<p><strong>ಪೋರ್ಬಂದರ್:</strong> ಗುಜರಾತ್ನ ಪೋರ್ಬಂದರ್ ನಗರದ ಹೊರವಲಯದಲ್ಲಿ ಭಾರತೀಯ ಕರಾವಳಿ ಪಡೆಯ(ಐಸಿಜಿ) ಹೆಲಿಕಾಪ್ಟರ್ವೊಂದು ಪತನಗೊಂಡು ಬೆಂಕಿ ಹತ್ತಿಕೊಂಡ ಪರಿಣಾಮ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ.</p><p>‘ಅತ್ಯಾಧುನಿಕ ಲಘು ಹೆಲಿಕಾಪ್ಟರ್ (ಎಎಲ್ಎಚ್) ಕರಾವಳಿ ಪಡೆಯ ವಿಮಾನ ನಿಲ್ದಾಣದ ರನ್ವೇಯಲ್ಲಿ ಮಧ್ಯಾಹ್ನ 12.10ಕ್ಕೆ ಇಳಿಯಲು ಯತ್ನಿಸಿದಾಗ ಅವಘಡ ಸಂಭವಿಸಿದೆ’ ಎಂದು ಪೋರ್ಬಂದರ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭಗೀರಥ್ಸಿನ್ಹಾ ಜಡೇಜಾ ಅವರು ತಿಳಿಸಿದ್ದಾರೆ.</p><p>‘ಹೆಲಿಕಾಪ್ಟರ್ ಪತನಗೊಂಡ ತಕ್ಷಣ ಬೆಂಕಿ ಹತ್ತಿಕೊಂಡಿತು. ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯ ಸಿಬ್ಬಂದಿ ಸಹಾಯದಿಂದ ಬೆಂಕಿ ನಂದಿಸಲಾಗಿದ್ದು, ಹೆಲಿಕಾಪ್ಟರ್ ಒಳಗಿದ್ದ ಇಬ್ಬರು ಪೈಲಟ್ ಮತ್ತು ಒಬ್ಬ ಸಿಬ್ಬಂದಿಯನ್ನು ಹೊರಗೆ ಸಾಗಿಸಿ ಆಸ್ಪತ್ರೆಗೆ ದಾಖಲಿಸಲಾಯಿತು’ ಎಂದು ಹೇಳಿದ್ದಾರೆ.</p><p>‘ಆಸ್ಪತ್ರೆಗೆ ದಾಖಲಿಸುವ ಮೊದಲೇ ಇಬ್ಬರು ಮೃತಪಟ್ಟಿದ್ದರು. ಇನ್ನೊಬ್ಬ ಸಿಬ್ಬಂದಿ ಆಸ್ಪತ್ರೆಯಲ್ಲಿ ಮೃತಪಟ್ಟರು’ ಎಂದು ಕಮಲ್ ಭಾಗ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಜೇಶ್ ಕನ್ಮಿಯಾ ಅವರು ಮಾಹಿತಿ ನೀಡಿದ್ದಾರೆ.</p><p>ಮೃತರನ್ನು ಕಮಾಂಡೆಂಟ್(ಜೆ.ಜಿ) ಸೌರಭ್, ಡೆಪ್ಯುಟಿ ಕಮಾಂಡೆಂಟ್ ಎಸ್.ಕೆ ಯಾದವ್ ಮತ್ತು ಪ್ರಧಾನ ನಾವಿಕ ಮನೋಜ್ ಎಂದು ಗುರುತಿಸಲಾಗಿದೆ.</p><p>ಅವಘಡಕ್ಕೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಐಸಿಜಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೋರ್ಬಂದರ್:</strong> ಗುಜರಾತ್ನ ಪೋರ್ಬಂದರ್ ನಗರದ ಹೊರವಲಯದಲ್ಲಿ ಭಾರತೀಯ ಕರಾವಳಿ ಪಡೆಯ(ಐಸಿಜಿ) ಹೆಲಿಕಾಪ್ಟರ್ವೊಂದು ಪತನಗೊಂಡು ಬೆಂಕಿ ಹತ್ತಿಕೊಂಡ ಪರಿಣಾಮ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ.</p><p>‘ಅತ್ಯಾಧುನಿಕ ಲಘು ಹೆಲಿಕಾಪ್ಟರ್ (ಎಎಲ್ಎಚ್) ಕರಾವಳಿ ಪಡೆಯ ವಿಮಾನ ನಿಲ್ದಾಣದ ರನ್ವೇಯಲ್ಲಿ ಮಧ್ಯಾಹ್ನ 12.10ಕ್ಕೆ ಇಳಿಯಲು ಯತ್ನಿಸಿದಾಗ ಅವಘಡ ಸಂಭವಿಸಿದೆ’ ಎಂದು ಪೋರ್ಬಂದರ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭಗೀರಥ್ಸಿನ್ಹಾ ಜಡೇಜಾ ಅವರು ತಿಳಿಸಿದ್ದಾರೆ.</p><p>‘ಹೆಲಿಕಾಪ್ಟರ್ ಪತನಗೊಂಡ ತಕ್ಷಣ ಬೆಂಕಿ ಹತ್ತಿಕೊಂಡಿತು. ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯ ಸಿಬ್ಬಂದಿ ಸಹಾಯದಿಂದ ಬೆಂಕಿ ನಂದಿಸಲಾಗಿದ್ದು, ಹೆಲಿಕಾಪ್ಟರ್ ಒಳಗಿದ್ದ ಇಬ್ಬರು ಪೈಲಟ್ ಮತ್ತು ಒಬ್ಬ ಸಿಬ್ಬಂದಿಯನ್ನು ಹೊರಗೆ ಸಾಗಿಸಿ ಆಸ್ಪತ್ರೆಗೆ ದಾಖಲಿಸಲಾಯಿತು’ ಎಂದು ಹೇಳಿದ್ದಾರೆ.</p><p>‘ಆಸ್ಪತ್ರೆಗೆ ದಾಖಲಿಸುವ ಮೊದಲೇ ಇಬ್ಬರು ಮೃತಪಟ್ಟಿದ್ದರು. ಇನ್ನೊಬ್ಬ ಸಿಬ್ಬಂದಿ ಆಸ್ಪತ್ರೆಯಲ್ಲಿ ಮೃತಪಟ್ಟರು’ ಎಂದು ಕಮಲ್ ಭಾಗ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಜೇಶ್ ಕನ್ಮಿಯಾ ಅವರು ಮಾಹಿತಿ ನೀಡಿದ್ದಾರೆ.</p><p>ಮೃತರನ್ನು ಕಮಾಂಡೆಂಟ್(ಜೆ.ಜಿ) ಸೌರಭ್, ಡೆಪ್ಯುಟಿ ಕಮಾಂಡೆಂಟ್ ಎಸ್.ಕೆ ಯಾದವ್ ಮತ್ತು ಪ್ರಧಾನ ನಾವಿಕ ಮನೋಜ್ ಎಂದು ಗುರುತಿಸಲಾಗಿದೆ.</p><p>ಅವಘಡಕ್ಕೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಐಸಿಜಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>