<p><strong>ಕೊಲಂಬೊ</strong>: ಪಶ್ಚಿಮ ಕರಾವಳಿಯ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ತೊಂದರೆಗೀಡಾಗಿ ಕಾಣೆಯಾಗಿದ್ದ ನಾಲ್ವರು ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ರಕ್ಷಿಸಿದೆ ಎಂದು ಸೋಮವಾರ ಅಧಿಕೃತ ಹೇಳಿಕೆ ತಿಳಿಸಿದೆ.</p><p>ಮುಂಬೈನ ಸಾಗರ ರಕ್ಷಣಾ ಸಮನ್ವಯ ಕೇಂದ್ರ (ಎಂಆರ್ಸಿಸಿ) ಸೂಚನೆ ನೀಡಿದ ನಂತರ ಶ್ರೀಲಂಕಾ ನೌಕಾಪಡೆಯು ನಡೆಸಿದ ಸಂಘಟಿತ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ(ಎಸ್ಎಆರ್) ಭಾನುವಾರ ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆ ತಿಳಿಸಿದೆ.</p><p>ಪ್ರತಿಕೂಲ ಹವಾಮಾನದಿಂದಾಗಿ ಜೂನ್ 29ರಂದು ಕಾಣೆಯಾಗಿದ್ದ ಭಾರತೀಯ ಮೀನುಗಾರಿಕಾ ದೋಣಿಯ ಬಗ್ಗೆ ಎಂಆರ್ಸಿಸಿ, ಶ್ರೀಲಂಕಾ ನೌಕಾಪಡೆಗೆ ಎಚ್ಚರಿಕೆ ನೀಡಿತ್ತು. ಎಲ್ಲ ಸಂವಹನ ಸಂಪರ್ಕಗಳನ್ನು ಬೋಟ್ ಕಳೆದುಕೊಂಡಿತ್ತು.</p><p>ಮೀನುಗಾರಿಕಾ ದೋಣಿ ಸಮುದ್ರದಲ್ಲಿ ತೊಂದರೆಗೆ ಒಳಗಾಗಿ ಚಿಲಾವ್ನಲ್ಲಿ ಸಿಲುಕಿದ್ದ ನಾಲ್ವರು ಭಾರತೀಯ ಮೀನುಗಾರರನ್ನು ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ. </p><p>ಭಾರತದ ಮಿನಿಕೋಯ್ ದ್ವೀಪದ ಮೀನುಗಾರರನ್ನು ಡಿಕೋವಿಟಾ ಬಂದರಿಗೆ ಸುರಕ್ಷಿತವಾಗಿ ಕರೆತರಲಾಯಿತು. ಅಲ್ಲಿ ಶ್ರೀಲಂಕಾ ನೌಕಾಪಡೆ ಮತ್ತು ಕರಾವಳಿ ಕಾವಲು ಪಡೆ ಅಗತ್ಯ ನೆರವನ್ನು ನೀಡಿದೆ.</p><p>ಕಳೆದ ಎರಡು ವಾರಗಳಲ್ಲಿ ಶ್ರೀಲಂಕಾ ನೌಕಾಪಡೆಯಿಂದ ಭಾರತೀಯ ಮೀನುಗಾರರನ್ನು ರಕ್ಷಿಸಿದ ಎರಡನೇ ಪ್ರಕರಣ ಇದಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ</strong>: ಪಶ್ಚಿಮ ಕರಾವಳಿಯ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ತೊಂದರೆಗೀಡಾಗಿ ಕಾಣೆಯಾಗಿದ್ದ ನಾಲ್ವರು ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ರಕ್ಷಿಸಿದೆ ಎಂದು ಸೋಮವಾರ ಅಧಿಕೃತ ಹೇಳಿಕೆ ತಿಳಿಸಿದೆ.</p><p>ಮುಂಬೈನ ಸಾಗರ ರಕ್ಷಣಾ ಸಮನ್ವಯ ಕೇಂದ್ರ (ಎಂಆರ್ಸಿಸಿ) ಸೂಚನೆ ನೀಡಿದ ನಂತರ ಶ್ರೀಲಂಕಾ ನೌಕಾಪಡೆಯು ನಡೆಸಿದ ಸಂಘಟಿತ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ(ಎಸ್ಎಆರ್) ಭಾನುವಾರ ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆ ತಿಳಿಸಿದೆ.</p><p>ಪ್ರತಿಕೂಲ ಹವಾಮಾನದಿಂದಾಗಿ ಜೂನ್ 29ರಂದು ಕಾಣೆಯಾಗಿದ್ದ ಭಾರತೀಯ ಮೀನುಗಾರಿಕಾ ದೋಣಿಯ ಬಗ್ಗೆ ಎಂಆರ್ಸಿಸಿ, ಶ್ರೀಲಂಕಾ ನೌಕಾಪಡೆಗೆ ಎಚ್ಚರಿಕೆ ನೀಡಿತ್ತು. ಎಲ್ಲ ಸಂವಹನ ಸಂಪರ್ಕಗಳನ್ನು ಬೋಟ್ ಕಳೆದುಕೊಂಡಿತ್ತು.</p><p>ಮೀನುಗಾರಿಕಾ ದೋಣಿ ಸಮುದ್ರದಲ್ಲಿ ತೊಂದರೆಗೆ ಒಳಗಾಗಿ ಚಿಲಾವ್ನಲ್ಲಿ ಸಿಲುಕಿದ್ದ ನಾಲ್ವರು ಭಾರತೀಯ ಮೀನುಗಾರರನ್ನು ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ. </p><p>ಭಾರತದ ಮಿನಿಕೋಯ್ ದ್ವೀಪದ ಮೀನುಗಾರರನ್ನು ಡಿಕೋವಿಟಾ ಬಂದರಿಗೆ ಸುರಕ್ಷಿತವಾಗಿ ಕರೆತರಲಾಯಿತು. ಅಲ್ಲಿ ಶ್ರೀಲಂಕಾ ನೌಕಾಪಡೆ ಮತ್ತು ಕರಾವಳಿ ಕಾವಲು ಪಡೆ ಅಗತ್ಯ ನೆರವನ್ನು ನೀಡಿದೆ.</p><p>ಕಳೆದ ಎರಡು ವಾರಗಳಲ್ಲಿ ಶ್ರೀಲಂಕಾ ನೌಕಾಪಡೆಯಿಂದ ಭಾರತೀಯ ಮೀನುಗಾರರನ್ನು ರಕ್ಷಿಸಿದ ಎರಡನೇ ಪ್ರಕರಣ ಇದಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>