<p><strong>ನವದೆಹಲಿ:</strong> ‘ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಬೆಳೆಯುವ ಕಾಫಿ ವಿಶ್ವದಲ್ಲಿ ಪ್ರಸಿದ್ಧವಾಗುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹೇಳಿದ್ದಾರೆ.</p><p>ಮನದ ಮಾತು 127ನೇ ಆವೃತ್ತಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕ, ತಮಿಳುನಾಡು ಮತ್ತು ಕೇರಳದಲ್ಲಿ ಬೆಳೆಯುತ್ತಿರುವ ಕಾಫಿ ಹೆಚ್ಚು ಜನಪ್ರಿಯತೆ ಪಡೆಯುತ್ತಿದೆ. ಇದು ಭಾರತದ ಕಾಫಿಯನ್ನು<br>ಜಗತ್ತಿನಾದ್ಯಂತ ಗುರುತಿಸುವಂತೆ ಮಾಡಿದೆ. ಇತ್ತೀಚೆಗೆ ಈಶಾನ್ಯ ಭಾರತದಲ್ಲೂ ಕಾಫಿ ಬೆಳೆಯಲಾಗುತ್ತಿದೆ’ ಎಂದು ಹೇಳಿದ್ದಾರೆ.</p><p>ಕರ್ನಾಟಕದ ಚಿಕ್ಕಮಗಳೂರು, ಕೊಡಗು ಮತ್ತು ಹಾಸನ, ತಮಿಳುನಾಡಿನ ಪುಲ್ನಿ, ಶೆವರಾಯ್, ನೀಲಗಿರಿ ಮತ್ತು ಅಣ್ಣಾಮಲೈ, ಕೇರಳದ ವಯನಾಡ್, ತಿರುವಾಂಕೂರು ಮತ್ತು ಮಲಬಾರ್ನಲ್ಲಿ ಕಾಫಿ ಬೆಳೆಯಲಾಗುತ್ತಿದೆ ಎಂದಿದ್ದಾರೆ.</p><p>ಒಡಿಶಾದ ಕೊರಾ ಪುಟ್ ಕಾಫಿಯೂ ಜನಪ್ರಿಯತೆ ಪಡೆಯುತ್ತಿದೆ. ದೇಶದ ವಿವಿಧೆಡೆ ಬೆಳೆಯುವ ಕಾಫಿಯ ವೈವಿಧ್ಯ ನಿಜಕ್ಕೂ ಗಮನಾರ್ಹ ಎಂದು ಅವರು ಹೇಳಿದ್ದಾರೆ.</p><p>ಕೆಲವರು, ಕಾಫಿ ಕೃಷಿ ಮೇಲಿನ ಒಲವಿನ ಕಾರಣದಿಂದಾಗಿ ಖಾಸಗಿ ಕಂಪನಿಗಳಲ್ಲಿನ ತಮ್ಮ ಲಾಭದಾಯಕ ಉದ್ಯೋಗ ತೊರೆದು ಕಾಫಿ ಕೃಷಿಗೆ ಮುಂದಾಗಿ, ಯಶಸ್ವಿಯಾಗುತ್ತಿದ್ದಾರೆ. ಕಾಫಿ ಬೆಳೆಯಿಂದ ಹಲವಾರು ಮಹಿಳೆಯರ ಜೀವನವೂ ಹಸನಾಗಿದೆ ಎಂದು ಅವರು ಹೇಳಿದ್ದಾರೆ.</p><p>ದೇಶದ ಒಟ್ಟು ಕಾಫಿ ಉತ್ಪಾದನೆಯಲ್ಲಿ ಕರ್ನಾಟಕದ ಪಾಲು ಶೇ 70ರಷ್ಟಿದೆ. ನಂತರದ ಸ್ಥಾನದಲ್ಲಿ ಕೇರಳ ಮತ್ತು ತಮಿಳುನಾಡು ಇವೆ.</p>.<h2>ವಂದೇ ಮಾತರಂ ಗೀತೆಗೆ 150 ವರ್ಷ</h2><ul><li><p>ಬಂಕಿಮ್ ಚಂದ್ರ ಚಟ್ಟೋಪಾದ್ಯಾಯ ಅವರು ಬರೆದ ‘ವಂದೇ ಮಾತರಂ’ ಗೀತೆಗೆ 150 ವರ್ಷ ತುಂಬುತ್ತಿದೆ. ಈ ಗೀತೆಯು ದೇಶವನ್ನು ಅತ್ಯದ್ಬುತವಾಗಿ ಚಿತ್ರಿಸಿದೆ. ಈ ಗೀತೆಯ ಮೌಲ್ಯಗಳನ್ನು ನಾವು ಮುಂದುವರಿಸಿಕೊಂಡು ಹೋಗಬೇಕಾಗಿದೆ. ಇದಕ್ಕಾಗಿ ದೇಶದಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ.</p> </li><li><p> ಬಿಎಸ್ಎಫ್ ಮತ್ತು ಸಿಆರ್ಪಿಎಫ್ನಲ್ಲಿ ಮುಧೋಳ ತಳಿಯ ಶ್ವಾನಗಳು ಹೆಚ್ಚಿನ ಸಂಖ್ಯೆಯಲ್ಲಿ ಬಳಕೆಯಾಗುತ್ತಿರುವುದರ ಬಗ್ಗೆ ಪ್ರಧಾನಿ ಸಂತಸ ವ್ಯಕ್ತಪಡಿಸಿದ್ದಾರೆ.</p> </li><li><p> ಆಪರೇಷನ್ ಸಿಂಧೂರದ ಯಶಸ್ಸು ಹಾಗೂ ನಕ್ಸಲರ ಭಯ ಕಡಿಮೆಯಾಗಿರುವುದರಿಂದ ಈ ಬಾರಿ ದೇಶದಲ್ಲಿ ಜನರು ಹಬ್ಬಗಳನ್ನು ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ.</p> </li><li><p> ನಮ್ಮ ಬುಡಕಟ್ಟು ಸಮುದಾಯಗಳಲ್ಲಿ ಭಗವಾನ್ ಬಿರ್ಸಾ ಮುಂಡಾ ಮತ್ತು ಕೋಮರಾಮ್ ಭೀಮ್ ಅವರಂತೆಯೇ ಹಲವಾರು ಶ್ರೇಷ್ಠ ಸಾಧಕರು ಆಗಿ ಹೋಗಿದ್ದಾರೆ. ಈ ಎಲ್ಲ ಬಗ್ಗೆಯೂ ನೀವು ಖಂಡಿತವಾಗಿಯೂ ಓದಲೇಬೇಕು ಎಂದು ನಾನು ಒತ್ತಾಯಿಸುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ.</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಬೆಳೆಯುವ ಕಾಫಿ ವಿಶ್ವದಲ್ಲಿ ಪ್ರಸಿದ್ಧವಾಗುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹೇಳಿದ್ದಾರೆ.</p><p>ಮನದ ಮಾತು 127ನೇ ಆವೃತ್ತಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕ, ತಮಿಳುನಾಡು ಮತ್ತು ಕೇರಳದಲ್ಲಿ ಬೆಳೆಯುತ್ತಿರುವ ಕಾಫಿ ಹೆಚ್ಚು ಜನಪ್ರಿಯತೆ ಪಡೆಯುತ್ತಿದೆ. ಇದು ಭಾರತದ ಕಾಫಿಯನ್ನು<br>ಜಗತ್ತಿನಾದ್ಯಂತ ಗುರುತಿಸುವಂತೆ ಮಾಡಿದೆ. ಇತ್ತೀಚೆಗೆ ಈಶಾನ್ಯ ಭಾರತದಲ್ಲೂ ಕಾಫಿ ಬೆಳೆಯಲಾಗುತ್ತಿದೆ’ ಎಂದು ಹೇಳಿದ್ದಾರೆ.</p><p>ಕರ್ನಾಟಕದ ಚಿಕ್ಕಮಗಳೂರು, ಕೊಡಗು ಮತ್ತು ಹಾಸನ, ತಮಿಳುನಾಡಿನ ಪುಲ್ನಿ, ಶೆವರಾಯ್, ನೀಲಗಿರಿ ಮತ್ತು ಅಣ್ಣಾಮಲೈ, ಕೇರಳದ ವಯನಾಡ್, ತಿರುವಾಂಕೂರು ಮತ್ತು ಮಲಬಾರ್ನಲ್ಲಿ ಕಾಫಿ ಬೆಳೆಯಲಾಗುತ್ತಿದೆ ಎಂದಿದ್ದಾರೆ.</p><p>ಒಡಿಶಾದ ಕೊರಾ ಪುಟ್ ಕಾಫಿಯೂ ಜನಪ್ರಿಯತೆ ಪಡೆಯುತ್ತಿದೆ. ದೇಶದ ವಿವಿಧೆಡೆ ಬೆಳೆಯುವ ಕಾಫಿಯ ವೈವಿಧ್ಯ ನಿಜಕ್ಕೂ ಗಮನಾರ್ಹ ಎಂದು ಅವರು ಹೇಳಿದ್ದಾರೆ.</p><p>ಕೆಲವರು, ಕಾಫಿ ಕೃಷಿ ಮೇಲಿನ ಒಲವಿನ ಕಾರಣದಿಂದಾಗಿ ಖಾಸಗಿ ಕಂಪನಿಗಳಲ್ಲಿನ ತಮ್ಮ ಲಾಭದಾಯಕ ಉದ್ಯೋಗ ತೊರೆದು ಕಾಫಿ ಕೃಷಿಗೆ ಮುಂದಾಗಿ, ಯಶಸ್ವಿಯಾಗುತ್ತಿದ್ದಾರೆ. ಕಾಫಿ ಬೆಳೆಯಿಂದ ಹಲವಾರು ಮಹಿಳೆಯರ ಜೀವನವೂ ಹಸನಾಗಿದೆ ಎಂದು ಅವರು ಹೇಳಿದ್ದಾರೆ.</p><p>ದೇಶದ ಒಟ್ಟು ಕಾಫಿ ಉತ್ಪಾದನೆಯಲ್ಲಿ ಕರ್ನಾಟಕದ ಪಾಲು ಶೇ 70ರಷ್ಟಿದೆ. ನಂತರದ ಸ್ಥಾನದಲ್ಲಿ ಕೇರಳ ಮತ್ತು ತಮಿಳುನಾಡು ಇವೆ.</p>.<h2>ವಂದೇ ಮಾತರಂ ಗೀತೆಗೆ 150 ವರ್ಷ</h2><ul><li><p>ಬಂಕಿಮ್ ಚಂದ್ರ ಚಟ್ಟೋಪಾದ್ಯಾಯ ಅವರು ಬರೆದ ‘ವಂದೇ ಮಾತರಂ’ ಗೀತೆಗೆ 150 ವರ್ಷ ತುಂಬುತ್ತಿದೆ. ಈ ಗೀತೆಯು ದೇಶವನ್ನು ಅತ್ಯದ್ಬುತವಾಗಿ ಚಿತ್ರಿಸಿದೆ. ಈ ಗೀತೆಯ ಮೌಲ್ಯಗಳನ್ನು ನಾವು ಮುಂದುವರಿಸಿಕೊಂಡು ಹೋಗಬೇಕಾಗಿದೆ. ಇದಕ್ಕಾಗಿ ದೇಶದಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ.</p> </li><li><p> ಬಿಎಸ್ಎಫ್ ಮತ್ತು ಸಿಆರ್ಪಿಎಫ್ನಲ್ಲಿ ಮುಧೋಳ ತಳಿಯ ಶ್ವಾನಗಳು ಹೆಚ್ಚಿನ ಸಂಖ್ಯೆಯಲ್ಲಿ ಬಳಕೆಯಾಗುತ್ತಿರುವುದರ ಬಗ್ಗೆ ಪ್ರಧಾನಿ ಸಂತಸ ವ್ಯಕ್ತಪಡಿಸಿದ್ದಾರೆ.</p> </li><li><p> ಆಪರೇಷನ್ ಸಿಂಧೂರದ ಯಶಸ್ಸು ಹಾಗೂ ನಕ್ಸಲರ ಭಯ ಕಡಿಮೆಯಾಗಿರುವುದರಿಂದ ಈ ಬಾರಿ ದೇಶದಲ್ಲಿ ಜನರು ಹಬ್ಬಗಳನ್ನು ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ.</p> </li><li><p> ನಮ್ಮ ಬುಡಕಟ್ಟು ಸಮುದಾಯಗಳಲ್ಲಿ ಭಗವಾನ್ ಬಿರ್ಸಾ ಮುಂಡಾ ಮತ್ತು ಕೋಮರಾಮ್ ಭೀಮ್ ಅವರಂತೆಯೇ ಹಲವಾರು ಶ್ರೇಷ್ಠ ಸಾಧಕರು ಆಗಿ ಹೋಗಿದ್ದಾರೆ. ಈ ಎಲ್ಲ ಬಗ್ಗೆಯೂ ನೀವು ಖಂಡಿತವಾಗಿಯೂ ಓದಲೇಬೇಕು ಎಂದು ನಾನು ಒತ್ತಾಯಿಸುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ.</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>