<p><strong>ನವದೆಹಲಿ</strong>: ಸರಕು ಸಾಗಣೆ ಹಡಗುಗಳ ಮೇಲೆ ಈಚೆಗೆ ನಡೆದ ದಾಳಿಯ ಕಾರಣದಿಂದ ಭಾರತೀಯ ನೌಕಾಪಡೆಯು ಅರಬ್ಬಿ ಸಮುದ್ರ ಮತ್ತು ಏಡನ್ ಕೊಲ್ಲಿಯಲ್ಲಿ ಯುದ್ಧನೌಕೆಗಳನ್ನು ನಿಯೋಜಿಸಿ ಕಣ್ಗಾವಲು ಗಣನೀಯವಾಗಿ ಹೆಚ್ಚಿಸಿದೆ. </p>.<p>ವಿಶಾಲ ವ್ಯಾಪ್ತಿಯ ಕಣ್ಗಾವಲಿಗೆ ಗಸ್ತು ವಿಮಾನ ಮತ್ತು ಡ್ರೋನ್ಗಳನ್ನು ನಿಯೋಜಿಸಿದ್ದು, ಕರಾವಳಿ ಕಾವಲು ಪಡೆಗಳ ಜತೆ ಸಮನ್ವಯ ಸಾಧಿಸಿ ಒಟ್ಟಾರೆ ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗಿದೆ.</p>.<p>‘ಕಳೆದ ಕೆಲವು ವಾರಗಳಲ್ಲಿ ಕೆಂಪು ಸಮುದ್ರ, ಏಡನ್ ಕೊಲ್ಲಿ ಮತ್ತು ಮಧ್ಯ/ಉತ್ತರ ಅರಬ್ಬಿ ಸಮುದ್ರದಲ್ಲಿ ಅಂತರರಾಷ್ಟ್ರೀಯ ಹಡಗು ಮಾರ್ಗಗಳ ಮೂಲಕ ಸಾಗುವ ಸರಕು ಸಾಗಣೆ ಹಡಗುಗಳ ಭದ್ರತೆಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಿವೆ’ ಎಂದು ನೌಕಾಪಡೆ ಪ್ರಕಟಣೆ ತಿಳಿಸಿದೆ.</p>.<p>‘ಹೀಗಾಗಿ, ಯುದ್ಧನೌಕೆಗಳನ್ನು ಒಳಗೊಂಡ ಕಾರ್ಯಪಡೆಯನ್ನು ನಿಯೋಜಿಸಲಾಗಿದೆ. ಸರಕು ಸಾಗಣೆ ಹಡಗುಗಳ ಮೇಲೆ ಯಾವುದೇ ದಾಳಿ ನಡೆದರೆ ತಕ್ಷಣವೇ ನೆರವಿಗೆ ಧಾವಿಸುವಂತೆ ಸೂಚಿಸಲಾಗಿದೆ. ಹಡಗುಗಳ ಸುರಕ್ಷತೆ ಖಾತರಿಪಡಿಸಿಕೊಳ್ಳಲು ನೌಕಾಪಡೆ ಬದ್ಧವಾಗಿದೆ’ ಎಂದು ಹೇಳಿದೆ.</p>.<p>ಸೌದಿ ಅರೇಬಿಯಾದಿಂದ ಮಂಗಳೂರಿಗೆ ಕಚ್ಚಾ ತೈಲ ಸಾಗಿಸುತ್ತಿದ್ದ ಎಂವಿ ಚೆಮ್ ಪ್ಲುಟೊ ಹಡಗಿನ ಮೇಲೆ ಅರಬ್ಬಿ ಸಮುದ್ರದಲ್ಲಿ ಡಿ.23ರಂದು ಡ್ರೋನ್ ದಾಳಿ ನಡೆದಿತ್ತು. ಭಾರತಕ್ಕೆ ಬರುತ್ತಿದ್ದ ಎಂವಿ ಸಾಯಿಬಾಬಾ ಹಡಗನ್ನು ಗುರಿಯಾಗಿಸಿ ದಕ್ಷಿಣ ಕೆಂಪು ಸಮುದ್ರದಲ್ಲಿ ಹುತಿ ಬಂಡುಕೋರರು ದಾಳಿ ನಡೆಸಿದ್ದರು. </p>.<p>ಇಸ್ರೇಲ್-ಹಮಾಸ್ ಸಂಘರ್ಷ ಶುರುವಾದ ಬಳಿಕ ಇರಾನ್ ಬೆಂಬಲಿತ ಹುತಿ ಬಂಡುಕೋರರು ಕೆಂಪು ಸಮುದ್ರದಲ್ಲಿ ಹಡಗುಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸರಕು ಸಾಗಣೆ ಹಡಗುಗಳ ಮೇಲೆ ಈಚೆಗೆ ನಡೆದ ದಾಳಿಯ ಕಾರಣದಿಂದ ಭಾರತೀಯ ನೌಕಾಪಡೆಯು ಅರಬ್ಬಿ ಸಮುದ್ರ ಮತ್ತು ಏಡನ್ ಕೊಲ್ಲಿಯಲ್ಲಿ ಯುದ್ಧನೌಕೆಗಳನ್ನು ನಿಯೋಜಿಸಿ ಕಣ್ಗಾವಲು ಗಣನೀಯವಾಗಿ ಹೆಚ್ಚಿಸಿದೆ. </p>.<p>ವಿಶಾಲ ವ್ಯಾಪ್ತಿಯ ಕಣ್ಗಾವಲಿಗೆ ಗಸ್ತು ವಿಮಾನ ಮತ್ತು ಡ್ರೋನ್ಗಳನ್ನು ನಿಯೋಜಿಸಿದ್ದು, ಕರಾವಳಿ ಕಾವಲು ಪಡೆಗಳ ಜತೆ ಸಮನ್ವಯ ಸಾಧಿಸಿ ಒಟ್ಟಾರೆ ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗಿದೆ.</p>.<p>‘ಕಳೆದ ಕೆಲವು ವಾರಗಳಲ್ಲಿ ಕೆಂಪು ಸಮುದ್ರ, ಏಡನ್ ಕೊಲ್ಲಿ ಮತ್ತು ಮಧ್ಯ/ಉತ್ತರ ಅರಬ್ಬಿ ಸಮುದ್ರದಲ್ಲಿ ಅಂತರರಾಷ್ಟ್ರೀಯ ಹಡಗು ಮಾರ್ಗಗಳ ಮೂಲಕ ಸಾಗುವ ಸರಕು ಸಾಗಣೆ ಹಡಗುಗಳ ಭದ್ರತೆಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಿವೆ’ ಎಂದು ನೌಕಾಪಡೆ ಪ್ರಕಟಣೆ ತಿಳಿಸಿದೆ.</p>.<p>‘ಹೀಗಾಗಿ, ಯುದ್ಧನೌಕೆಗಳನ್ನು ಒಳಗೊಂಡ ಕಾರ್ಯಪಡೆಯನ್ನು ನಿಯೋಜಿಸಲಾಗಿದೆ. ಸರಕು ಸಾಗಣೆ ಹಡಗುಗಳ ಮೇಲೆ ಯಾವುದೇ ದಾಳಿ ನಡೆದರೆ ತಕ್ಷಣವೇ ನೆರವಿಗೆ ಧಾವಿಸುವಂತೆ ಸೂಚಿಸಲಾಗಿದೆ. ಹಡಗುಗಳ ಸುರಕ್ಷತೆ ಖಾತರಿಪಡಿಸಿಕೊಳ್ಳಲು ನೌಕಾಪಡೆ ಬದ್ಧವಾಗಿದೆ’ ಎಂದು ಹೇಳಿದೆ.</p>.<p>ಸೌದಿ ಅರೇಬಿಯಾದಿಂದ ಮಂಗಳೂರಿಗೆ ಕಚ್ಚಾ ತೈಲ ಸಾಗಿಸುತ್ತಿದ್ದ ಎಂವಿ ಚೆಮ್ ಪ್ಲುಟೊ ಹಡಗಿನ ಮೇಲೆ ಅರಬ್ಬಿ ಸಮುದ್ರದಲ್ಲಿ ಡಿ.23ರಂದು ಡ್ರೋನ್ ದಾಳಿ ನಡೆದಿತ್ತು. ಭಾರತಕ್ಕೆ ಬರುತ್ತಿದ್ದ ಎಂವಿ ಸಾಯಿಬಾಬಾ ಹಡಗನ್ನು ಗುರಿಯಾಗಿಸಿ ದಕ್ಷಿಣ ಕೆಂಪು ಸಮುದ್ರದಲ್ಲಿ ಹುತಿ ಬಂಡುಕೋರರು ದಾಳಿ ನಡೆಸಿದ್ದರು. </p>.<p>ಇಸ್ರೇಲ್-ಹಮಾಸ್ ಸಂಘರ್ಷ ಶುರುವಾದ ಬಳಿಕ ಇರಾನ್ ಬೆಂಬಲಿತ ಹುತಿ ಬಂಡುಕೋರರು ಕೆಂಪು ಸಮುದ್ರದಲ್ಲಿ ಹಡಗುಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>