ಕಠ್ಮಂಡು: ಕೈಲಾಸ– ಮಾನಸ ಸರೋವರ ಯಾತ್ರೆಯಿಂದ ಹಿಂದಿರುಗುತ್ತಿದ್ದ ಭಾರತದ 175 ಯಾತ್ರಿಗಳು ಎರಡನೇ ದಿನವೂ ನೇಪಾಳದಲ್ಲೇ ಸಿಲುಕಿಕೊಂಡಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ವಾಣಿಜ್ಯ ಉದ್ದೇಶದ ವಿಮಾನಗಳು ಹಾರಾಟ ನಡೆಸಿಲ್ಲ. ಆದ್ದರಿಂದ ಯಾತ್ರಿಗಳು ಸ್ವದೇಶಕ್ಕೆ ವಾಪಸಾಗಲು ಸಾಧ್ಯವಾಗಲಿಲ್ಲ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.