ.</p>.<p>‘ಚೀನಾ ಸೇನೆಯೊಂದಿಗೆ ರಚನಾತ್ಮಕ ಹಾಗೂ ವಿಸ್ತೃತ ಮಾತುಕತೆ ನಡೆಸಲಾಗಿದೆ’ ಎಂದು ಭಾರತೀಯ ಸೇನೆಯು ಹೇಳಿದೆ.</p>.<p>‘ಉಭಯ ರಾಷ್ಟ್ರಗಳ ನಾಯಕರ ನಡುವಣ ಮಾತುಕತೆಯ ವೇಳೆ ವ್ಯಕ್ತವಾದ ಪ್ರಮುಖ ಅಂಶಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಸಭೆಯಲ್ಲಿ ಸಮ್ಮತಿಸಲಾಯಿತು. ಗಡಿಯಲ್ಲಿ ಶಾಂತಿ ಕಾಪಾಡಿಕೊಳ್ಳಬೇಕು. ಇನ್ನು ಮುಂದೆ ತಪ್ಪು ಗ್ರಹಿಕೆಗೆ ಆಸ್ಪದ ನೀಡಬಾರದು ಎಂಬ ನಿರ್ಧಾರಗಳನ್ನೂ ಕೈಗೊಳ್ಳಲಾಯಿತು’ ಎಂದೂ ತಿಳಿಸಿದೆ.</p>.<p>ಗಡಿಯಲ್ಲಿ ನಿಯೋಜಿಸಿರುವ ಸೇನೆಯನ್ನು ತ್ವರಿತವಾಗಿ ಹಿಂದಕ್ಕೆ ಪಡೆಯಬೇಕು. ಬಿಕ್ಕಟ್ಟು ಶಮನಗೊಳಿಸುವ ಪ್ರಯತ್ನಕ್ಕೆ ಭಂಗ ತರುವ ಯಾವುದೇ ಕ್ರಮಗಳಿಗೆ ಮುಂದಾಗಬಾರದು ಎಂದು ಭಾರತೀಯ ಸೇನೆಯು ಒತ್ತಾಯಿಸಿದ್ದಾಗಿ ಮೂಲಗಳು ತಿಳಿಸಿವೆ.</p>.<p>ಲೇಹ್ ಮೂಲದ 14ನೇ ಕಾರ್ಪ್ಸ್ನ ಲೆಫ್ಟಿನೆಂಟ್ ಜನರಲ್ ಪಿಜಿಕೆ ಮೆನನ್ ನೇತೃತ್ವದ ಭಾರತದ ನಿಯೋಗದಲ್ಲಿ ವಿದೇಶಾಂಗ ಸಚಿವಾಲಯದ ಜಂಟಿ ಕಾರ್ಯದರ್ಶಿ (ಪೂರ್ವ ಏಷ್ಯಾ) ನವೀನ್ ಶ್ರೀವಾಸ್ತವ ಅವರೂ ಇದ್ದರು.</p>.<p>ಶೀಘ್ರದಲ್ಲೇ ಮತ್ತೊಂದು ಸುತ್ತಿನ ಮಾತುಕತೆ ನಡೆಸಲೂ ಉಭಯ ಸೇನೆಗಳು ನಿರ್ಧರಿಸಿವೆ ಎಂದೂ ಹೇಳಲಾಗಿದೆ.</p>.<p>ಗಡಿಯಲ್ಲಿ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಭಾರತೀಯ ಸೇನೆಯು ಘರ್ಷಣಾ ಸ್ಥಳಗಳಲ್ಲಿ ಸುಮಾರು 50,000 ಸೈನಿಕರನ್ನು ನಿಯೋಜಿಸಿತ್ತು. ಚೀನಾ ಸೇನೆಯೂ ಇಷ್ಟೇ ಪ್ರಮಾಣದ ಸೈನಿಕರನ್ನು ನಿಯೋಜಿಸಿದೆ ಎಂದು ಅಧಿಕಾರಿಗಳು ನುಡಿದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪೂರ್ವ ಲಡಾಖ್ನಲ್ಲಿ ನಿರ್ಮಾಣವಾಗಿರುವ ಬಿಕ್ಕಟ್ಟನ್ನು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಲು ಭಾರತ ಮತ್ತು ಚೀನಾದ ಸೇನಾ ಪಡೆಗಳು ಸಮ್ಮತಿ ಸೂಚಿಸಿವೆ.</p>.<p>ಶುಕ್ರವಾರ ಚುಶೂಲ್ನಲ್ಲಿ ನಡೆದಿದ್ದ ಭಾರತ ಮತ್ತು ಚೀನಾ ಸೇನೆಯ ಕಮಾಂಡರ್ ಮಟ್ಟದ ಎಂಟನೇ ಸುತ್ತಿನ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈ ಮಾತುಕತೆ ಕುರಿತು ಜಂಟಿ ಹೇಳಿಕೆಯನ್ನು ಭಾನುವಾರ ಉಭಯ ದೇಶಗಳು ಬಿಡುಗಡೆ ಮಾಡಿವೆ.</p>.<p>‘ಚೀನಾ ಸೇನೆಯೊಂದಿಗೆ ರಚನಾತ್ಮಕ ಹಾಗೂ ವಿಸ್ತೃತ ಮಾತುಕತೆ ನಡೆಸಲಾಗಿದೆ’ ಎಂದು ಭಾರತೀಯ ಸೇನೆಯು ಹೇಳಿದೆ.</p>.<p>‘ಉಭಯ ರಾಷ್ಟ್ರಗಳ ನಾಯಕರ ನಡುವಣ ಮಾತುಕತೆಯ ವೇಳೆ ವ್ಯಕ್ತವಾದ ಪ್ರಮುಖ ಅಂಶಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಸಭೆಯಲ್ಲಿ ಸಮ್ಮತಿಸಲಾಯಿತು. ಗಡಿಯಲ್ಲಿ ಶಾಂತಿ ಕಾಪಾಡಿಕೊಳ್ಳಬೇಕು. ಇನ್ನು ಮುಂದೆ ತಪ್ಪು ಗ್ರಹಿಕೆಗೆ ಆಸ್ಪದ ನೀಡಬಾರದು ಎಂಬ ನಿರ್ಧಾರಗಳನ್ನೂ ಕೈಗೊಳ್ಳಲಾಯಿತು’ ಎಂದೂ ತಿಳಿಸಿದೆ.</p>.<p>ಗಡಿಯಲ್ಲಿ ನಿಯೋಜಿಸಿರುವ ಸೇನೆಯನ್ನು ತ್ವರಿತವಾಗಿ ಹಿಂದಕ್ಕೆ ಪಡೆಯಬೇಕು. ಬಿಕ್ಕಟ್ಟು ಶಮನಗೊಳಿಸುವ ಪ್ರಯತ್ನಕ್ಕೆ ಭಂಗ ತರುವ ಯಾವುದೇ ಕ್ರಮಗಳಿಗೆ ಮುಂದಾಗಬಾರದು ಎಂದು ಭಾರತೀಯ ಸೇನೆಯು ಒತ್ತಾಯಿಸಿದ್ದಾಗಿ ಮೂಲಗಳು ತಿಳಿಸಿವೆ.</p>.<p>ಲೇಹ್ ಮೂಲದ 14ನೇ ಕಾರ್ಪ್ಸ್ನ ಲೆಫ್ಟಿನೆಂಟ್ ಜನರಲ್ ಪಿಜಿಕೆ ಮೆನನ್ ನೇತೃತ್ವದ ಭಾರತದ ನಿಯೋಗದಲ್ಲಿ ವಿದೇಶಾಂಗ ಸಚಿವಾಲಯದ ಜಂಟಿ ಕಾರ್ಯದರ್ಶಿ (ಪೂರ್ವ ಏಷ್ಯಾ) ನವೀನ್ ಶ್ರೀವಾಸ್ತವ ಅವರೂ ಇದ್ದರು.</p>.<p>ಶೀಘ್ರದಲ್ಲೇ ಮತ್ತೊಂದು ಸುತ್ತಿನ ಮಾತುಕತೆ ನಡೆಸಲೂ ಉಭಯ ಸೇನೆಗಳು ನಿರ್ಧರಿಸಿವೆ ಎಂದೂ ಹೇಳಲಾಗಿದೆ.</p>.<p>ಗಡಿಯಲ್ಲಿ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಭಾರತೀಯ ಸೇನೆಯು ಘರ್ಷಣಾ ಸ್ಥಳಗಳಲ್ಲಿ ಸುಮಾರು 50,000 ಸೈನಿಕರನ್ನು ನಿಯೋಜಿಸಿತ್ತು. ಚೀನಾ ಸೇನೆಯೂ ಇಷ್ಟೇ ಪ್ರಮಾಣದ ಸೈನಿಕರನ್ನು ನಿಯೋಜಿಸಿದೆ ಎಂದು ಅಧಿಕಾರಿಗಳು ನುಡಿದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>