ಲಖನೌ: ಪ್ರಧಾನಿ ನರೇಂದ್ರ ಮೋದಿಯವರಿಗೆ ಬೀಳ್ಕೊಡುಗೆ ನೀಡಲು ದೇಶದ ಜನರು ತಯಾರಾಗಿದ್ದು, ಇಂಡಿಯಾ ಒಕ್ಕೂಟವು ಸರ್ಕಾರ ರಚಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದರು.
ಈ ಚುನಾವಣೆ ಸಂವಿಧಾನದ ರಕ್ಷಣೆಗೆ ನಡೆಯುತ್ತಿದೆ ಎಂದು ಹೇಳಿದ ಅವರು, ಸಂವಿಧಾನ ಬದಲಾಯಿಸುತ್ತೇನೆ ಎಂದು ಹೇಳಿದವರ ವಿರುದ್ಧ ಪ್ರಧಾನಿ ಯಾಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಪ್ರಶ್ನಿಸಿದರು.