<p><strong>ನವದೆಹಲಿ:</strong> ಭಾರತದ ಆರ್ಥಿಕತೆ ಐಸಿಯುನಲ್ಲಿದೆ. ಭಾರತೀಯರೆಲ್ಲರಿಗೂ ತಿಳಿದ ವಿಚಾರ ಇದಾಗಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಇಂದು (ಶುಕ್ರವಾರ) ಹೇಳಿದ್ದಾರೆ. </p><p>ಸಂಸತ್ ಆವರಣದಲ್ಲಿ ಪಿಟಿಐಗೆ ಪ್ರತಿಕ್ರಿಯಿಸಿದ ಮಹುವಾ, 'ಈ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶೇ 25ಕ್ಕಿಂತ ಹೆಚ್ಚು ಯುವಜನತೆ ನಿರುದ್ಯೋಗದಿಂದ ಬಳಲುತ್ತಿದ್ದಾರೆ. ಪತ್ರಿಕಾ ಸ್ವಾತಂತ್ರ್ಯ, ಉತ್ಪಾದನೆಯಂತಹ ಜಾಗತಿಕ ಸೂಚ್ಯಂಕದಲ್ಲೂ ನಿರಂತರ ಕುಸಿತು ಕಾಣುತ್ತಿದೆ' ಎಂದು ಹೇಳಿದ್ದಾರೆ. </p><p>'ನಾವು ಇದನ್ನು ಬಹಳ ಸಮಯದಿಂದ ಹೇಳುತ್ತಲೇ ಬಂದಿದ್ದೇವೆ. ಭಾರತದ ಆರ್ಥಿಕತೆ ಐಸಿಯುನಲ್ಲಿದೆ. ಆದರೆ ವಿರೋಧ ಪಕ್ಷಗಳು ಅದನ್ನು ಹೇಳಿದಾಗ ರಾಷ್ಟ್ರ ವಿರೋಧಿಗಳಾಗುತ್ತಾರೆ. ಈಗ ಪ್ರಧಾನಿ ಅವರ ಆಪ್ತ ಸ್ನೇಹಿತನೇ ಇದನ್ನು ಹೇಳಿದ್ದಾರೆ. ಹಾಗಾಗಿ ಈಗಾಲಾದರೂ ಪ್ರಧಾನಿ ಈ ಬಗ್ಗೆ ಹೆಚ್ಚಿನ ಗಮನ ವಹಿಸುವ ನಿರೀಕ್ಷೆಯಿದೆ' ಎಂದು ಹೇಳಿದ್ದಾರೆ. </p><p>ಭಾರತದ ವಿರುದ್ಧ ಅಮೆರಿಕದ ಅಧ್ಯಕ್ಷರು ಹೇಳಿಕೆ ನೀಡಿರುವುದು ಮತ್ತು ಸುಂಕ ಹಾಗೂ ದಂಡ ಪ್ರಹಾರ ಮಾಡಿರುವುದು ನಿಜಕ್ಕೂ ಅವಮಾನಕರ ಎಂದು ಅವರು ಹೇಳಿದ್ದಾರೆ. </p>.ಭಾರತದ್ದು 'ಸತ್ತ' ಆರ್ಥಿಕತೆ; ರಾಹುಲ್ ನಿಲುವನ್ನು ಒಪ್ಪಿಕೊಳ್ಳದ ತರೂರ್.ದೇಶದ ಆರ್ಥಿಕತೆ ಸತ್ತಿರುವುದು ಸತ್ಯ: ರಾಹುಲ್ ಗಾಂಧಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತದ ಆರ್ಥಿಕತೆ ಐಸಿಯುನಲ್ಲಿದೆ. ಭಾರತೀಯರೆಲ್ಲರಿಗೂ ತಿಳಿದ ವಿಚಾರ ಇದಾಗಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಇಂದು (ಶುಕ್ರವಾರ) ಹೇಳಿದ್ದಾರೆ. </p><p>ಸಂಸತ್ ಆವರಣದಲ್ಲಿ ಪಿಟಿಐಗೆ ಪ್ರತಿಕ್ರಿಯಿಸಿದ ಮಹುವಾ, 'ಈ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶೇ 25ಕ್ಕಿಂತ ಹೆಚ್ಚು ಯುವಜನತೆ ನಿರುದ್ಯೋಗದಿಂದ ಬಳಲುತ್ತಿದ್ದಾರೆ. ಪತ್ರಿಕಾ ಸ್ವಾತಂತ್ರ್ಯ, ಉತ್ಪಾದನೆಯಂತಹ ಜಾಗತಿಕ ಸೂಚ್ಯಂಕದಲ್ಲೂ ನಿರಂತರ ಕುಸಿತು ಕಾಣುತ್ತಿದೆ' ಎಂದು ಹೇಳಿದ್ದಾರೆ. </p><p>'ನಾವು ಇದನ್ನು ಬಹಳ ಸಮಯದಿಂದ ಹೇಳುತ್ತಲೇ ಬಂದಿದ್ದೇವೆ. ಭಾರತದ ಆರ್ಥಿಕತೆ ಐಸಿಯುನಲ್ಲಿದೆ. ಆದರೆ ವಿರೋಧ ಪಕ್ಷಗಳು ಅದನ್ನು ಹೇಳಿದಾಗ ರಾಷ್ಟ್ರ ವಿರೋಧಿಗಳಾಗುತ್ತಾರೆ. ಈಗ ಪ್ರಧಾನಿ ಅವರ ಆಪ್ತ ಸ್ನೇಹಿತನೇ ಇದನ್ನು ಹೇಳಿದ್ದಾರೆ. ಹಾಗಾಗಿ ಈಗಾಲಾದರೂ ಪ್ರಧಾನಿ ಈ ಬಗ್ಗೆ ಹೆಚ್ಚಿನ ಗಮನ ವಹಿಸುವ ನಿರೀಕ್ಷೆಯಿದೆ' ಎಂದು ಹೇಳಿದ್ದಾರೆ. </p><p>ಭಾರತದ ವಿರುದ್ಧ ಅಮೆರಿಕದ ಅಧ್ಯಕ್ಷರು ಹೇಳಿಕೆ ನೀಡಿರುವುದು ಮತ್ತು ಸುಂಕ ಹಾಗೂ ದಂಡ ಪ್ರಹಾರ ಮಾಡಿರುವುದು ನಿಜಕ್ಕೂ ಅವಮಾನಕರ ಎಂದು ಅವರು ಹೇಳಿದ್ದಾರೆ. </p>.ಭಾರತದ್ದು 'ಸತ್ತ' ಆರ್ಥಿಕತೆ; ರಾಹುಲ್ ನಿಲುವನ್ನು ಒಪ್ಪಿಕೊಳ್ಳದ ತರೂರ್.ದೇಶದ ಆರ್ಥಿಕತೆ ಸತ್ತಿರುವುದು ಸತ್ಯ: ರಾಹುಲ್ ಗಾಂಧಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>