<p><strong>ನವದೆಹಲಿ: </strong>ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳ ಏರಿಕೆ ಹಾದಿಯಲ್ಲಿಯೇ ಇದೆ. ಕೋವಿಡ್ ದೃಢಪಟ್ಟಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆಸ್ಪತ್ರೆಗೆ ದಾಖಲಾಗಿದ್ದು, ದೆಹಲಿಯಲ್ಲೂ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 3,800 ದಾಟಿದೆ.</p>.<p>ಡೆಂಗಿಯಿಂದ ಬಳಲುತ್ತಿರುವ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಯಿಂದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ವೈರಸ್ ಸೋಂಕಿಗೂ ಒಳಗಾಗಿರುವ ಅವರಿಗೆ ಜ್ವರ ಇದ್ದು, ಉಸಿರಾಟದ ಸಮಸ್ಯೆ ಸಹ ಕಾಣಿಸಿಕೊಂಡಿದೆ. ರಕ್ತದಲ್ಲಿ ಪ್ಲೇಟ್ಲೆಟ್ ಪ್ರಮಾಣ ಕೂಡ ಇಳಿಮುಖವಾಗಿದೆ.</p>.<p>ಸೆಪ್ಟಂಬರ್ 14ರಂದು ನಡೆಸಿದ ಪರೀಕ್ಷೆಯಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅಂದಿನಿಂದ ಹೋಂ ಕ್ವಾರಂಟೈನ್ನಲ್ಲಿದ್ದರು. ಬುಧವಾರ ಅವರು ಲೋಕ ನಾಯಕ ಜೈ ಪ್ರಕಾಶ್ ನಾರಾಯಣ ಆಸ್ಪತ್ರೆಗೆ ದಾಖಲಾಗಿದ್ದರು.</p>.<p>ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್ ದೃಢಪಟ್ಟ 19,164 ಪ್ರಕರಣಗಳು ದಾಖಲಾಗಿದ್ದು, 17,184 ಮಂದಿ ಗುಣಮುಖರಾಗಿದ್ದಾರೆ. ಇದೇ ಅವಧಿಯಲ್ಲಿ ಕೊರೊನಾ ವೈರಸ್ ಸೋಂಕಿನಿಂದ 459 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 12,82,963 ತಲುಪಿದೆ. ಈ ಪೈಕಿ 2,74,993 ಸಕ್ರಿಯ ಪ್ರಕರಣಗಳಿದ್ದು, 9,73,214 ಮಂದಿ ಗುಣಮುಖರಾಗಿದ್ದಾರೆ ಹಾಗೂ 34,345 ಮಂದಿ ಸಾವಿಗೀಡಾಗಿದ್ದಾರೆ.</p>.<p>ದೆಹಲಿಯಲ್ಲಿ 3,834 ಹೊಸ ಪ್ರಕರಣಗಳು ವರದಿಯಾಗಿದೆ. ಇದೇ ಅವಧಿಯಲ್ಲಿ 3,509 ಮಂದಿ ಗುಣಮುಖರಾಗಿದ್ದು, 36 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು 2,24,375 ಮಂದಿ ಗುಣಮುಖರಾಗಿದ್ದು, 31,125 ಸಕ್ರಿಯ ಪ್ರಕರಣಗಳಿವೆ ಹಾಗೂ 5,123 ಮಂದಿ ಸಾವಿಗೀಡಾಗಿದ್ದಾರೆ. </p>.<p>ಆಂಧ್ರ ಪ್ರದೇಶದಲ್ಲಿ 7,855 ಹೊಸ ಪ್ರಕರಣಗಳು, ತಮಿಳುನಾಡಿನಲ್ಲಿ 5,692 ಪ್ರಕರಣಗಳು ಹಾಗೂ ಗುಜರಾತ್ನಲ್ಲಿ 1,408 ಪ್ರಕರಣಗಳು ದಾಖಲಾಗಿವೆ.</p>.<p>ಗುರುವಾರ ಬೆಳಗ್ಗಿನ ವರೆಗೂ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 86,508 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 57 ಲಕ್ಷ ದಾಟಿದೆ.</p>.<p>ಇದೇ ವೇಳೆ ಕೋವಿಡ್ನಿಂದಾಗಿ ಕಳೆದ 24 ಗಂಟೆಗಳಲ್ಲಿ 1,129 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಈ ವರೆಗೆ 91,149 ಮಂದಿ ಕೋವಿಡ್ ಕಾರಣದಿಂದ ಮೃತಪಟ್ಟಿದ್ದಾರೆ.</p>.<p>ಸದ್ಯ ದೇಶದ ಒಟ್ಟು ಕೋವಿಡ್ ಪ್ರಕರಣಗಳು 5,732,519 ಆಗಿದ್ದು, ಇದರಲ್ಲಿ 9,66,382 ಸಕ್ರಿಯ ಪ್ರಕರಣಗಳಿವೆ. 46,74,988 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತನ್ನ ವೆಬ್ಸೈಟ್ನಲ್ಲಿ ತಿಳಿಸಿದೆ.</p>.<p>ದಿನವೊಂದಕ್ಕೆ ದೇಶದಲ್ಲಿ ಪತ್ತೆಯಾಗುತ್ತಿರುವ ಸಕ್ರಿಯ ಪ್ರಕರಣಗಳಿಗಿಂತಲೂ, ಗುಣಮುಖರಾಗುವವರ ಸಂಖ್ಯೆಯೇ ಹೆಚ್ಚಿದೆ. ಕಳೆದ ಐದು ದಿನಗಳಿಂದಲೂ ಈ ಸಂಖ್ಯೆ ವೃದ್ಧಿಯಾಗುತ್ತಾ ಸಾಗಿದೆ.</p>.<p>ಭಾರತದಲ್ಲಿ ಈ ವರೆಗೆ ಪರೀಕ್ಷೆಗಾಗಿ 6,74,36,031 ಮಾದರಿಗಳನ್ನು ಸಂಗ್ರಹಿಸಲಾಗಿದೆ. ಬುಧವಾರ ಒಂದೇ ದಿನ 11,56,569 ಮಾದರಿಗಳನ್ನು ಸಂಗ್ರಹಿಸಿರುವುದಾಗಿ ಭಾರತೀಯ ವೈದ್ಯಕೀಯ ಅಧ್ಯಯನ ಸಂಸ್ಥೆ (ಐಸಿಎಂಆರ್) ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳ ಏರಿಕೆ ಹಾದಿಯಲ್ಲಿಯೇ ಇದೆ. ಕೋವಿಡ್ ದೃಢಪಟ್ಟಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆಸ್ಪತ್ರೆಗೆ ದಾಖಲಾಗಿದ್ದು, ದೆಹಲಿಯಲ್ಲೂ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 3,800 ದಾಟಿದೆ.</p>.<p>ಡೆಂಗಿಯಿಂದ ಬಳಲುತ್ತಿರುವ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಯಿಂದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ವೈರಸ್ ಸೋಂಕಿಗೂ ಒಳಗಾಗಿರುವ ಅವರಿಗೆ ಜ್ವರ ಇದ್ದು, ಉಸಿರಾಟದ ಸಮಸ್ಯೆ ಸಹ ಕಾಣಿಸಿಕೊಂಡಿದೆ. ರಕ್ತದಲ್ಲಿ ಪ್ಲೇಟ್ಲೆಟ್ ಪ್ರಮಾಣ ಕೂಡ ಇಳಿಮುಖವಾಗಿದೆ.</p>.<p>ಸೆಪ್ಟಂಬರ್ 14ರಂದು ನಡೆಸಿದ ಪರೀಕ್ಷೆಯಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅಂದಿನಿಂದ ಹೋಂ ಕ್ವಾರಂಟೈನ್ನಲ್ಲಿದ್ದರು. ಬುಧವಾರ ಅವರು ಲೋಕ ನಾಯಕ ಜೈ ಪ್ರಕಾಶ್ ನಾರಾಯಣ ಆಸ್ಪತ್ರೆಗೆ ದಾಖಲಾಗಿದ್ದರು.</p>.<p>ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್ ದೃಢಪಟ್ಟ 19,164 ಪ್ರಕರಣಗಳು ದಾಖಲಾಗಿದ್ದು, 17,184 ಮಂದಿ ಗುಣಮುಖರಾಗಿದ್ದಾರೆ. ಇದೇ ಅವಧಿಯಲ್ಲಿ ಕೊರೊನಾ ವೈರಸ್ ಸೋಂಕಿನಿಂದ 459 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 12,82,963 ತಲುಪಿದೆ. ಈ ಪೈಕಿ 2,74,993 ಸಕ್ರಿಯ ಪ್ರಕರಣಗಳಿದ್ದು, 9,73,214 ಮಂದಿ ಗುಣಮುಖರಾಗಿದ್ದಾರೆ ಹಾಗೂ 34,345 ಮಂದಿ ಸಾವಿಗೀಡಾಗಿದ್ದಾರೆ.</p>.<p>ದೆಹಲಿಯಲ್ಲಿ 3,834 ಹೊಸ ಪ್ರಕರಣಗಳು ವರದಿಯಾಗಿದೆ. ಇದೇ ಅವಧಿಯಲ್ಲಿ 3,509 ಮಂದಿ ಗುಣಮುಖರಾಗಿದ್ದು, 36 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು 2,24,375 ಮಂದಿ ಗುಣಮುಖರಾಗಿದ್ದು, 31,125 ಸಕ್ರಿಯ ಪ್ರಕರಣಗಳಿವೆ ಹಾಗೂ 5,123 ಮಂದಿ ಸಾವಿಗೀಡಾಗಿದ್ದಾರೆ. </p>.<p>ಆಂಧ್ರ ಪ್ರದೇಶದಲ್ಲಿ 7,855 ಹೊಸ ಪ್ರಕರಣಗಳು, ತಮಿಳುನಾಡಿನಲ್ಲಿ 5,692 ಪ್ರಕರಣಗಳು ಹಾಗೂ ಗುಜರಾತ್ನಲ್ಲಿ 1,408 ಪ್ರಕರಣಗಳು ದಾಖಲಾಗಿವೆ.</p>.<p>ಗುರುವಾರ ಬೆಳಗ್ಗಿನ ವರೆಗೂ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 86,508 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 57 ಲಕ್ಷ ದಾಟಿದೆ.</p>.<p>ಇದೇ ವೇಳೆ ಕೋವಿಡ್ನಿಂದಾಗಿ ಕಳೆದ 24 ಗಂಟೆಗಳಲ್ಲಿ 1,129 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಈ ವರೆಗೆ 91,149 ಮಂದಿ ಕೋವಿಡ್ ಕಾರಣದಿಂದ ಮೃತಪಟ್ಟಿದ್ದಾರೆ.</p>.<p>ಸದ್ಯ ದೇಶದ ಒಟ್ಟು ಕೋವಿಡ್ ಪ್ರಕರಣಗಳು 5,732,519 ಆಗಿದ್ದು, ಇದರಲ್ಲಿ 9,66,382 ಸಕ್ರಿಯ ಪ್ರಕರಣಗಳಿವೆ. 46,74,988 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತನ್ನ ವೆಬ್ಸೈಟ್ನಲ್ಲಿ ತಿಳಿಸಿದೆ.</p>.<p>ದಿನವೊಂದಕ್ಕೆ ದೇಶದಲ್ಲಿ ಪತ್ತೆಯಾಗುತ್ತಿರುವ ಸಕ್ರಿಯ ಪ್ರಕರಣಗಳಿಗಿಂತಲೂ, ಗುಣಮುಖರಾಗುವವರ ಸಂಖ್ಯೆಯೇ ಹೆಚ್ಚಿದೆ. ಕಳೆದ ಐದು ದಿನಗಳಿಂದಲೂ ಈ ಸಂಖ್ಯೆ ವೃದ್ಧಿಯಾಗುತ್ತಾ ಸಾಗಿದೆ.</p>.<p>ಭಾರತದಲ್ಲಿ ಈ ವರೆಗೆ ಪರೀಕ್ಷೆಗಾಗಿ 6,74,36,031 ಮಾದರಿಗಳನ್ನು ಸಂಗ್ರಹಿಸಲಾಗಿದೆ. ಬುಧವಾರ ಒಂದೇ ದಿನ 11,56,569 ಮಾದರಿಗಳನ್ನು ಸಂಗ್ರಹಿಸಿರುವುದಾಗಿ ಭಾರತೀಯ ವೈದ್ಯಕೀಯ ಅಧ್ಯಯನ ಸಂಸ್ಥೆ (ಐಸಿಎಂಆರ್) ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>