<p><strong>ನವದೆಹಲಿ:</strong> ಅಮೆರಿಕ ಮತ್ತು ಇರಾನ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಸಂಯುಕ್ತ ಅರಬ್ ಒಕ್ಕೂಟದ (ಯುಎಇ) ಫುಜೈರಾ ಪೆಟ್ರೋಲಿಯಂ ಕೈಗಾರಿಕಾ ವಲಯದ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಮೂವರು ಭಾರತೀಯರು ಗಾಯಗೊಂಡಿದ್ದಾರೆ.</p><p>ಈ ಘಟನೆಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಯಾವುದೇ ಕಾರಣಕ್ಕೂ ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. </p><p>ಕದನ ವಿರಾಮ ಜಾರಿಗೆ ಬಂದ ಬಳಿಕ ಅಮೆರಿಕದ ಮಿತ್ರ ರಾಷ್ಟ್ರವಾದ ಯುಎಇ ಮೇಲೆ ಇರಾನ್ ಇದೇ ಮೊದಲ ಬಾರಿಗೆ ದಾಳಿ ನಡೆಸಿತು. </p><p>ಯುಎಇ ಮೇಲೆ ನಡೆದ ದಾಳಿಯಲ್ಲಿ ಭಾರತದ ಮೂವರು ನಾಗರಿಕರು ಗಾಯಗೊಂಡಿದ್ದಾರೆ. ನಾವಿದನ್ನು ತೀವ್ರವಾಗಿ ಖಂಡಿಸುತ್ತೇವೆ. ನಾಗರಿಕರು ಹಾಗೂ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆಸುವ ದಾಳಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. </p>. <p>ಈ ಸಂದರ್ಭದಲ್ಲಿ ಯುಎಇಯೊಂದಿಗೆ ಭಾರತ ದೃಢವಾಗಿ ನಿಲ್ಲುತ್ತದೆ. ರಾಜತಾಂತ್ರಿಕ ಮಾತುಕತೆ ಮೂಲಕ ಬಿಕ್ಕಟ್ಟನ್ನು ಶಾಂತಿಯುತವಾಗಿ ಬಗೆಹರಿಸಬೇಕು ಎಂದು ತಿಳಿಸಿದ್ದಾರೆ. </p><p>ಹೊರ್ಮುಜ್ ಜಲಸಂಧಿ ಮೂಲಕ ಅಡಚಣೆಯಿಲ್ಲದ ಮುಕ್ತ ಸಂಚಾರಕ್ಕಾಗಿ ಪ್ರಾದೇಶಿಕ ಶಾಂತಿ, ಸ್ಥಿರತೆ ಹಾಗೂ ಜಾಗತಿಕ ಇಂಧನ ಭದ್ರತೆ ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂದು ಮೋದಿ ಹೇಳಿದ್ದಾರೆ. </p><p>ಈ ಮೊದಲು ಇರಾನ್ ನಡೆಸಿರುವ ದಾಳಿಯಲ್ಲಿ ಭಾರತೀಯರು ಗಾಯಗೊಂಡಿರುವುದನ್ನು ವಿದೇಶಾಂಗ ಸಚಿವಾಲಯವು ಖಂಡಿಸಿತ್ತು. </p>.ಯುಎಇ ಮೇಲೆ ಇರಾನ್ ದಾಳಿಯಲ್ಲಿ ಭಾರತೀಯರಿಗೆ ಗಾಯ: ವಿದೇಶಾಂಗ ಸಚಿವಾಲಯ ಖಂಡನೆ.ಇರಾನ್ ಪರಮಾಣು ಶಸ್ತ್ರಾಸ್ತ್ರ ಹೊಂದಲು ಬಿಡದಿರಲು ಕಾರಣ ತಿಳಿಸಿದ ಟ್ರಂಪ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಮೆರಿಕ ಮತ್ತು ಇರಾನ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಸಂಯುಕ್ತ ಅರಬ್ ಒಕ್ಕೂಟದ (ಯುಎಇ) ಫುಜೈರಾ ಪೆಟ್ರೋಲಿಯಂ ಕೈಗಾರಿಕಾ ವಲಯದ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಮೂವರು ಭಾರತೀಯರು ಗಾಯಗೊಂಡಿದ್ದಾರೆ.</p><p>ಈ ಘಟನೆಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಯಾವುದೇ ಕಾರಣಕ್ಕೂ ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. </p><p>ಕದನ ವಿರಾಮ ಜಾರಿಗೆ ಬಂದ ಬಳಿಕ ಅಮೆರಿಕದ ಮಿತ್ರ ರಾಷ್ಟ್ರವಾದ ಯುಎಇ ಮೇಲೆ ಇರಾನ್ ಇದೇ ಮೊದಲ ಬಾರಿಗೆ ದಾಳಿ ನಡೆಸಿತು. </p><p>ಯುಎಇ ಮೇಲೆ ನಡೆದ ದಾಳಿಯಲ್ಲಿ ಭಾರತದ ಮೂವರು ನಾಗರಿಕರು ಗಾಯಗೊಂಡಿದ್ದಾರೆ. ನಾವಿದನ್ನು ತೀವ್ರವಾಗಿ ಖಂಡಿಸುತ್ತೇವೆ. ನಾಗರಿಕರು ಹಾಗೂ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆಸುವ ದಾಳಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. </p>. <p>ಈ ಸಂದರ್ಭದಲ್ಲಿ ಯುಎಇಯೊಂದಿಗೆ ಭಾರತ ದೃಢವಾಗಿ ನಿಲ್ಲುತ್ತದೆ. ರಾಜತಾಂತ್ರಿಕ ಮಾತುಕತೆ ಮೂಲಕ ಬಿಕ್ಕಟ್ಟನ್ನು ಶಾಂತಿಯುತವಾಗಿ ಬಗೆಹರಿಸಬೇಕು ಎಂದು ತಿಳಿಸಿದ್ದಾರೆ. </p><p>ಹೊರ್ಮುಜ್ ಜಲಸಂಧಿ ಮೂಲಕ ಅಡಚಣೆಯಿಲ್ಲದ ಮುಕ್ತ ಸಂಚಾರಕ್ಕಾಗಿ ಪ್ರಾದೇಶಿಕ ಶಾಂತಿ, ಸ್ಥಿರತೆ ಹಾಗೂ ಜಾಗತಿಕ ಇಂಧನ ಭದ್ರತೆ ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂದು ಮೋದಿ ಹೇಳಿದ್ದಾರೆ. </p><p>ಈ ಮೊದಲು ಇರಾನ್ ನಡೆಸಿರುವ ದಾಳಿಯಲ್ಲಿ ಭಾರತೀಯರು ಗಾಯಗೊಂಡಿರುವುದನ್ನು ವಿದೇಶಾಂಗ ಸಚಿವಾಲಯವು ಖಂಡಿಸಿತ್ತು. </p>.ಯುಎಇ ಮೇಲೆ ಇರಾನ್ ದಾಳಿಯಲ್ಲಿ ಭಾರತೀಯರಿಗೆ ಗಾಯ: ವಿದೇಶಾಂಗ ಸಚಿವಾಲಯ ಖಂಡನೆ.ಇರಾನ್ ಪರಮಾಣು ಶಸ್ತ್ರಾಸ್ತ್ರ ಹೊಂದಲು ಬಿಡದಿರಲು ಕಾರಣ ತಿಳಿಸಿದ ಟ್ರಂಪ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>