<p><strong>ನವದೆಹಲಿ:</strong> ಪ್ರಜಾಪ್ರಭುತ್ವ ಹಾಗೂ ಜಾತಿ ವ್ಯವಸ್ಥೆ ಒಟ್ಟಿಗೆ ಇರಲು ಸಾಧ್ಯವೇ ಇಲ್ಲ ಎಂದು ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್ ಅವರು ದೆಹಲಿ ವಿಧಾನಸಭೆಯಲ್ಲಿ ನಡೆದ ಅಖಿಲ ಭಾರತ ಸ್ಪೀಕರ್ಗಳ ಸಮಾವೇಶದಲ್ಲಿ ಸೋಮವಾರ ಹೇಳಿದ್ದಾರೆ.</p>.ನ್ಯಾ.ವರ್ಮಾ ವಿರುದ್ಧ LS ಸ್ಪೀಕರ್ ರಚಿಸಿದ ವಿಚಾರಣಾ ಸಮಿತಿಯಲ್ಲಿ ರಾಜ್ಯದ ಇಬ್ಬರು.<p>ಸಮಾವೇಶದ ಎರಡನೇ ದಿನವಾದ ಇಂದು ಮುಖ್ಯ ಭಾಷಣ ಮಾಡಿದ ಅವರು, ಮರದಲ್ಲಿ ಬೆಳೆದು ಅದನ್ನೇ ಹಾನಿ ಮಾಡುವ ಕಳೆಯಂತೆ, ಜಾತಿ ವ್ಯವಸ್ಥೆಯು ಸಮಾಜಕ್ಕೆ ಕಂಟಕ ಎಂದು ನುಡಿದಿದ್ದಾರೆ. </p><p>ಲೋಕಸಭೆಯ ಮೊದಲ ಮಹಿಳಾ ಸ್ಪೀಕರ್ ಎನ್ನುವ ಅಗ್ಗಳಿಕೆ ಅವರದ್ದು. ಯುಪಿಎ ಸರ್ಕಾರದಲ್ಲಿ ಅವರು ಲೋಕಸಭಾ ಸ್ಪೀಕರ್ ಆಗಿದ್ದರು.</p><p>ಸಮಾನತೆ ಹಾಗೂ ಅಸಮಾನತೆ ಒಟ್ಟಿಗೆ ಇರಲು ಸಾಧ್ಯವಿಲ್ಲ. ಜಾತಿ ವ್ಯವಸ್ಥೆಯ ಸುತ್ತ ಸುತ್ತುವರೆದಿರುವ ಸಮಾನತೆಯ ಪ್ರಜಾಪ್ರಭುತ್ವದ ಹೊರಭಾಗದಲ್ಲಿ ಅಸಮಾನತೆ ಬೆಳೆಯುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.</p>.ಜಾತಿ ವ್ಯವಸ್ಥೆ ನಿಂತ ನೀರು: ಮುಖ್ಯಮಂತ್ರಿ ಸಿದ್ದರಾಮಯ್ಯ.<p>ಕಳೆಯು ತಾನು ಬೆಳೆದ ಮರವನ್ನೇ ಒಣಗಿಸಿ ತಾನು ಬೆಳೆಯುವಂತೆ, ಜಾತಿ ವ್ಯವಸ್ಥೆ ಸಮಾಜದೊಂದಿಗೆ ಅದೇ ರೀತಿ ಮಾಡುತ್ತದೆ. ಸಮಾನತೆ ಸ್ಥಾಪಿಸುವುದು ಪ್ರಜಾಪ್ರಭುತ್ವದ ಆತ್ಮ ಎಂದು ಹೇಳಿರುವ ಅವರು, ಅದಿಲ್ಲದೆ ಪ್ರಜಾಪ್ರಭುತ್ವಕ್ಕೆ ಜೀವ ಇರುವುದಿಲ್ಲ ಎಂದು ಹೇಳಿದ್ದಾರೆ.</p><p>ಬ್ರಿಟಿಷ್ ಆಳ್ವಿಕೆಯಲ್ಲಿ ಕೇಂದ್ರ ವಿಧಾನಸಭೆಗೆ ಆಯ್ಕೆಯಾದ ಮೊದಲ ಭಾರತೀಯ ವಿಠ್ಠಲಭಾಯಿ ಪಟೇಲ್ ಅವರ ಕೊಡುಗೆಯನ್ನು ಉಲ್ಲೇಖಿಸಿದ ಮೀರಾ ಕುಮಾರ್, ಲೋಕಸಭೆಯ ಅಧಿವೇಶನಗಳ ಅಧ್ಯಕ್ಷತೆ ವಹಿಸುವಾಗ ಹೋರಾಟಗಳು ಮತ್ತು ಅನುಭವವು ಅವರಿಗೆ ಸ್ಫೂರ್ತಿ ನೀಡಿತು ಎಂದು ಹೇಳಿದರು.</p>.ಸ್ಪೀಕರ್ ರಾಷ್ಟ್ರೀಯ ಸಮಿತಿಗೆ ಖಾದರ್ ನೇಮಕ.<p>ಪಟೇಲ್ ಅವರು ಕೇಂದ್ರ ವಿಧಾನಸಭೆಯ ಮೊದಲ ಭಾರತೀಯ ಸ್ಪೀಕರ್ ಆಗಿ ಆಯ್ಕೆಯಾದ ಶತಮಾನೋತ್ಸವದ ಅಂಗವಾಗಿ ದೆಹಲಿ ವಿಧಾನಸಭೆಯಲ್ಲಿ ಮೊದಲ ಬಾರಿಗೆ ಅಖಿಲ ಭಾರತ ಸ್ಪೀಕರ್ಗಳ ಸಮ್ಮೇಳನ ಆಯೋಜಿಸಲಾಗಿದೆ.</p><p>ಭಾನುವಾರ ಆರಂಭಗೊಂಡ ಎರಡು ದಿನಗಳ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಪಟೇಲ್ ಸ್ಮರಣಾರ್ಥ ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಿದರು.</p>.ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಕಟ್ಟುನಿಟ್ಟಿನ ಕ್ರಮಕ್ಕೆ ಸ್ಪೀಕರ್ ಖಾದರ್ ಸೂಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪ್ರಜಾಪ್ರಭುತ್ವ ಹಾಗೂ ಜಾತಿ ವ್ಯವಸ್ಥೆ ಒಟ್ಟಿಗೆ ಇರಲು ಸಾಧ್ಯವೇ ಇಲ್ಲ ಎಂದು ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್ ಅವರು ದೆಹಲಿ ವಿಧಾನಸಭೆಯಲ್ಲಿ ನಡೆದ ಅಖಿಲ ಭಾರತ ಸ್ಪೀಕರ್ಗಳ ಸಮಾವೇಶದಲ್ಲಿ ಸೋಮವಾರ ಹೇಳಿದ್ದಾರೆ.</p>.ನ್ಯಾ.ವರ್ಮಾ ವಿರುದ್ಧ LS ಸ್ಪೀಕರ್ ರಚಿಸಿದ ವಿಚಾರಣಾ ಸಮಿತಿಯಲ್ಲಿ ರಾಜ್ಯದ ಇಬ್ಬರು.<p>ಸಮಾವೇಶದ ಎರಡನೇ ದಿನವಾದ ಇಂದು ಮುಖ್ಯ ಭಾಷಣ ಮಾಡಿದ ಅವರು, ಮರದಲ್ಲಿ ಬೆಳೆದು ಅದನ್ನೇ ಹಾನಿ ಮಾಡುವ ಕಳೆಯಂತೆ, ಜಾತಿ ವ್ಯವಸ್ಥೆಯು ಸಮಾಜಕ್ಕೆ ಕಂಟಕ ಎಂದು ನುಡಿದಿದ್ದಾರೆ. </p><p>ಲೋಕಸಭೆಯ ಮೊದಲ ಮಹಿಳಾ ಸ್ಪೀಕರ್ ಎನ್ನುವ ಅಗ್ಗಳಿಕೆ ಅವರದ್ದು. ಯುಪಿಎ ಸರ್ಕಾರದಲ್ಲಿ ಅವರು ಲೋಕಸಭಾ ಸ್ಪೀಕರ್ ಆಗಿದ್ದರು.</p><p>ಸಮಾನತೆ ಹಾಗೂ ಅಸಮಾನತೆ ಒಟ್ಟಿಗೆ ಇರಲು ಸಾಧ್ಯವಿಲ್ಲ. ಜಾತಿ ವ್ಯವಸ್ಥೆಯ ಸುತ್ತ ಸುತ್ತುವರೆದಿರುವ ಸಮಾನತೆಯ ಪ್ರಜಾಪ್ರಭುತ್ವದ ಹೊರಭಾಗದಲ್ಲಿ ಅಸಮಾನತೆ ಬೆಳೆಯುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.</p>.ಜಾತಿ ವ್ಯವಸ್ಥೆ ನಿಂತ ನೀರು: ಮುಖ್ಯಮಂತ್ರಿ ಸಿದ್ದರಾಮಯ್ಯ.<p>ಕಳೆಯು ತಾನು ಬೆಳೆದ ಮರವನ್ನೇ ಒಣಗಿಸಿ ತಾನು ಬೆಳೆಯುವಂತೆ, ಜಾತಿ ವ್ಯವಸ್ಥೆ ಸಮಾಜದೊಂದಿಗೆ ಅದೇ ರೀತಿ ಮಾಡುತ್ತದೆ. ಸಮಾನತೆ ಸ್ಥಾಪಿಸುವುದು ಪ್ರಜಾಪ್ರಭುತ್ವದ ಆತ್ಮ ಎಂದು ಹೇಳಿರುವ ಅವರು, ಅದಿಲ್ಲದೆ ಪ್ರಜಾಪ್ರಭುತ್ವಕ್ಕೆ ಜೀವ ಇರುವುದಿಲ್ಲ ಎಂದು ಹೇಳಿದ್ದಾರೆ.</p><p>ಬ್ರಿಟಿಷ್ ಆಳ್ವಿಕೆಯಲ್ಲಿ ಕೇಂದ್ರ ವಿಧಾನಸಭೆಗೆ ಆಯ್ಕೆಯಾದ ಮೊದಲ ಭಾರತೀಯ ವಿಠ್ಠಲಭಾಯಿ ಪಟೇಲ್ ಅವರ ಕೊಡುಗೆಯನ್ನು ಉಲ್ಲೇಖಿಸಿದ ಮೀರಾ ಕುಮಾರ್, ಲೋಕಸಭೆಯ ಅಧಿವೇಶನಗಳ ಅಧ್ಯಕ್ಷತೆ ವಹಿಸುವಾಗ ಹೋರಾಟಗಳು ಮತ್ತು ಅನುಭವವು ಅವರಿಗೆ ಸ್ಫೂರ್ತಿ ನೀಡಿತು ಎಂದು ಹೇಳಿದರು.</p>.ಸ್ಪೀಕರ್ ರಾಷ್ಟ್ರೀಯ ಸಮಿತಿಗೆ ಖಾದರ್ ನೇಮಕ.<p>ಪಟೇಲ್ ಅವರು ಕೇಂದ್ರ ವಿಧಾನಸಭೆಯ ಮೊದಲ ಭಾರತೀಯ ಸ್ಪೀಕರ್ ಆಗಿ ಆಯ್ಕೆಯಾದ ಶತಮಾನೋತ್ಸವದ ಅಂಗವಾಗಿ ದೆಹಲಿ ವಿಧಾನಸಭೆಯಲ್ಲಿ ಮೊದಲ ಬಾರಿಗೆ ಅಖಿಲ ಭಾರತ ಸ್ಪೀಕರ್ಗಳ ಸಮ್ಮೇಳನ ಆಯೋಜಿಸಲಾಗಿದೆ.</p><p>ಭಾನುವಾರ ಆರಂಭಗೊಂಡ ಎರಡು ದಿನಗಳ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಪಟೇಲ್ ಸ್ಮರಣಾರ್ಥ ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಿದರು.</p>.ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಕಟ್ಟುನಿಟ್ಟಿನ ಕ್ರಮಕ್ಕೆ ಸ್ಪೀಕರ್ ಖಾದರ್ ಸೂಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>