<p><strong>ನವದೆಹಲಿ:</strong> ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿ ಭೇಟಿ ನೀಡಿದ ನಂತರ ಗಗನಯಾನಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಭಾನುವಾರ ಬೆಳಗಿನ ಜಾವ ಭಾರತಕ್ಕೆ ಮರಳಿದರು.</p><p>ಕಳೆದ ಒಂದು ವರ್ಷದಿಂದ ಶುಭಾಂಶು ಅವರು ಅಮೆರಿಕದಲ್ಲಿದ್ದು ಆಕ್ಸಿಯಂ–4 ಯೋಜನೆಯ ತರಬೇತಿಯಲ್ಲಿ ಪಾಲ್ಗೊಂಡಿದ್ದರು. ಶುಕ್ಲಾ ಅವರನ್ನು ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಸ್ವಾಗತಿಸಿದರು.</p><p>ಶುಕ್ಲಾ ಅವರೊಂದಿಗೆ ಮತ್ತೊಬ್ಬ ಗಗನಯಾತ್ರಿ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಕೂಡ ತಾಯ್ನಾಡಿಗೆ ಮರಳಿದರು. ಮೊದಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ನಂತರ ತಮ್ಮ ಊರು ಉತ್ತರಪ್ರದೇಶದ ಲಖನೌಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಇದಾದ ನಂತರ ದೆಹಲಿಯಲ್ಲಿ ಆ. 22 ಹಾಗೂ 23ರಂದು ನಡೆಯಲಿರುವ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ</p><p>2027ರಲ್ಲಿ ಇಸ್ರೊ ಕೈಗೊಳ್ಳಲು ಉದ್ದೇಶಿಸಿರುವ ಮಾನವ ಸಹಿತ ಗಗನಯಾನಕ್ಕೆ ಪೂರ್ವಭಾವಿಯಾಗಿ ನಾಸಾ ಜತೆಗೂಡಿ ನಡೆಸಿದ ಮಾನವ ಸಹಿತ ಬಾಹ್ಯಾಕಾಶ ಯಾನದಲ್ಲಿ ಶುಭಾಂಶು ಶುಕ್ಲ ಅವರು ಇತರ ಮೂವರು ಗಗನಯಾನಿಗಳೊಂದಿಗೆ ಪಾಲ್ಗೊಂಡಿದ್ದರು.</p><p>ಭಾರತದ ಆದರ್ಶ ಪುತ್ರ, ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು ಬೆಳಗಿನ ಜಾವ ದೆಹಲಿಗೆ ಬಂದಿಳಿದರು. ಇವರೊಂದಿಗೆ ಮತ್ತೊಬ್ಬ ಗಗನಯಾತ್ರಿ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಕೂಡ ಮರಳಿದರು. ಎಂದು ಜಿತೇಂದ್ರ ಸಿಂಗ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.ಶುಭಾಂಶು ಶುಕ್ಲಾ ಸ್ವಾಗತಕ್ಕೆ ಲಖನೌ ಸಜ್ಜು .ಗಗನಯಾನಿ ಶುಭಾಂಶು ಶುಕ್ಲಾ ನಾಳೆ ಭಾರತಕ್ಕೆ: ಪ್ರಧಾನಿ ನರೇಂದ್ರ ಮೋದಿ ಭೇಟಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿ ಭೇಟಿ ನೀಡಿದ ನಂತರ ಗಗನಯಾನಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಭಾನುವಾರ ಬೆಳಗಿನ ಜಾವ ಭಾರತಕ್ಕೆ ಮರಳಿದರು.</p><p>ಕಳೆದ ಒಂದು ವರ್ಷದಿಂದ ಶುಭಾಂಶು ಅವರು ಅಮೆರಿಕದಲ್ಲಿದ್ದು ಆಕ್ಸಿಯಂ–4 ಯೋಜನೆಯ ತರಬೇತಿಯಲ್ಲಿ ಪಾಲ್ಗೊಂಡಿದ್ದರು. ಶುಕ್ಲಾ ಅವರನ್ನು ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಸ್ವಾಗತಿಸಿದರು.</p><p>ಶುಕ್ಲಾ ಅವರೊಂದಿಗೆ ಮತ್ತೊಬ್ಬ ಗಗನಯಾತ್ರಿ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಕೂಡ ತಾಯ್ನಾಡಿಗೆ ಮರಳಿದರು. ಮೊದಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ನಂತರ ತಮ್ಮ ಊರು ಉತ್ತರಪ್ರದೇಶದ ಲಖನೌಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಇದಾದ ನಂತರ ದೆಹಲಿಯಲ್ಲಿ ಆ. 22 ಹಾಗೂ 23ರಂದು ನಡೆಯಲಿರುವ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ</p><p>2027ರಲ್ಲಿ ಇಸ್ರೊ ಕೈಗೊಳ್ಳಲು ಉದ್ದೇಶಿಸಿರುವ ಮಾನವ ಸಹಿತ ಗಗನಯಾನಕ್ಕೆ ಪೂರ್ವಭಾವಿಯಾಗಿ ನಾಸಾ ಜತೆಗೂಡಿ ನಡೆಸಿದ ಮಾನವ ಸಹಿತ ಬಾಹ್ಯಾಕಾಶ ಯಾನದಲ್ಲಿ ಶುಭಾಂಶು ಶುಕ್ಲ ಅವರು ಇತರ ಮೂವರು ಗಗನಯಾನಿಗಳೊಂದಿಗೆ ಪಾಲ್ಗೊಂಡಿದ್ದರು.</p><p>ಭಾರತದ ಆದರ್ಶ ಪುತ್ರ, ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು ಬೆಳಗಿನ ಜಾವ ದೆಹಲಿಗೆ ಬಂದಿಳಿದರು. ಇವರೊಂದಿಗೆ ಮತ್ತೊಬ್ಬ ಗಗನಯಾತ್ರಿ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಕೂಡ ಮರಳಿದರು. ಎಂದು ಜಿತೇಂದ್ರ ಸಿಂಗ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.ಶುಭಾಂಶು ಶುಕ್ಲಾ ಸ್ವಾಗತಕ್ಕೆ ಲಖನೌ ಸಜ್ಜು .ಗಗನಯಾನಿ ಶುಭಾಂಶು ಶುಕ್ಲಾ ನಾಳೆ ಭಾರತಕ್ಕೆ: ಪ್ರಧಾನಿ ನರೇಂದ್ರ ಮೋದಿ ಭೇಟಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>