<p><strong>ಗುವಾಹಟಿ:</strong> ಅರುಣಾಚಲ ಪ್ರದೇಶದ ಕುಂಡಾವೊ–ಚು ನದಿಗೆ ಅಡ್ಡಲಾಗಿ 110 ಅಡಿ ಉದ್ದದ ಸೇತುವೆ ನಿರ್ಮಿಸಿದ ಭಾರತೀಯ ಸೇನೆಯ ಸ್ಪಿಯರ್ ಕಾರ್ಪ್ಸ್ ಯೋಧರು ಲೋಹಿತ್ ಕಣಿವೆ ಮತ್ತು ಸುತ್ತಮುತ್ತಲಿನ ಪ್ರದೇಶದ ಜನರಿಗೆ ಓಡಾಟಕ್ಕೆ ಸುಲಭ ಸಂಪರ್ಕ ಕಲ್ಪಿಸಿದ್ದಾರೆ.</p><p>ಈ ಹೊಸದಾಗಿ ನಿರ್ಮಿಸಲಾದ ಸೇತುವೆಯು ದೂರದ ಪ್ರದೇಶದಲ್ಲಿ ಮಿಲಿಟರಿ ಕಾರ್ಯಾಚರಣೆಗೆ ಮತ್ತು ನಾಗರಿಕ ಮೂಲಸೌಕರ್ಯ ಎರಡಕ್ಕೂ ಗಮನಾರ್ಹ ಉತ್ತೇಜನ ನೀಡುತ್ತದೆ ಎಂದು ಸೇನೆ ತಿಳಿಸಿದೆ.</p><p>ಈ ಸೇತುವೆ ಸಂಪರ್ಕವನ್ನು ಉತ್ತಮಗೊಳಿಸಲು, ಸೇನಾ ತುಕಡಿಯನ್ನು ಮತ್ತು ಶಸ್ತ್ರಾಸ್ತ್ರಗಳನ್ನು ಸಾಗಿಸಲು ನೆರವಾಗಲಿದೆ. ಎಲ್ಲದಕ್ಕಿಂತ ಹೆಚ್ಚಾಗಿ ಸ್ಥಳೀಯ ನಿವಾಸಿಗಳು ಸೇತುವೆ ಮೂಲಕ ಸಾಗಿ ಮಾರುಕಟ್ಟೆ ಸೇರಿ ಅಗತ್ಯ ಸೇವೆಗಳನ್ನು ಸುಲಭವಾಗಿ ಪಡೆದುಕೊಳ್ಳಬಹುದು ಎಂದಿದೆ. </p><p>ಸೇತುವೆ ನಿರ್ಮಾಣದ ವಿಡಿಯೊವನ್ನು ಸೇನೆ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದೆ.</p><p>ಅರುಣಾಚಲ ಪ್ರದೇಶದ ಹಲವೆಡೆ ವ್ಯತಿರಿಕ್ತ ಹವಾಮಾನ ಪರಿಸ್ಥಿತಿಗಳು ಎದುರಾಗುತ್ತವೆ. ಅಂತಹ ಸಂದರ್ಭಗಳಲ್ಲಿ ರಸ್ತೆಯನ್ನು ಅವಲಂಬಿಸಿ ಸಂಚರಿಸುವುದು ಸಾಧ್ಯವಾಗದು. ಹೀಗಾಗಿ ನದಿಯನ್ನು ದಾಟಲು ಸುಲಭವಾಗುವಂತೆ ಸೇತುವೆ ನಿರ್ಮಿಸಿ ಸೇನಾ ಸಿಬ್ಬಂದಿ ಎಂಜಿನಿಯರ್ಗಳಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ಅರುಣಾಚಲ ಪ್ರದೇಶದ ಕುಂಡಾವೊ–ಚು ನದಿಗೆ ಅಡ್ಡಲಾಗಿ 110 ಅಡಿ ಉದ್ದದ ಸೇತುವೆ ನಿರ್ಮಿಸಿದ ಭಾರತೀಯ ಸೇನೆಯ ಸ್ಪಿಯರ್ ಕಾರ್ಪ್ಸ್ ಯೋಧರು ಲೋಹಿತ್ ಕಣಿವೆ ಮತ್ತು ಸುತ್ತಮುತ್ತಲಿನ ಪ್ರದೇಶದ ಜನರಿಗೆ ಓಡಾಟಕ್ಕೆ ಸುಲಭ ಸಂಪರ್ಕ ಕಲ್ಪಿಸಿದ್ದಾರೆ.</p><p>ಈ ಹೊಸದಾಗಿ ನಿರ್ಮಿಸಲಾದ ಸೇತುವೆಯು ದೂರದ ಪ್ರದೇಶದಲ್ಲಿ ಮಿಲಿಟರಿ ಕಾರ್ಯಾಚರಣೆಗೆ ಮತ್ತು ನಾಗರಿಕ ಮೂಲಸೌಕರ್ಯ ಎರಡಕ್ಕೂ ಗಮನಾರ್ಹ ಉತ್ತೇಜನ ನೀಡುತ್ತದೆ ಎಂದು ಸೇನೆ ತಿಳಿಸಿದೆ.</p><p>ಈ ಸೇತುವೆ ಸಂಪರ್ಕವನ್ನು ಉತ್ತಮಗೊಳಿಸಲು, ಸೇನಾ ತುಕಡಿಯನ್ನು ಮತ್ತು ಶಸ್ತ್ರಾಸ್ತ್ರಗಳನ್ನು ಸಾಗಿಸಲು ನೆರವಾಗಲಿದೆ. ಎಲ್ಲದಕ್ಕಿಂತ ಹೆಚ್ಚಾಗಿ ಸ್ಥಳೀಯ ನಿವಾಸಿಗಳು ಸೇತುವೆ ಮೂಲಕ ಸಾಗಿ ಮಾರುಕಟ್ಟೆ ಸೇರಿ ಅಗತ್ಯ ಸೇವೆಗಳನ್ನು ಸುಲಭವಾಗಿ ಪಡೆದುಕೊಳ್ಳಬಹುದು ಎಂದಿದೆ. </p><p>ಸೇತುವೆ ನಿರ್ಮಾಣದ ವಿಡಿಯೊವನ್ನು ಸೇನೆ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದೆ.</p><p>ಅರುಣಾಚಲ ಪ್ರದೇಶದ ಹಲವೆಡೆ ವ್ಯತಿರಿಕ್ತ ಹವಾಮಾನ ಪರಿಸ್ಥಿತಿಗಳು ಎದುರಾಗುತ್ತವೆ. ಅಂತಹ ಸಂದರ್ಭಗಳಲ್ಲಿ ರಸ್ತೆಯನ್ನು ಅವಲಂಬಿಸಿ ಸಂಚರಿಸುವುದು ಸಾಧ್ಯವಾಗದು. ಹೀಗಾಗಿ ನದಿಯನ್ನು ದಾಟಲು ಸುಲಭವಾಗುವಂತೆ ಸೇತುವೆ ನಿರ್ಮಿಸಿ ಸೇನಾ ಸಿಬ್ಬಂದಿ ಎಂಜಿನಿಯರ್ಗಳಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>