<p><strong>ನವದೆಹಲಿ: </strong>ಹಣದುಬ್ಬರ ಹಾಗೂ ನಿರುದ್ಯೋಗ ಸಮಸ್ಯೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>.<p>ಭಾರತ್ ಜೋಡೊ ಯಾತ್ರೆ ವೇಳೆ ತಾವು ಮಾತನಾಡಿರುವ ವಿಡಿಯೊವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ರಾಹುಲ್, ‘ಹಣದುಬ್ಬರ ಹೆಚ್ಚಳ ದೇಶಭಕ್ತಿಯೇ?, ನಿರುದ್ಯೋಗ ಸಮಸ್ಯೆ ದೇಶಭಕ್ತಿಯೇ?, ತಪ್ಪಾದ ಜಿಎಸ್ಟಿ ದೇಶಭಕ್ತಿಯೇ?, ಚೀನಾ ಅತಿಕ್ರಮಣ ಕುರಿತು ಸುಳ್ಳು ಹೇಳುವುದು ದೇಶಭಕ್ತಿಯೇ’ ಎಂದು ಪ್ರಶ್ನಿಸಿದ್ದಾರೆ.</p>.<p>ದೇಶವನ್ನು ಒಡೆಯುವುದು ದೇಶಭಕ್ತಿಯಲ್ಲ, ದೇಶವನ್ನು ಒಗ್ಗೂಡಿಸುವುದು ದೇಶಪ್ರೇಮ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.</p>.<p>ರಾಹುಲ್ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಯೂ 69ನೇ ದಿನಕ್ಕೆ ಕಾಲಿರಿಸಿದ್ದು, ಮಹಾರಾಷ್ಟ್ರದಲ್ಲಿ ಸಾಗುತ್ತಿದೆ. ಶಿವಸೇನಾ, ಎನ್ಸಿಪಿ ನಾಯಕರು ರಾಹುಲ್ಗೆ ಸಾಥ್ ನೀಡಿದ್ದಾರೆ.</p>.<p><strong>ಓದಿ... <a href="https://www.prajavani.net/karnataka-news/karnataka-assembly-election-2023-kolar-constituency-siddaramaiah-congress-bjp-jds-politics-988748.html" target="_blank">ಕ್ಷೇತ್ರವಿಲ್ಲದೆ ಅಲೆದಾಡುತ್ತಿರುವ ಸಿದ್ದರಾಮಯ್ಯ ಮನೆಯಲ್ಲಿರುವುದು ಸೂಕ್ತ: ಬಿಜೆಪಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಹಣದುಬ್ಬರ ಹಾಗೂ ನಿರುದ್ಯೋಗ ಸಮಸ್ಯೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>.<p>ಭಾರತ್ ಜೋಡೊ ಯಾತ್ರೆ ವೇಳೆ ತಾವು ಮಾತನಾಡಿರುವ ವಿಡಿಯೊವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ರಾಹುಲ್, ‘ಹಣದುಬ್ಬರ ಹೆಚ್ಚಳ ದೇಶಭಕ್ತಿಯೇ?, ನಿರುದ್ಯೋಗ ಸಮಸ್ಯೆ ದೇಶಭಕ್ತಿಯೇ?, ತಪ್ಪಾದ ಜಿಎಸ್ಟಿ ದೇಶಭಕ್ತಿಯೇ?, ಚೀನಾ ಅತಿಕ್ರಮಣ ಕುರಿತು ಸುಳ್ಳು ಹೇಳುವುದು ದೇಶಭಕ್ತಿಯೇ’ ಎಂದು ಪ್ರಶ್ನಿಸಿದ್ದಾರೆ.</p>.<p>ದೇಶವನ್ನು ಒಡೆಯುವುದು ದೇಶಭಕ್ತಿಯಲ್ಲ, ದೇಶವನ್ನು ಒಗ್ಗೂಡಿಸುವುದು ದೇಶಪ್ರೇಮ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.</p>.<p>ರಾಹುಲ್ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಯೂ 69ನೇ ದಿನಕ್ಕೆ ಕಾಲಿರಿಸಿದ್ದು, ಮಹಾರಾಷ್ಟ್ರದಲ್ಲಿ ಸಾಗುತ್ತಿದೆ. ಶಿವಸೇನಾ, ಎನ್ಸಿಪಿ ನಾಯಕರು ರಾಹುಲ್ಗೆ ಸಾಥ್ ನೀಡಿದ್ದಾರೆ.</p>.<p><strong>ಓದಿ... <a href="https://www.prajavani.net/karnataka-news/karnataka-assembly-election-2023-kolar-constituency-siddaramaiah-congress-bjp-jds-politics-988748.html" target="_blank">ಕ್ಷೇತ್ರವಿಲ್ಲದೆ ಅಲೆದಾಡುತ್ತಿರುವ ಸಿದ್ದರಾಮಯ್ಯ ಮನೆಯಲ್ಲಿರುವುದು ಸೂಕ್ತ: ಬಿಜೆಪಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>