<p><strong>ನವದೆಹಲಿ</strong>: ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ್ದ ನಿವೃತ್ತ ಯೋಧ ಸೆವಾಂಗ್ ಥಾರ್ಚಿನ್ ಅವರು ಲಡಾಖ್ನಲ್ಲಿ ನಡೆದ ಹಿಂಸಾಚಾರದ ವೇಳೆ ಮೃತಪಟ್ಟಿರುವುದು ದುಃಖ ಹಾಗೂ ಆಕ್ರೋಶದ ಸಂಗತಿ ಎಂದು ಕಾಂಗ್ರೆಸ್ ಸೋಮವಾರ ಹೇಳಿದೆ.</p><p>ಸಿಯಾಚಿನ್ ಗ್ಲೇಸಿಯರ್ನಲ್ಲಿ ಕರ್ತವ್ಯ ನಿರ್ವಹಿಸಿದ್ದ ಥಾರ್ಚಿನ್ ಅವರು, 1999ರ ಕಾರ್ಗಿಲ್ ಕದನದಲ್ಲಿ ಹೋರಾಡಿದ್ದರು. ಅವರ ತಂದೆಯೂ, ಭಾರತೀಯ ಸೇನೆಯಲ್ಲಿದ್ದರು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು 'ಎಕ್ಸ್'ನಲ್ಲಿ ಬರೆದುಕೊಂಡಿದ್ದಾರೆ.</p><p>'ಲಡಾಖ್ಗೆ ರಾಜ್ಯ ಸ್ಥಾನಮಾನಕ್ಕಾಗಿ ಸೆವಾಂಗ್ ಥಾರ್ಚಿನ್ ಅವರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಐದು ದಿನಗಳ ಹಿಂದೆ ಹೋರಾಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಇತರ ಮೂವರೊಂದಿಗೆ ಅವರೂ ಮೃತಪಟ್ಟಿರುವುದು ಅತ್ಯಂತ ದುಃಖದ ಮತ್ತು ತೀವ್ರ ಆಕ್ರೋಶದ ಸಂಗತಿ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p><p>ಲಡಾಖ್ ಹಿಂಸಾಚಾರದ ಬೆನ್ನಲ್ಲೇ ಲೇಹ್ ಪಟ್ಟಣದಲ್ಲಿ ಹೇರಲಾಗಿರುವ ಕರ್ಫ್ಯೂ ಮುಂದುವರಿದಿದೆ. ಲೆಫ್ಟಿನೆಂಟ್ ಗವರ್ನರ್ ಕವಿಂದರ್ ಗುಪ್ತಾ ಅವರ ನೇತೃತ್ವದಲ್ಲಿ ಲಡಾಖ್ನ ಭದ್ರತಾ ಪರಿಸ್ಥಿತಿಯ ಸಮಗ್ರ ಪರಿಶೀಲನಾ ಸಭೆ ನಡೆಯಲಿದೆ.</p>.ಆಳ-ಅಗಲ | ಲಡಾಖ್: ರಾಜ್ಯ ಸ್ಥಾನಮಾನ, ಸ್ವಾಯತ್ತೆಗಾಗಿ ಹೋರಾಟ.ಲಡಾಖ್ ಹಿಂಸಾಚಾರ | ನನ್ನ ಬಂಧನದಿಂದ ಸರ್ಕಾರಕ್ಕೆ ಸಮಸ್ಯೆ; ಸೋನಮ್ ವಾಂಗ್ಚುಕ್.<p>ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವೆ ನಡೆದ ಹಿಂಸಾತ್ಮಕ ಘರ್ಷಣೆ ಬೆನ್ನಲ್ಲೇ, ಸೆಪ್ಟೆಂಬರ್ 24ರಂದು ಲೇಹ್ನಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿತ್ತು.</p><p>ಘರ್ಷಣೆ ವೇಳೆ 80 ಪೊಲೀಸರೂ ಸೇರಿದಂತೆ 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇದರ ಬೆನ್ನಲ್ಲೇ, ಇಬ್ಬರು ಕೌನ್ಸಿಲರ್ಗಳನ್ನೊಳಗೊಂಡಂತೆ 60 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p><p>ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಸೆಪ್ಟೆಂಬರ್ 26ರಂದು ಬಂಧಿಸಲಾಗಿದ್ದು, ರಾಜಸ್ಥಾನದ ಜೋಧಪುರ ಜೈಲಿನಲ್ಲಿರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ್ದ ನಿವೃತ್ತ ಯೋಧ ಸೆವಾಂಗ್ ಥಾರ್ಚಿನ್ ಅವರು ಲಡಾಖ್ನಲ್ಲಿ ನಡೆದ ಹಿಂಸಾಚಾರದ ವೇಳೆ ಮೃತಪಟ್ಟಿರುವುದು ದುಃಖ ಹಾಗೂ ಆಕ್ರೋಶದ ಸಂಗತಿ ಎಂದು ಕಾಂಗ್ರೆಸ್ ಸೋಮವಾರ ಹೇಳಿದೆ.</p><p>ಸಿಯಾಚಿನ್ ಗ್ಲೇಸಿಯರ್ನಲ್ಲಿ ಕರ್ತವ್ಯ ನಿರ್ವಹಿಸಿದ್ದ ಥಾರ್ಚಿನ್ ಅವರು, 1999ರ ಕಾರ್ಗಿಲ್ ಕದನದಲ್ಲಿ ಹೋರಾಡಿದ್ದರು. ಅವರ ತಂದೆಯೂ, ಭಾರತೀಯ ಸೇನೆಯಲ್ಲಿದ್ದರು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು 'ಎಕ್ಸ್'ನಲ್ಲಿ ಬರೆದುಕೊಂಡಿದ್ದಾರೆ.</p><p>'ಲಡಾಖ್ಗೆ ರಾಜ್ಯ ಸ್ಥಾನಮಾನಕ್ಕಾಗಿ ಸೆವಾಂಗ್ ಥಾರ್ಚಿನ್ ಅವರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಐದು ದಿನಗಳ ಹಿಂದೆ ಹೋರಾಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಇತರ ಮೂವರೊಂದಿಗೆ ಅವರೂ ಮೃತಪಟ್ಟಿರುವುದು ಅತ್ಯಂತ ದುಃಖದ ಮತ್ತು ತೀವ್ರ ಆಕ್ರೋಶದ ಸಂಗತಿ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p><p>ಲಡಾಖ್ ಹಿಂಸಾಚಾರದ ಬೆನ್ನಲ್ಲೇ ಲೇಹ್ ಪಟ್ಟಣದಲ್ಲಿ ಹೇರಲಾಗಿರುವ ಕರ್ಫ್ಯೂ ಮುಂದುವರಿದಿದೆ. ಲೆಫ್ಟಿನೆಂಟ್ ಗವರ್ನರ್ ಕವಿಂದರ್ ಗುಪ್ತಾ ಅವರ ನೇತೃತ್ವದಲ್ಲಿ ಲಡಾಖ್ನ ಭದ್ರತಾ ಪರಿಸ್ಥಿತಿಯ ಸಮಗ್ರ ಪರಿಶೀಲನಾ ಸಭೆ ನಡೆಯಲಿದೆ.</p>.ಆಳ-ಅಗಲ | ಲಡಾಖ್: ರಾಜ್ಯ ಸ್ಥಾನಮಾನ, ಸ್ವಾಯತ್ತೆಗಾಗಿ ಹೋರಾಟ.ಲಡಾಖ್ ಹಿಂಸಾಚಾರ | ನನ್ನ ಬಂಧನದಿಂದ ಸರ್ಕಾರಕ್ಕೆ ಸಮಸ್ಯೆ; ಸೋನಮ್ ವಾಂಗ್ಚುಕ್.<p>ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವೆ ನಡೆದ ಹಿಂಸಾತ್ಮಕ ಘರ್ಷಣೆ ಬೆನ್ನಲ್ಲೇ, ಸೆಪ್ಟೆಂಬರ್ 24ರಂದು ಲೇಹ್ನಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿತ್ತು.</p><p>ಘರ್ಷಣೆ ವೇಳೆ 80 ಪೊಲೀಸರೂ ಸೇರಿದಂತೆ 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇದರ ಬೆನ್ನಲ್ಲೇ, ಇಬ್ಬರು ಕೌನ್ಸಿಲರ್ಗಳನ್ನೊಳಗೊಂಡಂತೆ 60 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p><p>ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಸೆಪ್ಟೆಂಬರ್ 26ರಂದು ಬಂಧಿಸಲಾಗಿದ್ದು, ರಾಜಸ್ಥಾನದ ಜೋಧಪುರ ಜೈಲಿನಲ್ಲಿರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>