<p><strong>ಮುಂಬೈ:</strong> ದೇಶದ ಯುವಜನರು ಜ್ಞಾನ ಸಂಪಾದನೆಗೆ ವಿದೇಶಗಳಿಗೆ ತೆರಳಲು ಹಿಂಜರಿಯಬೇಡಿ. ಆದರೆ, ಆ ಕೌಶಲ್ಯಗಳನ್ನು ಉಪಯೋಗಿಸಿಕೊಂಡು ಭಾರತದ ಅಭಿವೃದ್ಧಿ ಮಾಡಿ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್ಎಸ್ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. </p><p>ಮೋಹನ್ ಭಾಗವತ್ ಅವರು ಛತ್ರಪತಿ ಸಂಭಾಜಿನಗರಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಅಲ್ಲಿನ ಎಂಐಟಿ ಕಾಲೇಜಿನಲ್ಲಿ ನಡೆದ ಯುವ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ.</p><p>‘ಈಗಿನ ಯುವಜನರು ಅತಿ ಹೆಚ್ಚಿನ ದೇಶಭಕ್ತಿಯನ್ನು ಹೊಂದಿದ್ದಾರೆ. ಅವರಲ್ಲಿ ದೇಶದೆಡೆಗಿನ ಭಾವನೆಗಳು ಹೆಚ್ಚಾದಷ್ಟು, ಅವರು ರಾಷ್ಟ್ರಕ್ಕಾಗಿ ಹೆಚ್ಚಿನ ಸೇವೆ ಸಲ್ಲಿಸುತ್ತಾರೆ’ ಎಂದು ಹೇಳಿದ್ದಾರೆ. </p><p>ವಿದೇಶಗಳಿಗೆ ಹೋಗಿ ಜ್ಞಾನ ಸಂಪಾದನೆ ಮಾಡುವುದು ತಪ್ಪಲ್ಲ. ಆದರೆ ಅದನ್ನು ಭಾರತದ ಅಭಿವೃದ್ದಿಗೆ ಬಳಸಿಕೊಳ್ಳಬೇಕು. ದೇಶದ ಅಭಿವೃದ್ಧಿಗೆ ಯುವಕರ ಕೊಡುಗೆ ಮಹತ್ವದ್ದು, ಅವರು ರಾಷ್ಟ್ರದ ಭವಿಷ್ಯವನ್ನು ಬರೆಯುತ್ತಾರೆ’ ಎಂದಿದ್ದಾರೆ. </p><p>ರಾಷ್ಟ್ರದ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ಕಳೆದ 100 ವರ್ಷಗಳಲ್ಲಿ ಹಲವಾರು ಮಂದಿ ಆರ್ಎಸ್ಎಸ್ ಜತೆಗೆ ಕೆಲಸ ಮಾಡಿದ್ದಾರೆ. ಸಂಘವು ಯಾರನ್ನೂ ವಿರೋಧಿಸುವುದಿಲ್ಲ ಹಾಗೂ ಯಾರಿಗೂ ಸ್ಪರ್ಧಿಯಲ್ಲ. ಉತ್ತಮ ಸಮಾಜವನ್ನು ನಿರ್ಮಿಸುವುದಷ್ಟೇ ಅದರ ಕೆಲಸ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ದೇಶದ ಯುವಜನರು ಜ್ಞಾನ ಸಂಪಾದನೆಗೆ ವಿದೇಶಗಳಿಗೆ ತೆರಳಲು ಹಿಂಜರಿಯಬೇಡಿ. ಆದರೆ, ಆ ಕೌಶಲ್ಯಗಳನ್ನು ಉಪಯೋಗಿಸಿಕೊಂಡು ಭಾರತದ ಅಭಿವೃದ್ಧಿ ಮಾಡಿ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್ಎಸ್ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. </p><p>ಮೋಹನ್ ಭಾಗವತ್ ಅವರು ಛತ್ರಪತಿ ಸಂಭಾಜಿನಗರಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಅಲ್ಲಿನ ಎಂಐಟಿ ಕಾಲೇಜಿನಲ್ಲಿ ನಡೆದ ಯುವ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ.</p><p>‘ಈಗಿನ ಯುವಜನರು ಅತಿ ಹೆಚ್ಚಿನ ದೇಶಭಕ್ತಿಯನ್ನು ಹೊಂದಿದ್ದಾರೆ. ಅವರಲ್ಲಿ ದೇಶದೆಡೆಗಿನ ಭಾವನೆಗಳು ಹೆಚ್ಚಾದಷ್ಟು, ಅವರು ರಾಷ್ಟ್ರಕ್ಕಾಗಿ ಹೆಚ್ಚಿನ ಸೇವೆ ಸಲ್ಲಿಸುತ್ತಾರೆ’ ಎಂದು ಹೇಳಿದ್ದಾರೆ. </p><p>ವಿದೇಶಗಳಿಗೆ ಹೋಗಿ ಜ್ಞಾನ ಸಂಪಾದನೆ ಮಾಡುವುದು ತಪ್ಪಲ್ಲ. ಆದರೆ ಅದನ್ನು ಭಾರತದ ಅಭಿವೃದ್ದಿಗೆ ಬಳಸಿಕೊಳ್ಳಬೇಕು. ದೇಶದ ಅಭಿವೃದ್ಧಿಗೆ ಯುವಕರ ಕೊಡುಗೆ ಮಹತ್ವದ್ದು, ಅವರು ರಾಷ್ಟ್ರದ ಭವಿಷ್ಯವನ್ನು ಬರೆಯುತ್ತಾರೆ’ ಎಂದಿದ್ದಾರೆ. </p><p>ರಾಷ್ಟ್ರದ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ಕಳೆದ 100 ವರ್ಷಗಳಲ್ಲಿ ಹಲವಾರು ಮಂದಿ ಆರ್ಎಸ್ಎಸ್ ಜತೆಗೆ ಕೆಲಸ ಮಾಡಿದ್ದಾರೆ. ಸಂಘವು ಯಾರನ್ನೂ ವಿರೋಧಿಸುವುದಿಲ್ಲ ಹಾಗೂ ಯಾರಿಗೂ ಸ್ಪರ್ಧಿಯಲ್ಲ. ಉತ್ತಮ ಸಮಾಜವನ್ನು ನಿರ್ಮಿಸುವುದಷ್ಟೇ ಅದರ ಕೆಲಸ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>