<p><strong>ನವದೆಹಲಿ:</strong> ಕ್ಷಿಪಣಿ ಧ್ವಂಸಕ ಐಎನ್ಎಸ್ ಸೂರತ್ ಯುದ್ಧನೌಕೆಯಿಂದ ಮಧ್ಯಮ ಶ್ರೇಣಿಯ ನೆಲದಿಂದ ಆಕಾಶಕ್ಕೆ ಚಿಮ್ಮುವ (ಸರ್ಫೇಸ್ ಟು ಏರ್) ಕ್ಷಿಪಣಿಯನ್ನು ಯಶಸ್ವಿ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ. </p><p>ಈ ಕ್ಷಿಪಣಿಯು ಸುಮಾರು 70 ಕಿ.ಮೀ. ವ್ಯಾಪ್ತಿಯನ್ನು ಹೊಂದಿರುತ್ತದೆ ಎಂದು ತಿಳಿದು ಬಂದಿದೆ. </p><p>ಈ ಸಂಬಂಧ ಭಾರತೀಯ ನೌಕಪಡೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊವನ್ನು ಹಂಚಿಕೊಂಡಿದೆ. </p><p>ಸ್ವದೇಶಿ ಮಾರ್ಗದರ್ಶಿ ಐಎನ್ಎಸ್ ಸೂರತ್ ಯುದ್ಧನೌಕೆಯಿಂದ ಕ್ಷಿಪಣಿ ನಿಖರ ಗುರಿ ಸಾಧಿಸುವುದರೊಂದಿಗೆ ಭಾರತವು ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲವೃದ್ಧಿಸಿಕೊಂಡಿದೆ ಎಂದು ಹೇಳಿದೆ. </p><p>ಆತ್ಮನಿರ್ಭರ ಭಾರತದ ಈ ಸಾಧನೆಯು ದೇಶೀಯವಾಗಿ ಯುದ್ಧನೌಕೆ ವಿನ್ಯಾಸ, ಅಭಿವೃದ್ಧಿ ಮತ್ತು ಕಾರ್ಯಾಚರಣೆಗಳಲ್ಲಿ ಭಾರತದ ಶಕ್ತಿ ಪ್ರದರ್ಶಿಸುತ್ತದೆ. ರಕ್ಷಣಾ ಉತ್ಪಾದನೆಯಲ್ಲಿ ಸ್ವಾವಲಂಬನೆಯತ್ತ ದೇಶದ ಬದ್ಧತೆಯನ್ನು ಪ್ರದರ್ಶಿಸುತ್ತದೆ ಎಂದು ಹೇಳಿದೆ. </p>.Explainer: 1960ರ ಸಿಂಧೂ ಜಲ ಒಪ್ಪಂದ ಅಮಾನತು; ಪಾಕ್ ಮೇಲೆ ಪರಿಣಾಮ ಏನು?.ಉಗ್ರರಿಗೆ ಕಲ್ಪನೆಗೂ ಮೀರಿದ ಶಿಕ್ಷೆ: ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕ್ಷಿಪಣಿ ಧ್ವಂಸಕ ಐಎನ್ಎಸ್ ಸೂರತ್ ಯುದ್ಧನೌಕೆಯಿಂದ ಮಧ್ಯಮ ಶ್ರೇಣಿಯ ನೆಲದಿಂದ ಆಕಾಶಕ್ಕೆ ಚಿಮ್ಮುವ (ಸರ್ಫೇಸ್ ಟು ಏರ್) ಕ್ಷಿಪಣಿಯನ್ನು ಯಶಸ್ವಿ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ. </p><p>ಈ ಕ್ಷಿಪಣಿಯು ಸುಮಾರು 70 ಕಿ.ಮೀ. ವ್ಯಾಪ್ತಿಯನ್ನು ಹೊಂದಿರುತ್ತದೆ ಎಂದು ತಿಳಿದು ಬಂದಿದೆ. </p><p>ಈ ಸಂಬಂಧ ಭಾರತೀಯ ನೌಕಪಡೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊವನ್ನು ಹಂಚಿಕೊಂಡಿದೆ. </p><p>ಸ್ವದೇಶಿ ಮಾರ್ಗದರ್ಶಿ ಐಎನ್ಎಸ್ ಸೂರತ್ ಯುದ್ಧನೌಕೆಯಿಂದ ಕ್ಷಿಪಣಿ ನಿಖರ ಗುರಿ ಸಾಧಿಸುವುದರೊಂದಿಗೆ ಭಾರತವು ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲವೃದ್ಧಿಸಿಕೊಂಡಿದೆ ಎಂದು ಹೇಳಿದೆ. </p><p>ಆತ್ಮನಿರ್ಭರ ಭಾರತದ ಈ ಸಾಧನೆಯು ದೇಶೀಯವಾಗಿ ಯುದ್ಧನೌಕೆ ವಿನ್ಯಾಸ, ಅಭಿವೃದ್ಧಿ ಮತ್ತು ಕಾರ್ಯಾಚರಣೆಗಳಲ್ಲಿ ಭಾರತದ ಶಕ್ತಿ ಪ್ರದರ್ಶಿಸುತ್ತದೆ. ರಕ್ಷಣಾ ಉತ್ಪಾದನೆಯಲ್ಲಿ ಸ್ವಾವಲಂಬನೆಯತ್ತ ದೇಶದ ಬದ್ಧತೆಯನ್ನು ಪ್ರದರ್ಶಿಸುತ್ತದೆ ಎಂದು ಹೇಳಿದೆ. </p>.Explainer: 1960ರ ಸಿಂಧೂ ಜಲ ಒಪ್ಪಂದ ಅಮಾನತು; ಪಾಕ್ ಮೇಲೆ ಪರಿಣಾಮ ಏನು?.ಉಗ್ರರಿಗೆ ಕಲ್ಪನೆಗೂ ಮೀರಿದ ಶಿಕ್ಷೆ: ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>