<p><strong>ಹೈದರಾಬಾದ್</strong>: ಭಾರತದಿಂದ ಆಮದು ಮಾಡಿಕೊಳ್ಳುವ ಉತ್ಪನ್ನಗಳ ಮೇಲೆ ಶೇ 50ರಷ್ಟು ತೆರಿಗೆ ವಿಧಿಸುವ ಅಮೆರಿಕದ ಕ್ರಮವು ಬುಧವಾರದಿಂದ ಜಾರಿಗೆ ಬರುತ್ತಿದ್ದು, ದೇಶದ ಸ್ಫಟಿಕಶಿಲೆ ಉದ್ಯಮ ಆತಂಕಕ್ಕೆ ಒಳಗಾಗಿದೆ. </p>.<p>ಅಮೆರಿಕದ ಈ ಕ್ರಮದಿಂದ ದೇಶೀಯ ಸ್ಫಟಿಕಶಿಲೆ ಉದ್ಯಮ ಎದುರಿಸುವ ಆರ್ಥಿಕ ಕುಸಿತ ತಡೆಗಟ್ಟಲು ಸರ್ಕಾರ ತುರ್ತಾಗಿ ಹಸ್ತಕ್ಷೇಪ ಮಾಡಬೇಕು ಎಂದು ಭಾರತೀಯ ಸ್ಫಟಿಕಶಿಲೆ ತಯಾರಕರ ಒಕ್ಕೂಟವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. </p>.<p>ಈ ವಲಯದಲ್ಲಿ ಉದ್ದಿಮೆದಾರರು ಅಂದಾಜು ₹5,000 ಕೋಟಿಗೂ ಹೆಚ್ಚು ಹೂಡಿಕೆ ಮಾಡಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಅಮೆರಿಕದಲ್ಲಿ ಮಾರುಕಟ್ಟೆ ಕಂಡುಕೊಂಡಿದ್ದ ಈ ವಲಯವು ಹೆಚ್ಚುವರಿ ಸುಂಕದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ತಕ್ಷಣವೇ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡಿ ಸಮಗ್ರ ಪರಿಹಾರ ನೀಡಬೇಕು ಎಂದು ಒಕ್ಕೂಟವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೋರಿಕೆ ಸಲ್ಲಿಸಿದೆ.</p>.<p>ಸಾಲದ ಕಂತುಗಳ ಮರುಪಾವತಿ, ಬಡ್ಡಿ ಪಾವತಿಯನ್ನು ಮೂರು ವರ್ಷಗಳವರೆಗೆ ತಡೆ ನೀಡಬೇಕು, ಸ್ಪಟಿಕ ಶಿಲೆ ಮೇಲ್ಮೈ ಉತ್ಪನ್ನಗಳ ಮೇಲಿನ ಜಿಎಸ್ಟಿ ಅನ್ನು ಈಗಿನ ಶೇ 18ರಿಂದ ಶೇ 5ಕ್ಕೆ ಇಳಿಸುವುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒಕ್ಕೂಟ ಕೋರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಭಾರತದಿಂದ ಆಮದು ಮಾಡಿಕೊಳ್ಳುವ ಉತ್ಪನ್ನಗಳ ಮೇಲೆ ಶೇ 50ರಷ್ಟು ತೆರಿಗೆ ವಿಧಿಸುವ ಅಮೆರಿಕದ ಕ್ರಮವು ಬುಧವಾರದಿಂದ ಜಾರಿಗೆ ಬರುತ್ತಿದ್ದು, ದೇಶದ ಸ್ಫಟಿಕಶಿಲೆ ಉದ್ಯಮ ಆತಂಕಕ್ಕೆ ಒಳಗಾಗಿದೆ. </p>.<p>ಅಮೆರಿಕದ ಈ ಕ್ರಮದಿಂದ ದೇಶೀಯ ಸ್ಫಟಿಕಶಿಲೆ ಉದ್ಯಮ ಎದುರಿಸುವ ಆರ್ಥಿಕ ಕುಸಿತ ತಡೆಗಟ್ಟಲು ಸರ್ಕಾರ ತುರ್ತಾಗಿ ಹಸ್ತಕ್ಷೇಪ ಮಾಡಬೇಕು ಎಂದು ಭಾರತೀಯ ಸ್ಫಟಿಕಶಿಲೆ ತಯಾರಕರ ಒಕ್ಕೂಟವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. </p>.<p>ಈ ವಲಯದಲ್ಲಿ ಉದ್ದಿಮೆದಾರರು ಅಂದಾಜು ₹5,000 ಕೋಟಿಗೂ ಹೆಚ್ಚು ಹೂಡಿಕೆ ಮಾಡಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಅಮೆರಿಕದಲ್ಲಿ ಮಾರುಕಟ್ಟೆ ಕಂಡುಕೊಂಡಿದ್ದ ಈ ವಲಯವು ಹೆಚ್ಚುವರಿ ಸುಂಕದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ತಕ್ಷಣವೇ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡಿ ಸಮಗ್ರ ಪರಿಹಾರ ನೀಡಬೇಕು ಎಂದು ಒಕ್ಕೂಟವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೋರಿಕೆ ಸಲ್ಲಿಸಿದೆ.</p>.<p>ಸಾಲದ ಕಂತುಗಳ ಮರುಪಾವತಿ, ಬಡ್ಡಿ ಪಾವತಿಯನ್ನು ಮೂರು ವರ್ಷಗಳವರೆಗೆ ತಡೆ ನೀಡಬೇಕು, ಸ್ಪಟಿಕ ಶಿಲೆ ಮೇಲ್ಮೈ ಉತ್ಪನ್ನಗಳ ಮೇಲಿನ ಜಿಎಸ್ಟಿ ಅನ್ನು ಈಗಿನ ಶೇ 18ರಿಂದ ಶೇ 5ಕ್ಕೆ ಇಳಿಸುವುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒಕ್ಕೂಟ ಕೋರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>