<p><strong>ಹೈದರಾಬಾದ್:</strong> ‘ಭಾರತದ ಕಾನೂನು ವ್ಯವಸ್ಥೆಯು ಸದ್ಯ ವಿಶಿಷ್ಟವಾದ ಸವಾಲನ್ನು ಎದುರಿಸುತ್ತಿದೆ ಮತ್ತು ಕೆಲ ಪ್ರಕರಣಗಳು ದಶಕಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಯುತ್ತಿವೆ’ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಶನಿವಾರ ಹೇಳಿದ್ದಾರೆ.</p><p>ಹೈದರಾಬಾದ್ನ ನಲ್ಸಾರ್ ಕಾನೂನು ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಭಾಷಣ ಮಾಡಿ ಅವರು ಮಾತನಾಡಿದರು.</p><p>‘ಕೆಲವೊಂದು ಪ್ರಕರಣಗಳಲ್ಲಿ ವಿಚಾರಣಾಧೀನ ಕೈದಿ ಹಲವು ವರ್ಷಗಳ ಸೆರೆವಾಸಗಳ ನಂತರ ನಿರಪರಾಧಿ ಎಂದು ಸಾಬೀತಾಗುತ್ತದೆ. ನಾವು ಇಂದು ಎದುರಿಸುತ್ತಿರುವ ಇಂಥ ಹಲವು ಸಮಸ್ಯೆಗಳನ್ನು ಪರಿಹರಿಸಲು ನಮ್ಮ ಪ್ರತಿಭೆ ನೆರವಾಗಲಿದೆ’ ಎಂದಿದ್ದಾರೆ.</p><p>‘ನಿರಪರಾಧಿ ತಪ್ಪಿತಸ್ಥನಾಗುತ್ತಾನೆ ಹಾಗೂ ತಪ್ಪಿತಸ್ಥ ಮುಕ್ತವಾಗಿ ಓಡಾಡಿಕೊಂಡಿರುತ್ತಾನೆ. ನಮ್ಮ ಅವ್ಯವಸ್ಥಿತ ಕಾನೂನಿನ ವಿರೋಧಾಭಾಸಗಳಿವು. ನಮ್ಮ ಕಾನೂನು ವ್ಯವಸ್ಥೆಯನ್ನು ಸರಿಪಡಿಸಬೇಕಾದ ಜರೂರು ಈಗ ಎದುರಾಗಿದೆ. ಈ ಸವಾಲಿನ ಕುರಿತು ನಮ್ಮ ನಾಗರಿಕರು ಧ್ವನಿ ಎತ್ತಲಿದ್ದಾರೆ ಎಂಬ ಆಶಾಭಾವ ನನ್ನದು’ ಎಂಬ ಅಮೆರಿಕದ ಮುಖ್ಯ ನ್ಯಾಯಮೂರ್ತಿ ಜೆಡ್ ಎಸ್. ರಾಕಾಫ್ ಅವರ ಮಾತುಗಳನ್ನು ನ್ಯಾ. ಗವಾಯಿ ಉಲ್ಲೇಖಿಸಿದರು.</p><p>‘ಕಾನೂನು ಪದವಿ ಪಡೆದ ನಮ್ಮ ವಿದ್ಯಾರ್ಥಿಗಳು ಸಮಗ್ರತೆಗಾಗಿ ಒಬ್ಬ ಉತ್ತಮ ಮಾರ್ಗದರ್ಶಕನನ್ನು ಹುಡುಕಿಕೊಳ್ಳಬೇಕೇ ಹೊರತು ತಮ್ಮ ಶಕ್ತಿ ಪ್ರದರ್ಶನಕ್ಕಲ್ಲ. ಹಾಗೆಯೇ ಕುಟುಂಬದವರ ಮೇಲೆ ಆರ್ಥಿಕ ಒತ್ತಡ ಸೃಷ್ಟಿಸುವ ಬದಲು, ಶಿಷ್ಯವೇತನ ಬಳಸಿಕೊಂಡು ವಿದೇಶಗಳಿಗೆ ಹೋಗಿ ಕಲಿಯಿರಿ’ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ.</p><p>ಮುಖ್ಯಮಂತ್ರಿ ಎ. ರೇವಂತ ರೆಡ್ಡಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ.ಎಸ್. ನರಸಿಂಹ ರಾವ್, ತೆಲಂಗಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸುಜೊಯ್ ಪೌಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ‘ಭಾರತದ ಕಾನೂನು ವ್ಯವಸ್ಥೆಯು ಸದ್ಯ ವಿಶಿಷ್ಟವಾದ ಸವಾಲನ್ನು ಎದುರಿಸುತ್ತಿದೆ ಮತ್ತು ಕೆಲ ಪ್ರಕರಣಗಳು ದಶಕಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಯುತ್ತಿವೆ’ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಶನಿವಾರ ಹೇಳಿದ್ದಾರೆ.</p><p>ಹೈದರಾಬಾದ್ನ ನಲ್ಸಾರ್ ಕಾನೂನು ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಭಾಷಣ ಮಾಡಿ ಅವರು ಮಾತನಾಡಿದರು.</p><p>‘ಕೆಲವೊಂದು ಪ್ರಕರಣಗಳಲ್ಲಿ ವಿಚಾರಣಾಧೀನ ಕೈದಿ ಹಲವು ವರ್ಷಗಳ ಸೆರೆವಾಸಗಳ ನಂತರ ನಿರಪರಾಧಿ ಎಂದು ಸಾಬೀತಾಗುತ್ತದೆ. ನಾವು ಇಂದು ಎದುರಿಸುತ್ತಿರುವ ಇಂಥ ಹಲವು ಸಮಸ್ಯೆಗಳನ್ನು ಪರಿಹರಿಸಲು ನಮ್ಮ ಪ್ರತಿಭೆ ನೆರವಾಗಲಿದೆ’ ಎಂದಿದ್ದಾರೆ.</p><p>‘ನಿರಪರಾಧಿ ತಪ್ಪಿತಸ್ಥನಾಗುತ್ತಾನೆ ಹಾಗೂ ತಪ್ಪಿತಸ್ಥ ಮುಕ್ತವಾಗಿ ಓಡಾಡಿಕೊಂಡಿರುತ್ತಾನೆ. ನಮ್ಮ ಅವ್ಯವಸ್ಥಿತ ಕಾನೂನಿನ ವಿರೋಧಾಭಾಸಗಳಿವು. ನಮ್ಮ ಕಾನೂನು ವ್ಯವಸ್ಥೆಯನ್ನು ಸರಿಪಡಿಸಬೇಕಾದ ಜರೂರು ಈಗ ಎದುರಾಗಿದೆ. ಈ ಸವಾಲಿನ ಕುರಿತು ನಮ್ಮ ನಾಗರಿಕರು ಧ್ವನಿ ಎತ್ತಲಿದ್ದಾರೆ ಎಂಬ ಆಶಾಭಾವ ನನ್ನದು’ ಎಂಬ ಅಮೆರಿಕದ ಮುಖ್ಯ ನ್ಯಾಯಮೂರ್ತಿ ಜೆಡ್ ಎಸ್. ರಾಕಾಫ್ ಅವರ ಮಾತುಗಳನ್ನು ನ್ಯಾ. ಗವಾಯಿ ಉಲ್ಲೇಖಿಸಿದರು.</p><p>‘ಕಾನೂನು ಪದವಿ ಪಡೆದ ನಮ್ಮ ವಿದ್ಯಾರ್ಥಿಗಳು ಸಮಗ್ರತೆಗಾಗಿ ಒಬ್ಬ ಉತ್ತಮ ಮಾರ್ಗದರ್ಶಕನನ್ನು ಹುಡುಕಿಕೊಳ್ಳಬೇಕೇ ಹೊರತು ತಮ್ಮ ಶಕ್ತಿ ಪ್ರದರ್ಶನಕ್ಕಲ್ಲ. ಹಾಗೆಯೇ ಕುಟುಂಬದವರ ಮೇಲೆ ಆರ್ಥಿಕ ಒತ್ತಡ ಸೃಷ್ಟಿಸುವ ಬದಲು, ಶಿಷ್ಯವೇತನ ಬಳಸಿಕೊಂಡು ವಿದೇಶಗಳಿಗೆ ಹೋಗಿ ಕಲಿಯಿರಿ’ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ.</p><p>ಮುಖ್ಯಮಂತ್ರಿ ಎ. ರೇವಂತ ರೆಡ್ಡಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ.ಎಸ್. ನರಸಿಂಹ ರಾವ್, ತೆಲಂಗಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸುಜೊಯ್ ಪೌಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>