<p><strong>ನವದೆಹಲಿ</strong>:‘ಪೂರ್ವಾನ್ವಯ ತೆರಿಗೆಗೆ ಸಂಬಂಧಿಸಿ ವೊಡಾಫೋನ್ ಸಮೂಹದ ಪರವಾಗಿ ಅಂತರರಾಷ್ಟ್ರೀಯ ಮಧ್ಯಸ್ಥಿಕೆ ನ್ಯಾಯಮಂಡಳಿ ನೀಡಿರುವ ಆದೇಶವನ್ನು ಪ್ರಶ್ನಿಸಿ ಭಾರತ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸಿಂಗಪುರದ ಹಿರಿಯ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ. ಈ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ಗೆ ನಿಗದಿ ಮಾಡಲಾಗಿದೆ’ ಎಂದು ಮೂಲಗಳು ತಿಳಿಸಿವೆ.</p>.<p>ವೊಡಾಫೋನ್ ಕಂಪನಿಯು ₹ 22,100 ಕೋಟಿ ತೆರಿಗೆ ಮೊತ್ತ ಪಾವತಿಸಬೇಕು ಎಂದು ಭಾರತ ಸರ್ಕಾರ ಬೇಡಿಕೆ ಇಟ್ಟಿತ್ತು. ಇದನ್ನು ಅಂತರರಾಷ್ಟ್ರೀಯ ಮಧ್ಯಸ್ಥಿಕೆ ನ್ಯಾಯಮಂಡಳಿಯು ಸೆಪ್ಟೆಂಬರ್ 25ರಂದು ತಿರಸ್ಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಭಾರತ ಸರ್ಕಾರವು ಸಿಂಗಪುರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿತ್ತು.</p>.<p>ಬ್ರಿಟಿಷ್ ಆಯಿಲ್ ಮತ್ತು ಕೈರ್ನ್ ಎನರ್ಜಿಗೆ 1.2 ಶತಕೋಟಿ ಡಾಲರ್ ಹಿಂತಿರುಗಿಸುವಂತೆ ದಿ ಹೇಗ್ನ ಮಧ್ಯಸ್ಥಿಕೆ ನ್ಯಾಯಮಂಡಳಿಯು ಭಾರತ ಸರ್ಕಾರಕ್ಕೆ ಆದೇಶ ನೀಡಿತ್ತು. ಈ ಆದೇಶವನ್ನೂ ಭಾರತ ಪ್ರಶ್ನಿಸಿದೆ.</p>.<p>‘ವಿವಿಧ ದೇಶಗಳ ಜೊತೆಗಿನ ಹೂಡಿಕೆ ಸಂರಕ್ಷಣಾ ಒಪ್ಪಂದಗಳಲ್ಲಿ ತೆರಿಗೆ ಅಂಶವು ಒಳಗೊಂಡಿರುವುದಿಲ್ಲ. ತೆರಿಗೆ ಕಾನೂನು ದೇಶದ ಸಾರ್ವಭೌಮ ಹಕ್ಕು ಎನ್ನುವುದನ್ನು ಸರ್ಕಾರ ನಂಬಿದೆ’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>:‘ಪೂರ್ವಾನ್ವಯ ತೆರಿಗೆಗೆ ಸಂಬಂಧಿಸಿ ವೊಡಾಫೋನ್ ಸಮೂಹದ ಪರವಾಗಿ ಅಂತರರಾಷ್ಟ್ರೀಯ ಮಧ್ಯಸ್ಥಿಕೆ ನ್ಯಾಯಮಂಡಳಿ ನೀಡಿರುವ ಆದೇಶವನ್ನು ಪ್ರಶ್ನಿಸಿ ಭಾರತ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸಿಂಗಪುರದ ಹಿರಿಯ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ. ಈ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ಗೆ ನಿಗದಿ ಮಾಡಲಾಗಿದೆ’ ಎಂದು ಮೂಲಗಳು ತಿಳಿಸಿವೆ.</p>.<p>ವೊಡಾಫೋನ್ ಕಂಪನಿಯು ₹ 22,100 ಕೋಟಿ ತೆರಿಗೆ ಮೊತ್ತ ಪಾವತಿಸಬೇಕು ಎಂದು ಭಾರತ ಸರ್ಕಾರ ಬೇಡಿಕೆ ಇಟ್ಟಿತ್ತು. ಇದನ್ನು ಅಂತರರಾಷ್ಟ್ರೀಯ ಮಧ್ಯಸ್ಥಿಕೆ ನ್ಯಾಯಮಂಡಳಿಯು ಸೆಪ್ಟೆಂಬರ್ 25ರಂದು ತಿರಸ್ಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಭಾರತ ಸರ್ಕಾರವು ಸಿಂಗಪುರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿತ್ತು.</p>.<p>ಬ್ರಿಟಿಷ್ ಆಯಿಲ್ ಮತ್ತು ಕೈರ್ನ್ ಎನರ್ಜಿಗೆ 1.2 ಶತಕೋಟಿ ಡಾಲರ್ ಹಿಂತಿರುಗಿಸುವಂತೆ ದಿ ಹೇಗ್ನ ಮಧ್ಯಸ್ಥಿಕೆ ನ್ಯಾಯಮಂಡಳಿಯು ಭಾರತ ಸರ್ಕಾರಕ್ಕೆ ಆದೇಶ ನೀಡಿತ್ತು. ಈ ಆದೇಶವನ್ನೂ ಭಾರತ ಪ್ರಶ್ನಿಸಿದೆ.</p>.<p>‘ವಿವಿಧ ದೇಶಗಳ ಜೊತೆಗಿನ ಹೂಡಿಕೆ ಸಂರಕ್ಷಣಾ ಒಪ್ಪಂದಗಳಲ್ಲಿ ತೆರಿಗೆ ಅಂಶವು ಒಳಗೊಂಡಿರುವುದಿಲ್ಲ. ತೆರಿಗೆ ಕಾನೂನು ದೇಶದ ಸಾರ್ವಭೌಮ ಹಕ್ಕು ಎನ್ನುವುದನ್ನು ಸರ್ಕಾರ ನಂಬಿದೆ’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>