<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೂತ್ ಮಟ್ಟದ ಅಧಿಕಾರಿಗಳ ಮೇಲೆ ಅತಿಯಾದ ಒತ್ತಡ ಹೇರುತ್ತಿರುವುದನ್ನು ವಿರೋಧಿಸಿ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ.</p><p>ಬೂತ್ ಮಟ್ಟದ ಅಧಿಕಾರಿಗಳ ಸಂಘಟನೆಯಾದ ಬಿಎಲ್ಒ ಅಧಿಕಾರ ರಕ್ಷಾ ಸಮಿತಿಯ ಸದಸ್ಯರು ಸಮಸ್ಯೆಗಳ ಕುರಿತು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಿದ್ದಾರೆ ಎಂದು ಸಂಸ್ಥೆಯ ಕಾರ್ಯಕಾರಿಯೊಬ್ಬರು ತಿಳಿಸಿದ್ದಾರೆ.</p>.ಆಳ–ಅಗಲ | ಎಸ್ಐಆರ್: ಕಾನೂನು ಹೇಳುವುದೇನು?.ಎಸ್ಐಆರ್ | ಬಿಎಲ್ಒಗಳಿಗೆ ಒತ್ತಡ ಹೇರುತ್ತಿಲ್ಲ: ಕೇರಳ ಮುಖ್ಯ ಚುನಾವಣಾ ಆಯುಕ್ತ. <p>ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ಆರಂಭವಾದಾಗಿನಿಂದ ಜಿಲ್ಲೆಗಳಾದ್ಯಂತ ಬಿಎಲ್ಒಗಳು ತುಂಬಾ ಒತ್ತಡದಲ್ಲಿ ಹಾಗೂ ಅಮಾನವೀಯ ಪರಿಸ್ಥಿತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಸಮಿತಿ ಆರೋಪಿಸಿದೆ.</p><p>ಚುನಾವಣಾ ಆಯೋಗವು ತಕ್ಷಣ ಮಧ್ಯಪ್ರವೇಶಿಸಿ, ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ, ಉತ್ತರ ಕೋಲ್ಕತ್ತದ ಕಾಲೇಜು ಚೌಕದಿಂದ ನಗರದ ಮಧ್ಯ ಭಾಗದಲ್ಲಿರುವ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಕಚೇರಿಯವರೆಗೆ ಮೆರವಣಿಗೆ ನಡೆಸುವುದಾಗಿ ಸಮಿತಿ ತಿಳಿಸಿದೆ.</p><p>ವಿವಿಧ ಸಂಘಟನೆಗಳ ಅರೆ-ಶಿಕ್ಷಕರು, ಕಾಲೇಜು ಪ್ರಾಧ್ಯಾಪಕರು ಮತ್ತು ಶಿಕ್ಷಕರು ತಮ್ಮ ಬೇಡಿಕೆಗಳನ್ನು ಬೆಂಬಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. </p>.ರಾಜಸ್ಥಾನ | ಹೃದಯಾಘಾತದಿಂದ ಬಿಎಲ್ಒ ಸಾವು: ಎಸ್ಐಆರ್ ಒತ್ತಡ ಆರೋಪ.ಎಸ್ಐಆರ್ ಅಂದರೆ ಮತದಾರರ ಪಟ್ಟಿ ಶುದ್ಧೀಕರಣ: ಅಮಿತ್ ಶಾ. <p>ಕಡಿಮೆ ಅವಧಿಯಲ್ಲಿ ಕೆಲಸಗಳನ್ನು ಪೂರ್ಣಗೊಳಿಸಲು ನಮಗೆ ಹೇಳಲಾಗಿದೆ. ಆದರೆ ಅವರು ಹಂಚಿರುವ ಕೆಲಸಗಳು ಸುಮಾರು ಎರಡು ವರ್ಷಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತವೆ ಎಂದು ಬಿಎಲ್ಒ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆಯನ್ನು ನವೆಂಬರ್ 4ರಂದು ಆರಂಭವಾಗಿದ್ದು, ಡಿಸೆಂಬರ್ 4ರವರೆಗೆ ಮುಂದುವರಿಯುತ್ತದೆ. ಕರಡು ಪಟ್ಟಿಗಳನ್ನು ಡಿಸೆಂಬರ್ 9ರಂದು ಪ್ರಕಟಿಸಲಾಗುವುದು ಎಂದು ತಿಳಿದು ಬಂದಿದೆ.</p><p>ಚುನಾವಣಾ ಆಯೋಗವು ಎಸ್ಐಆರ್ ಪ್ರಕ್ರಿಯೆ ಗಡುವನ್ನು ವಿಸ್ತರಿಸದಿದ್ದರೆ ಅಥವಾ ಬಿಎಲ್ಒಗಳು ಸಮಸ್ಯೆಗಳನ್ನು ಪರಿಹರಿಸದಿದ್ದರೆ, ನಿರಂತರ ಪ್ರತಿಭಟನೆ ನಡೆಸುವುದಾಗಿ ಸಮಿತಿಯ ಸದಸ್ಯರು ಎಚ್ಚರಿಕೆ ನೀಡಿದ್ದಾರೆ .</p>.ಎಸ್ಐಆರ್ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಅರ್ಜಿ:ಚುನಾವಣಾ ಆಯೋಗಕ್ಕೆ ನೋಟಿಸ್ .ಎಸ್ಐಆರ್ ಪ್ರಕ್ರಿಯೆಯನ್ನು 'ಮತಬಂಧನ' ಎಂದ ಮಮತಾ ಬ್ಯಾನರ್ಜಿ. <p>ಮತ್ತೊಂದು ಸಂಸ್ಥೆ ಬಿಎಲ್ಒ ಓಯ್ಕ್ಯಾ ಮ್ಯಾಚ ಕೂಡ ಪ್ರಕ್ರಿಯೆಗೆ ಸಂಬಂಧ ಡಿಜಿಟಲೀಕರಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಗುರುತಿಸಿ ಹೆಚ್ಚುವರಿ ಸಹಾಯಕ ಸಿಬ್ಬಂದಿಯನ್ನು ಕೋರಿದೆ.</p><p>ಬಿಎಲ್ಒಗಳ ಹಾಗೂ ಚುನಾವಣಾ ಅಧಿಕಾರಿಗಳ ಮೇಲೆ ಕೆಲಸದ ಒತ್ತಡ ಹೇರುತ್ತಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. 19 ದಿನಗಳಲ್ಲಿ 16 ಬಿಎಲ್ಒಗಳು ಮೃತಪಟ್ಟಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೂತ್ ಮಟ್ಟದ ಅಧಿಕಾರಿಗಳ ಮೇಲೆ ಅತಿಯಾದ ಒತ್ತಡ ಹೇರುತ್ತಿರುವುದನ್ನು ವಿರೋಧಿಸಿ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ.</p><p>ಬೂತ್ ಮಟ್ಟದ ಅಧಿಕಾರಿಗಳ ಸಂಘಟನೆಯಾದ ಬಿಎಲ್ಒ ಅಧಿಕಾರ ರಕ್ಷಾ ಸಮಿತಿಯ ಸದಸ್ಯರು ಸಮಸ್ಯೆಗಳ ಕುರಿತು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಿದ್ದಾರೆ ಎಂದು ಸಂಸ್ಥೆಯ ಕಾರ್ಯಕಾರಿಯೊಬ್ಬರು ತಿಳಿಸಿದ್ದಾರೆ.</p>.ಆಳ–ಅಗಲ | ಎಸ್ಐಆರ್: ಕಾನೂನು ಹೇಳುವುದೇನು?.ಎಸ್ಐಆರ್ | ಬಿಎಲ್ಒಗಳಿಗೆ ಒತ್ತಡ ಹೇರುತ್ತಿಲ್ಲ: ಕೇರಳ ಮುಖ್ಯ ಚುನಾವಣಾ ಆಯುಕ್ತ. <p>ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ಆರಂಭವಾದಾಗಿನಿಂದ ಜಿಲ್ಲೆಗಳಾದ್ಯಂತ ಬಿಎಲ್ಒಗಳು ತುಂಬಾ ಒತ್ತಡದಲ್ಲಿ ಹಾಗೂ ಅಮಾನವೀಯ ಪರಿಸ್ಥಿತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಸಮಿತಿ ಆರೋಪಿಸಿದೆ.</p><p>ಚುನಾವಣಾ ಆಯೋಗವು ತಕ್ಷಣ ಮಧ್ಯಪ್ರವೇಶಿಸಿ, ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ, ಉತ್ತರ ಕೋಲ್ಕತ್ತದ ಕಾಲೇಜು ಚೌಕದಿಂದ ನಗರದ ಮಧ್ಯ ಭಾಗದಲ್ಲಿರುವ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಕಚೇರಿಯವರೆಗೆ ಮೆರವಣಿಗೆ ನಡೆಸುವುದಾಗಿ ಸಮಿತಿ ತಿಳಿಸಿದೆ.</p><p>ವಿವಿಧ ಸಂಘಟನೆಗಳ ಅರೆ-ಶಿಕ್ಷಕರು, ಕಾಲೇಜು ಪ್ರಾಧ್ಯಾಪಕರು ಮತ್ತು ಶಿಕ್ಷಕರು ತಮ್ಮ ಬೇಡಿಕೆಗಳನ್ನು ಬೆಂಬಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. </p>.ರಾಜಸ್ಥಾನ | ಹೃದಯಾಘಾತದಿಂದ ಬಿಎಲ್ಒ ಸಾವು: ಎಸ್ಐಆರ್ ಒತ್ತಡ ಆರೋಪ.ಎಸ್ಐಆರ್ ಅಂದರೆ ಮತದಾರರ ಪಟ್ಟಿ ಶುದ್ಧೀಕರಣ: ಅಮಿತ್ ಶಾ. <p>ಕಡಿಮೆ ಅವಧಿಯಲ್ಲಿ ಕೆಲಸಗಳನ್ನು ಪೂರ್ಣಗೊಳಿಸಲು ನಮಗೆ ಹೇಳಲಾಗಿದೆ. ಆದರೆ ಅವರು ಹಂಚಿರುವ ಕೆಲಸಗಳು ಸುಮಾರು ಎರಡು ವರ್ಷಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತವೆ ಎಂದು ಬಿಎಲ್ಒ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆಯನ್ನು ನವೆಂಬರ್ 4ರಂದು ಆರಂಭವಾಗಿದ್ದು, ಡಿಸೆಂಬರ್ 4ರವರೆಗೆ ಮುಂದುವರಿಯುತ್ತದೆ. ಕರಡು ಪಟ್ಟಿಗಳನ್ನು ಡಿಸೆಂಬರ್ 9ರಂದು ಪ್ರಕಟಿಸಲಾಗುವುದು ಎಂದು ತಿಳಿದು ಬಂದಿದೆ.</p><p>ಚುನಾವಣಾ ಆಯೋಗವು ಎಸ್ಐಆರ್ ಪ್ರಕ್ರಿಯೆ ಗಡುವನ್ನು ವಿಸ್ತರಿಸದಿದ್ದರೆ ಅಥವಾ ಬಿಎಲ್ಒಗಳು ಸಮಸ್ಯೆಗಳನ್ನು ಪರಿಹರಿಸದಿದ್ದರೆ, ನಿರಂತರ ಪ್ರತಿಭಟನೆ ನಡೆಸುವುದಾಗಿ ಸಮಿತಿಯ ಸದಸ್ಯರು ಎಚ್ಚರಿಕೆ ನೀಡಿದ್ದಾರೆ .</p>.ಎಸ್ಐಆರ್ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಅರ್ಜಿ:ಚುನಾವಣಾ ಆಯೋಗಕ್ಕೆ ನೋಟಿಸ್ .ಎಸ್ಐಆರ್ ಪ್ರಕ್ರಿಯೆಯನ್ನು 'ಮತಬಂಧನ' ಎಂದ ಮಮತಾ ಬ್ಯಾನರ್ಜಿ. <p>ಮತ್ತೊಂದು ಸಂಸ್ಥೆ ಬಿಎಲ್ಒ ಓಯ್ಕ್ಯಾ ಮ್ಯಾಚ ಕೂಡ ಪ್ರಕ್ರಿಯೆಗೆ ಸಂಬಂಧ ಡಿಜಿಟಲೀಕರಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಗುರುತಿಸಿ ಹೆಚ್ಚುವರಿ ಸಹಾಯಕ ಸಿಬ್ಬಂದಿಯನ್ನು ಕೋರಿದೆ.</p><p>ಬಿಎಲ್ಒಗಳ ಹಾಗೂ ಚುನಾವಣಾ ಅಧಿಕಾರಿಗಳ ಮೇಲೆ ಕೆಲಸದ ಒತ್ತಡ ಹೇರುತ್ತಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. 19 ದಿನಗಳಲ್ಲಿ 16 ಬಿಎಲ್ಒಗಳು ಮೃತಪಟ್ಟಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>