ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೌಕಾಪಡೆ ಕಮಾಂಡರ್ ಅಭಿಲಾಷ್ ಟಾಮಿ ರಕ್ಷಣೆ

Last Updated 24 ಸೆಪ್ಟೆಂಬರ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯನೌಕಾಪಡೆ ಕಮಾಂಡರ್ ಅಭಿಲಾಷ್ ಟಾಮಿ ಅವರನ್ನುಹಿಂದೂಮಹಾಸಾಗರದ ದಕ್ಷಿಣ ಭಾಗದಲ್ಲಿ ಸೋಮವಾರ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಸ್ಟ್ರೇಲಿಯಾದ ರಕ್ಷಣಾ ಸಹಕಾರ ಕೇಂದ್ರ, ರಕ್ಷಣಾ ಇಲಾಖೆ ಹಾಗೂಭಾರತೀಯ ನೌಕಾಪಡೆ ಜತೆಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದವು. ಇದಕ್ಕಾಗಿ ಭಾರತದ ಪಿ–8ಐ ಸರ್ವೇಕ್ಷಣಾ ವಿಮಾನವನ್ನು ನಿಯೋಜಿಸಲಾಗಿತ್ತು.

ಒಬ್ಬಂಟಿಯಾಗಿ ವಿಶ್ವ ಪರ್ಯಟನೆ ನಡೆಸುವ ‘ಗೋಲ್ಡನ್ ಗ್ಲೋಬ್ ರೇಸ್’ ಸ್ಪರ್ಧೆಯಲ್ಲಿ ಟಾಮಿ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. ಮೂರು ದಿನಗಳ ಹಿಂದೆ ಅವರ ಹಾಯಿದೋಣಿ ಹಾನಿಗೊಳಗಾಗಿ ಅವರು ಸಮುದ್ರದ ಮಧ್ಯಭಾಗದಲ್ಲಿ ಸಿಲುಕಿದ್ದರು.

ಬೆನ್ನಿನ ಭಾಗಕ್ಕೆ ತೀವ್ರ ಪೆಟ್ಟಾಗಿದ್ದರಿಂದ ಹಾಯಿದೋಣಿಯಲ್ಲಿ ಅವರು ತೀವ್ರ ಸಂಕಷ್ಟ ಎದುರಿಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT