<p><strong>ನವದೆಹಲಿ</strong>: ದ್ವಿಚಕ್ರ ವಾಹನ ತಯಾರಿಕಾ ಸಂಸ್ಥೆಗಳಾದ ಬಜಾಜ್, ಹೀರೊ, ಟಿವಿಎಸ್ ಕೊಲಂಬಿಯಾದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಭಾರತೀಯ ಕಂಪನಿಗಳು ನಾವೀನ್ಯದಿಂದ ಗೆಲುವು ಸಾಧಿಸಬಹುದೇ ವಿನಾ ಸ್ವಜನಪಕ್ಷಪಾತದಿಂದಲ್ಲ ಎನ್ನುವುದನ್ನು ಈ ಮೂಲಕ ತೋರಿಸುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.</p>.<p>ದಕ್ಷಿಣ ಅಮೆರಿಕದ ನಾಲ್ಕು ದೇಶಗಳ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು, ‘ಬಜಾಜ್ ಪಲ್ಸರ್ ಬೈಕ್ ಮುಂದೆ ನಿಂತಿರುವ ಫೋಟೊವನ್ನು ‘ಎಕ್ಸ್’ನಲ್ಲಿ ಶುಕ್ರವಾರ ಹಂಚಿಕೊಂಡಿದ್ದಾರೆ.</p>.<p>‘ಕೊಲಂಬಿಯಾದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಬಜಾಜ್, ಹೀರೊ, ಟಿವಿಎಸ್ ನೋಡಲು ಹೆಮ್ಮೆಯಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.</p>.<p>ಇಐಎ ವಿಶ್ವವಿದ್ಯಾಲಯದಲ್ಲಿ ವಿಚಾರಸಂಕಿರಣ ಉದ್ದೇಶಿಸಿ ಮಾತನಾಡಿದ ಅವರು, ಮೂರರಿಂದ ನಾಲ್ಕು ಉದ್ಯಮಿಗಳು ಇಡೀ ಅರ್ಥವ್ಯವಸ್ಥೆಯ ಮೇಲೆ ಹಿಡಿತ ಸಾಧಿಸುವ ಯೋಜನೆಯ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>‘ಭಾರತದ ಬಗ್ಗೆ ಆಶಾವಾದವಿದೆ. ಆದರೆ, ಅಲ್ಲಿನ ವ್ಯವಸ್ಥೆಯಲ್ಲಿ ದೋಷಗಳ ಎಳೆಗಳಿವೆ. ಅದರಿಂದ ಹೊರಬರದಂತೆ ಮಾಡುವ ಅಪಾಯಕಾರಿ ಧೋರಣೆಗಳಿದ್ದು, ದೇಶವು ಅವುಗಳಿಂದ ಹೊರಬರಲೇಬೇಕಿದೆ. ಮೊದಲನೇ ಅತಿದೊಡ್ಡ ಪಾಯಕಾರಿ ಧೋರಣೆ ಎಂದರೆ ಪ್ರಜಾಪ್ರಭುತ್ವದ ಮೇಲಿನ ದಾಳಿ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದ್ವಿಚಕ್ರ ವಾಹನ ತಯಾರಿಕಾ ಸಂಸ್ಥೆಗಳಾದ ಬಜಾಜ್, ಹೀರೊ, ಟಿವಿಎಸ್ ಕೊಲಂಬಿಯಾದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಭಾರತೀಯ ಕಂಪನಿಗಳು ನಾವೀನ್ಯದಿಂದ ಗೆಲುವು ಸಾಧಿಸಬಹುದೇ ವಿನಾ ಸ್ವಜನಪಕ್ಷಪಾತದಿಂದಲ್ಲ ಎನ್ನುವುದನ್ನು ಈ ಮೂಲಕ ತೋರಿಸುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.</p>.<p>ದಕ್ಷಿಣ ಅಮೆರಿಕದ ನಾಲ್ಕು ದೇಶಗಳ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು, ‘ಬಜಾಜ್ ಪಲ್ಸರ್ ಬೈಕ್ ಮುಂದೆ ನಿಂತಿರುವ ಫೋಟೊವನ್ನು ‘ಎಕ್ಸ್’ನಲ್ಲಿ ಶುಕ್ರವಾರ ಹಂಚಿಕೊಂಡಿದ್ದಾರೆ.</p>.<p>‘ಕೊಲಂಬಿಯಾದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಬಜಾಜ್, ಹೀರೊ, ಟಿವಿಎಸ್ ನೋಡಲು ಹೆಮ್ಮೆಯಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.</p>.<p>ಇಐಎ ವಿಶ್ವವಿದ್ಯಾಲಯದಲ್ಲಿ ವಿಚಾರಸಂಕಿರಣ ಉದ್ದೇಶಿಸಿ ಮಾತನಾಡಿದ ಅವರು, ಮೂರರಿಂದ ನಾಲ್ಕು ಉದ್ಯಮಿಗಳು ಇಡೀ ಅರ್ಥವ್ಯವಸ್ಥೆಯ ಮೇಲೆ ಹಿಡಿತ ಸಾಧಿಸುವ ಯೋಜನೆಯ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>‘ಭಾರತದ ಬಗ್ಗೆ ಆಶಾವಾದವಿದೆ. ಆದರೆ, ಅಲ್ಲಿನ ವ್ಯವಸ್ಥೆಯಲ್ಲಿ ದೋಷಗಳ ಎಳೆಗಳಿವೆ. ಅದರಿಂದ ಹೊರಬರದಂತೆ ಮಾಡುವ ಅಪಾಯಕಾರಿ ಧೋರಣೆಗಳಿದ್ದು, ದೇಶವು ಅವುಗಳಿಂದ ಹೊರಬರಲೇಬೇಕಿದೆ. ಮೊದಲನೇ ಅತಿದೊಡ್ಡ ಪಾಯಕಾರಿ ಧೋರಣೆ ಎಂದರೆ ಪ್ರಜಾಪ್ರಭುತ್ವದ ಮೇಲಿನ ದಾಳಿ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>