<p><strong>ಮಾವ್ (ಮಧ್ಯಪ್ರದೇಶ):</strong> ದಶಕಗಳ ಹಿಂದೆ ₹2000 ಕೋಟಿಯಷ್ಟಿದ್ದ ಭಾರತದ ರಕ್ಷಣಾ ರಫ್ತು, ಪ್ರಸ್ತುತ ದಾಖಲೆಯ ₹21,000 ಕೋಟಿಗೆ ದಾಟಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ತಿಳಿಸಿದ್ದಾರೆ.</p>.<p>ಮಾವ್ ಸೇನಾ ದಂಡುನೆಲೆಯ ಆರ್ಮಿ ವಾರ್ ಕಾಲೇಜಿನ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಸಿಂಗ್ ಅವರು, 2029ರ ವೇಳೆಗೆ ₹50,000 ಕೋಟಿ ರಕ್ಷಣಾ ರಫ್ತು ಸಾಧಿಸುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದರು.</p>.<p>ಭವಿಷ್ಯದ ಸವಾಲುಗಳನ್ನು ಎದುರಿಸಲು ಸೈನಿಕರನ್ನು ಸಜ್ಜುಗೊಳಿಸುವಲ್ಲಿ ಸೇನಾ ತರಬೇತಿ ಕೇಂದ್ರಗಳ ಪಾತ್ರ ಮಹತ್ವದಾಗಿದೆ ಎಂದು ಸಿಂಗ್ ಹೇಳಿದರು.</p>.<p class="title">ಭಾರತದಲ್ಲಿ ತಯಾರಾಗುತ್ತಿರುವ ಉಪಕರಣಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ ಎಂದರು.</p>.<p class="title">ಬದಲಾಗುತ್ತಿರುವ ಯುದ್ಧದ ಸ್ವರೂಪಗಳ ಕುರಿತು ಮಾತನಾಡಿದ ಸಿಂಗ್, ‘ಮಾಹಿತಿ ಯುದ್ಧ, ಕೃತಕ ಬುದ್ಧಿಮತ್ತೆ ಆಧಾರಿತ ಯುದ್ಧ, ಪರೋಕ್ಷ ಯುದ್ಧ ಮತ್ತು ಸೈಬರ್ ದಾಳಿಗಳು ಸೇರಿದಂತೆ ಅನೇಕ ಅಸಾಂಪ್ರದಾಯಿಕ ವಿಧಾನಗಳು ದೊಡ್ಡ ಸವಾಲುಗಳನ್ನು ಒಡ್ಡುತ್ತಿವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾವ್ (ಮಧ್ಯಪ್ರದೇಶ):</strong> ದಶಕಗಳ ಹಿಂದೆ ₹2000 ಕೋಟಿಯಷ್ಟಿದ್ದ ಭಾರತದ ರಕ್ಷಣಾ ರಫ್ತು, ಪ್ರಸ್ತುತ ದಾಖಲೆಯ ₹21,000 ಕೋಟಿಗೆ ದಾಟಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ತಿಳಿಸಿದ್ದಾರೆ.</p>.<p>ಮಾವ್ ಸೇನಾ ದಂಡುನೆಲೆಯ ಆರ್ಮಿ ವಾರ್ ಕಾಲೇಜಿನ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಸಿಂಗ್ ಅವರು, 2029ರ ವೇಳೆಗೆ ₹50,000 ಕೋಟಿ ರಕ್ಷಣಾ ರಫ್ತು ಸಾಧಿಸುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದರು.</p>.<p>ಭವಿಷ್ಯದ ಸವಾಲುಗಳನ್ನು ಎದುರಿಸಲು ಸೈನಿಕರನ್ನು ಸಜ್ಜುಗೊಳಿಸುವಲ್ಲಿ ಸೇನಾ ತರಬೇತಿ ಕೇಂದ್ರಗಳ ಪಾತ್ರ ಮಹತ್ವದಾಗಿದೆ ಎಂದು ಸಿಂಗ್ ಹೇಳಿದರು.</p>.<p class="title">ಭಾರತದಲ್ಲಿ ತಯಾರಾಗುತ್ತಿರುವ ಉಪಕರಣಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ ಎಂದರು.</p>.<p class="title">ಬದಲಾಗುತ್ತಿರುವ ಯುದ್ಧದ ಸ್ವರೂಪಗಳ ಕುರಿತು ಮಾತನಾಡಿದ ಸಿಂಗ್, ‘ಮಾಹಿತಿ ಯುದ್ಧ, ಕೃತಕ ಬುದ್ಧಿಮತ್ತೆ ಆಧಾರಿತ ಯುದ್ಧ, ಪರೋಕ್ಷ ಯುದ್ಧ ಮತ್ತು ಸೈಬರ್ ದಾಳಿಗಳು ಸೇರಿದಂತೆ ಅನೇಕ ಅಸಾಂಪ್ರದಾಯಿಕ ವಿಧಾನಗಳು ದೊಡ್ಡ ಸವಾಲುಗಳನ್ನು ಒಡ್ಡುತ್ತಿವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>