<p><strong>ಕೊಲಂಬೊ</strong>: ಪಹಲ್ಗಾಮ್ ದಾಳಿಯ ಜೊತೆ ನಂಟು ಹೊಂದಿರುವ ಶಂಕಿತನೊಬ್ಬ ಇದ್ದಿರಬಹುದು ಎಂಬ ಸುಳಿವು ಪಡೆದ ಶ್ರೀಲಂಕಾ ಪೊಲೀಸರು, ಚೆನ್ನೈನಿಂದ ಇಲ್ಲಿಗೆ ಶನಿವಾರ ಬಂದ ವಿಮಾನವೊಂದನ್ನು ತಪಾಸಣೆಗೆ ಒಳಪಡಿಸಿದರು.</p>.<p>ಕೊಲಂಬೊದ ಭಂಡಾರನಾಯಕೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶನಿವಾರ ಮಧ್ಯಾಹ್ನ 11.59ಕ್ಕೆ ಚೆನ್ನೈನಿಂದ ಬಂದ ವಿಮಾನವನ್ನು ಸಮಗ್ರ ತಪಾಸಣೆಗೆ ಒಳಪಡಿಸಲಾಯಿತು ಎಂದು ಶ್ರೀಲಂಕನ್ ಏರ್ಲೈನ್ಸ್ನ ಪ್ರಕಟಣೆ ತಿಳಿಸಿದೆ.</p>.<p>‘ಭಾರತಕ್ಕೆ ಬೇಕಾಗಿರುವ ಶಂಕಿತ ವ್ಯಕ್ತಿಯೊಬ್ಬ ಈ ವಿಮಾನದಲ್ಲಿ ಇದ್ದಾನೆ ಎಂದು ಭಾವಿಸಿ ಚೆನ್ನೈ ಪ್ರದೇಶ ನಿಯಂತ್ರಣ ಕೇಂದ್ರದಿಂದ ಎಚ್ಚರಿಕೆಯ ಸಂದೇಶ ಬಂದಿತ್ತು. ಇದನ್ನು ಆಧರಿಸಿ ಸ್ಥಳೀಯ ಅಧಿಕಾರಿಗಳ ನೆರವು ಪಡೆದು ಶೋಧ ಕಾರ್ಯ ನಡೆಸಲಾಯಿತು’ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.</p>.<p class="bodytext">ವಿಮಾನವನ್ನು ಬಹಳ ಕೂಲಂಕಷವಾಗಿ ತಪಾಸಣೆಗೆ ಒಳಪಡಿಸಿದ ನಂತರ, ಮುಂದಿನ ಕಾರ್ಯಾಚರಣೆಗಳಿಗೆ ಅನುಮತಿ ನೀಡಲಾಯಿತು. ಪಹಲ್ಗಾಮ್ ದಾಳಿಯಲ್ಲಿ ಭಯೋತ್ಪಾದಕರು 26 ಜನರನ್ನು ಹತ್ಯೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ</strong>: ಪಹಲ್ಗಾಮ್ ದಾಳಿಯ ಜೊತೆ ನಂಟು ಹೊಂದಿರುವ ಶಂಕಿತನೊಬ್ಬ ಇದ್ದಿರಬಹುದು ಎಂಬ ಸುಳಿವು ಪಡೆದ ಶ್ರೀಲಂಕಾ ಪೊಲೀಸರು, ಚೆನ್ನೈನಿಂದ ಇಲ್ಲಿಗೆ ಶನಿವಾರ ಬಂದ ವಿಮಾನವೊಂದನ್ನು ತಪಾಸಣೆಗೆ ಒಳಪಡಿಸಿದರು.</p>.<p>ಕೊಲಂಬೊದ ಭಂಡಾರನಾಯಕೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶನಿವಾರ ಮಧ್ಯಾಹ್ನ 11.59ಕ್ಕೆ ಚೆನ್ನೈನಿಂದ ಬಂದ ವಿಮಾನವನ್ನು ಸಮಗ್ರ ತಪಾಸಣೆಗೆ ಒಳಪಡಿಸಲಾಯಿತು ಎಂದು ಶ್ರೀಲಂಕನ್ ಏರ್ಲೈನ್ಸ್ನ ಪ್ರಕಟಣೆ ತಿಳಿಸಿದೆ.</p>.<p>‘ಭಾರತಕ್ಕೆ ಬೇಕಾಗಿರುವ ಶಂಕಿತ ವ್ಯಕ್ತಿಯೊಬ್ಬ ಈ ವಿಮಾನದಲ್ಲಿ ಇದ್ದಾನೆ ಎಂದು ಭಾವಿಸಿ ಚೆನ್ನೈ ಪ್ರದೇಶ ನಿಯಂತ್ರಣ ಕೇಂದ್ರದಿಂದ ಎಚ್ಚರಿಕೆಯ ಸಂದೇಶ ಬಂದಿತ್ತು. ಇದನ್ನು ಆಧರಿಸಿ ಸ್ಥಳೀಯ ಅಧಿಕಾರಿಗಳ ನೆರವು ಪಡೆದು ಶೋಧ ಕಾರ್ಯ ನಡೆಸಲಾಯಿತು’ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.</p>.<p class="bodytext">ವಿಮಾನವನ್ನು ಬಹಳ ಕೂಲಂಕಷವಾಗಿ ತಪಾಸಣೆಗೆ ಒಳಪಡಿಸಿದ ನಂತರ, ಮುಂದಿನ ಕಾರ್ಯಾಚರಣೆಗಳಿಗೆ ಅನುಮತಿ ನೀಡಲಾಯಿತು. ಪಹಲ್ಗಾಮ್ ದಾಳಿಯಲ್ಲಿ ಭಯೋತ್ಪಾದಕರು 26 ಜನರನ್ನು ಹತ್ಯೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>