<p><strong>ನವದೆಹಲಿ, ಲಖನೌ</strong>: ‘ನಾನು ನಾಚಿಕೆ, ಸಂಕೋಚ ಸ್ವಭಾವದ ವ್ಯಕ್ತಿಯಾಗಿ ಬೆಳೆದೆ. ಆದರೆ, ಚಿಕ್ಕವನಿದ್ದಾಗಿನಿಂದಲೂ ಬಾಹ್ಯಾಕಾಶಕ್ಕೆ ಹಾರುವ ಕನಸು ಕಂಡಿರಲಿಲ್ಲ’ ಎಂದು ಗಗನಯಾತ್ರಿ ಶುಭಾಂಶು ಶುಕ್ಲಾ ಹೇಳಿದರು.</p>.<p>ಭಾರತೀಯ ವಾಯುಪಡೆ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶುಕ್ಲಾ ಅವರು ‘ಬಾಹ್ಯಾಕಾಶಕ್ಕೆ ಹಾರುವ ಕನಸಿಲ್ಲದಿದ್ದರೂ, ಬಾಲ್ಯದಿಂದ ಗಗನಯಾನಿ ರಾಕೇಶ್ ಶರ್ಮಾ ಅವರ ಬಾಹ್ಯಾಕಾಶಯಾನದ ಕಥೆಗಳನ್ನು ಕೇಳುತ್ತಾ ಬೆಳೆದೆ’ ಎಂದು ವಿವರಿಸಿದರು.</p>.<p>ಶುಕ್ಲಾ ಅವರು, ‘ಆಕ್ಸಿಯಂ–4’ರ ಭಾಗವಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದಾಗಿನ ಅನುಭವಗಳನ್ನು ಕಾರ್ಯಕ್ರಮದಲ್ಲಿ ಹಂಚಿಕೊಂಡರು.</p>.<p>ಕಾರ್ಯಕ್ರಮದಲ್ಲಿ ಶುಲ್ಕಾ ಸೇರಿ ನಾಲ್ವರು ಗಗನಯಾತ್ರಿಗಳನ್ನು ಸನ್ಮಾನಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ‘ಗಗನಯಾನ ಮಿಷನ್, ಆತ್ಮನಿರ್ಭರ ಭಾರತದ ಪ್ರಯಾಣದಲ್ಲಿ ‘ಹೊಸ ಅಧ್ಯಾಯ’ ವನ್ನು ಸೂಚಿಸುತ್ತಿದೆ’ ಎಂದು ಪ್ರತಿಪಾದಿಸಿದರು.</p>.ಶುಭಾಂಶು ಶುಕ್ಲಾ ಸೇರಿ ಗಗನಯಾತ್ರಿಗಳ ಜೀವ ಅಪಾಯದಲ್ಲಿತ್ತು: ಇಸ್ರೊ ಮುಖ್ಯಸ್ಥ.<h2>ಶುಕ್ಲಾ ಸ್ವಾಗತಕ್ಕೆ ಅದ್ಧೂರಿ ಸಿದ್ಧತೆ: </h2>.<p> ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಗೆ ಮರಳಿದ ನಂತರ ಇದೇ ಮೊದಲ ಬಾರಿಗೆ ತವರು ಜಿಲ್ಲೆ ಲಖನೌಗೆ ಸೋಮವಾರ ಭೇಟಿ ನೀಡುತ್ತಿರುವ ಗಗನಯಾತ್ರಿ ಶುಭಾಂಶು ಶುಕ್ಲಾ ಅವರನ್ನು ಸ್ವಾಗತಿಸಲು ಇಲ್ಲಿ ಅದ್ಧೂರಿ ಸಿದ್ಧತೆ ನಡೆದಿದೆ.</p>.<p>ತಮ್ಮೂರಿನ ಹುಡುಗನನ್ನು ಸ್ವಾಗತಿಸಲು ಸ್ಥಳೀಯರು, ಕುಟುಂಬದ ಸದಸ್ಯರು ಉತ್ಸಕರಾಗಿದ್ದಾರೆ. ಬೆಳಿಗ್ಗೆ 8.45ಕ್ಕೆ ಲಖನೌ ವಿಮಾನ ನಿಲ್ದಾಣ ತಲುಪಲಿರುವ ಶುಕ್ಲಾ ಅವರು ಮೂರು ದಿನ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.</p>.<p>ಶುಕ್ಲಾ ವಿದ್ಯಾಭ್ಯಾಸ ಮಾಡಿದ ‘ದಿ ಸಿಟಿ ಮಾಂಟೆಸ್ಸರಿ ಶಾಲೆ’(ಸಿಎಂಎಸ್)ಯವರು, ತಮ್ಮ ವಿದ್ಯಾರ್ಥಿಯ ಸಾಧನೆಯನ್ನು ಗೌರವಿಸಲು ‘ಗ್ರಾಂಡ್ ವಿಕ್ಟರಿ ಪರೇಡ್’ ಆಯೋಜಿಸಿದ್ದಾರೆ. ಮೂಲಕಗಳ ಪ್ರಕಾರ 63 ಸಾವಿರ ಸಿಎಂಎಸ್ ವಿದ್ಯಾರ್ಥಿಗಳೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.</p>.ಭಾರತಕ್ಕೆ ಮರಳಿದ ಗಗನಯಾನಿ ಶುಭಾಂಶು ಶುಕ್ಲಾ: ಭವ್ಯ ಸ್ವಾಗತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ, ಲಖನೌ</strong>: ‘ನಾನು ನಾಚಿಕೆ, ಸಂಕೋಚ ಸ್ವಭಾವದ ವ್ಯಕ್ತಿಯಾಗಿ ಬೆಳೆದೆ. ಆದರೆ, ಚಿಕ್ಕವನಿದ್ದಾಗಿನಿಂದಲೂ ಬಾಹ್ಯಾಕಾಶಕ್ಕೆ ಹಾರುವ ಕನಸು ಕಂಡಿರಲಿಲ್ಲ’ ಎಂದು ಗಗನಯಾತ್ರಿ ಶುಭಾಂಶು ಶುಕ್ಲಾ ಹೇಳಿದರು.</p>.<p>ಭಾರತೀಯ ವಾಯುಪಡೆ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶುಕ್ಲಾ ಅವರು ‘ಬಾಹ್ಯಾಕಾಶಕ್ಕೆ ಹಾರುವ ಕನಸಿಲ್ಲದಿದ್ದರೂ, ಬಾಲ್ಯದಿಂದ ಗಗನಯಾನಿ ರಾಕೇಶ್ ಶರ್ಮಾ ಅವರ ಬಾಹ್ಯಾಕಾಶಯಾನದ ಕಥೆಗಳನ್ನು ಕೇಳುತ್ತಾ ಬೆಳೆದೆ’ ಎಂದು ವಿವರಿಸಿದರು.</p>.<p>ಶುಕ್ಲಾ ಅವರು, ‘ಆಕ್ಸಿಯಂ–4’ರ ಭಾಗವಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದಾಗಿನ ಅನುಭವಗಳನ್ನು ಕಾರ್ಯಕ್ರಮದಲ್ಲಿ ಹಂಚಿಕೊಂಡರು.</p>.<p>ಕಾರ್ಯಕ್ರಮದಲ್ಲಿ ಶುಲ್ಕಾ ಸೇರಿ ನಾಲ್ವರು ಗಗನಯಾತ್ರಿಗಳನ್ನು ಸನ್ಮಾನಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ‘ಗಗನಯಾನ ಮಿಷನ್, ಆತ್ಮನಿರ್ಭರ ಭಾರತದ ಪ್ರಯಾಣದಲ್ಲಿ ‘ಹೊಸ ಅಧ್ಯಾಯ’ ವನ್ನು ಸೂಚಿಸುತ್ತಿದೆ’ ಎಂದು ಪ್ರತಿಪಾದಿಸಿದರು.</p>.ಶುಭಾಂಶು ಶುಕ್ಲಾ ಸೇರಿ ಗಗನಯಾತ್ರಿಗಳ ಜೀವ ಅಪಾಯದಲ್ಲಿತ್ತು: ಇಸ್ರೊ ಮುಖ್ಯಸ್ಥ.<h2>ಶುಕ್ಲಾ ಸ್ವಾಗತಕ್ಕೆ ಅದ್ಧೂರಿ ಸಿದ್ಧತೆ: </h2>.<p> ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಗೆ ಮರಳಿದ ನಂತರ ಇದೇ ಮೊದಲ ಬಾರಿಗೆ ತವರು ಜಿಲ್ಲೆ ಲಖನೌಗೆ ಸೋಮವಾರ ಭೇಟಿ ನೀಡುತ್ತಿರುವ ಗಗನಯಾತ್ರಿ ಶುಭಾಂಶು ಶುಕ್ಲಾ ಅವರನ್ನು ಸ್ವಾಗತಿಸಲು ಇಲ್ಲಿ ಅದ್ಧೂರಿ ಸಿದ್ಧತೆ ನಡೆದಿದೆ.</p>.<p>ತಮ್ಮೂರಿನ ಹುಡುಗನನ್ನು ಸ್ವಾಗತಿಸಲು ಸ್ಥಳೀಯರು, ಕುಟುಂಬದ ಸದಸ್ಯರು ಉತ್ಸಕರಾಗಿದ್ದಾರೆ. ಬೆಳಿಗ್ಗೆ 8.45ಕ್ಕೆ ಲಖನೌ ವಿಮಾನ ನಿಲ್ದಾಣ ತಲುಪಲಿರುವ ಶುಕ್ಲಾ ಅವರು ಮೂರು ದಿನ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.</p>.<p>ಶುಕ್ಲಾ ವಿದ್ಯಾಭ್ಯಾಸ ಮಾಡಿದ ‘ದಿ ಸಿಟಿ ಮಾಂಟೆಸ್ಸರಿ ಶಾಲೆ’(ಸಿಎಂಎಸ್)ಯವರು, ತಮ್ಮ ವಿದ್ಯಾರ್ಥಿಯ ಸಾಧನೆಯನ್ನು ಗೌರವಿಸಲು ‘ಗ್ರಾಂಡ್ ವಿಕ್ಟರಿ ಪರೇಡ್’ ಆಯೋಜಿಸಿದ್ದಾರೆ. ಮೂಲಕಗಳ ಪ್ರಕಾರ 63 ಸಾವಿರ ಸಿಎಂಎಸ್ ವಿದ್ಯಾರ್ಥಿಗಳೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.</p>.ಭಾರತಕ್ಕೆ ಮರಳಿದ ಗಗನಯಾನಿ ಶುಭಾಂಶು ಶುಕ್ಲಾ: ಭವ್ಯ ಸ್ವಾಗತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>