<p><strong>ನವದೆಹಲಿ:</strong> ವಂದೇ ಮಾತರಂಗೆ ನೂರು ವರ್ಷವಾದಾಗ, ಸಂವಿಧಾನವನ್ನು ಉಸಿರುಗಟ್ಟಿಸಲಾಗಿತ್ತು. ದೇಶವನ್ನು ತುರ್ತು ಪರಿಸ್ಥಿತಿಯಲ್ಲಿ ಬಂಧಿಸಲಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಸೋಮವಾರ ಹೇಳಿದ್ದಾರೆ.</p><p>ವಂದೇ ಮಾತರಂಗೆ 150 ವರ್ಷವಾದ ಪ್ರಯುಕ್ತ ಲೋಕಸಭೆಯಲ್ಲಿ ಅದರ ಕುರಿತ ಚರ್ಚೆಯನ್ನು ಪ್ರಧಾನಿ ಮೋದಿ ಪ್ರಾರಂಭಿಸಿದರು. </p><p>ರಾಷ್ಟ್ರಗೀತೆ ವಂದೇ ಮಾತರಂಗೆ 50 ವರ್ಷ ತುಂಬಿದಾಗ ದೇಶವು ವಸಾಹತುಶಾಹಿಯ ಅಡಿಯಲ್ಲಿ ತತ್ತರಿಸುತಿತ್ತು. 100 ವರ್ಷವಾದಾಗ ತುರ್ತು ಪರಿಸ್ಥಿತಿಯಲ್ಲಿತ್ತು. ಆಗ, ದೇಶಭಕ್ತಿ ಹೊಂದಿದ್ದ, ರಾಷ್ಟ್ರಕ್ಕಾಗಿ ಪ್ರಾಣ ಸಮರ್ಪಿಸಲು ಸಿದ್ದರಿದ್ದವರು ಜೈಲಿನಲ್ಲಿ ಬಂಧಿಯಾಗಿದ್ದರು. ಅದು ನಮ್ಮ ಇತಿಹಾಸದ ಕರಾಳ ಅಧ್ಯಾಯ ಎಂದು ಹೇಳಿದ್ದಾರೆ. </p><p>ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿರುವುದು ನಮ್ಮ ಹೆಮ್ಮೆ. ನಾವು ವಂದೇ ಮಾತರಂನ ಹೆಮ್ಮೆಯನ್ನು ಮರು ಸೃಷ್ಠಿಸಬೇಕು ಎಂದು ಹೇಳಿದ್ದಾರೆ. </p><p>ಸ್ವಾತಂತ್ರ್ಯ ಚಳವಳಿಯ ವೇಳೆ ವಂದೇ ಮಾತರಂ ಗೀತೆಯು ಇಡೀ ದೇಶಕ್ಕೆ ಶಕ್ತಿ ಮತ್ತು ಸ್ಫೂರ್ತಿ ನೀಡಿತ್ತು ಎಂದು ತಿಳಿಸಿದ್ದಾರೆ.</p><p>ಡಿ.1ರಿಂದ ಲೋಕಸಭೆಯಲ್ಲಿ ಚಳಿಗಾಲದ ಅಧಿವೇಶನವು ಆರಂಭವಾಗಿದೆ. </p>.ಸಂಸತ್ ಚಳಿಗಾಲದ ಅಧಿವೇಶನ ಡಿ. 1ರಿಂದ 19ರವರೆಗೆ: ಕೇವಲ 15 ದಿನಕ್ಕೆ ವಿಪಕ್ಷ ಕಿಡಿ.‘ವಂದೇ ಮಾತರಂ’: ಲೋಕಸಭೆಯಲ್ಲಿ ಮೋದಿ ಮಾತು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಂದೇ ಮಾತರಂಗೆ ನೂರು ವರ್ಷವಾದಾಗ, ಸಂವಿಧಾನವನ್ನು ಉಸಿರುಗಟ್ಟಿಸಲಾಗಿತ್ತು. ದೇಶವನ್ನು ತುರ್ತು ಪರಿಸ್ಥಿತಿಯಲ್ಲಿ ಬಂಧಿಸಲಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಸೋಮವಾರ ಹೇಳಿದ್ದಾರೆ.</p><p>ವಂದೇ ಮಾತರಂಗೆ 150 ವರ್ಷವಾದ ಪ್ರಯುಕ್ತ ಲೋಕಸಭೆಯಲ್ಲಿ ಅದರ ಕುರಿತ ಚರ್ಚೆಯನ್ನು ಪ್ರಧಾನಿ ಮೋದಿ ಪ್ರಾರಂಭಿಸಿದರು. </p><p>ರಾಷ್ಟ್ರಗೀತೆ ವಂದೇ ಮಾತರಂಗೆ 50 ವರ್ಷ ತುಂಬಿದಾಗ ದೇಶವು ವಸಾಹತುಶಾಹಿಯ ಅಡಿಯಲ್ಲಿ ತತ್ತರಿಸುತಿತ್ತು. 100 ವರ್ಷವಾದಾಗ ತುರ್ತು ಪರಿಸ್ಥಿತಿಯಲ್ಲಿತ್ತು. ಆಗ, ದೇಶಭಕ್ತಿ ಹೊಂದಿದ್ದ, ರಾಷ್ಟ್ರಕ್ಕಾಗಿ ಪ್ರಾಣ ಸಮರ್ಪಿಸಲು ಸಿದ್ದರಿದ್ದವರು ಜೈಲಿನಲ್ಲಿ ಬಂಧಿಯಾಗಿದ್ದರು. ಅದು ನಮ್ಮ ಇತಿಹಾಸದ ಕರಾಳ ಅಧ್ಯಾಯ ಎಂದು ಹೇಳಿದ್ದಾರೆ. </p><p>ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿರುವುದು ನಮ್ಮ ಹೆಮ್ಮೆ. ನಾವು ವಂದೇ ಮಾತರಂನ ಹೆಮ್ಮೆಯನ್ನು ಮರು ಸೃಷ್ಠಿಸಬೇಕು ಎಂದು ಹೇಳಿದ್ದಾರೆ. </p><p>ಸ್ವಾತಂತ್ರ್ಯ ಚಳವಳಿಯ ವೇಳೆ ವಂದೇ ಮಾತರಂ ಗೀತೆಯು ಇಡೀ ದೇಶಕ್ಕೆ ಶಕ್ತಿ ಮತ್ತು ಸ್ಫೂರ್ತಿ ನೀಡಿತ್ತು ಎಂದು ತಿಳಿಸಿದ್ದಾರೆ.</p><p>ಡಿ.1ರಿಂದ ಲೋಕಸಭೆಯಲ್ಲಿ ಚಳಿಗಾಲದ ಅಧಿವೇಶನವು ಆರಂಭವಾಗಿದೆ. </p>.ಸಂಸತ್ ಚಳಿಗಾಲದ ಅಧಿವೇಶನ ಡಿ. 1ರಿಂದ 19ರವರೆಗೆ: ಕೇವಲ 15 ದಿನಕ್ಕೆ ವಿಪಕ್ಷ ಕಿಡಿ.‘ವಂದೇ ಮಾತರಂ’: ಲೋಕಸಭೆಯಲ್ಲಿ ಮೋದಿ ಮಾತು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>