<p><strong>ನಾಗ್ಪುರ:</strong> ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ದೇಶಗಳಲ್ಲಿ ಆದ ಸ್ಥಿತಿಯನ್ನು ಹೋಲಿಸಿದ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರು, ಭಾರತದಲ್ಲಿಯೂ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಹೇಳಿದರು. </p>.<p>ಈ ವಿಷಯ ಜಾಗತಿಕವಾಗಿಯೂ ಚರ್ಚೆಗೆ ಒಳಪಟ್ಟಿದೆ ಎಂದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸೋಲಾಪುರ ಜಿಲ್ಲೆಯ ಮರಕಡವಾಡಿ ನಿವಾಸಿಗಳು ಇವಿಎಂ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದಾರೆ ಮತ್ತು ಮತಪತ್ರ ಬಳಸಿ ಮರು ಚುನಾವಣೆ ನಡೆಸಲು ಬಯಸಿದ್ದಾರೆ. ಈ ಬಗ್ಗೆ ಬೃಹತ್ ಚಳವಳಿಯೇ ರೂಪುಗೊಂಡಿದೆ’ ಎಂದು ಹೇಳಿದರು.</p>.<p>ಮರು ಚುನಾವಣೆಗೆ ಯೋಜನೆ ರೂಪಿಸಿದ ಆರೋಪದ ಮೇಲೆ ಹಲವು ಗ್ರಾಮಸ್ಥರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದನ್ನು ಉಲ್ಲೇಖಿಸಿ, ಮರಕಡವಾಡಿ ಜನರ ಧ್ವನಿಯನ್ನು ಸರ್ಕಾರ ಹತ್ತಿಕ್ಕುತ್ತಿದೆ ಎಂದು ಆರೋಪಿಸಿದರು.</p>.<p>ವಿರೋಧ ಪಕ್ಷದ ನಾಯಕನ ಆಯ್ಕೆ ಕುರಿತ ಪ್ರಶ್ನೆಗೆ, ‘ಮಹಾವಿಕಾಸ್ ಆಘಾಡಿ ಮಿತ್ರಪಕ್ಷಗಳಾದ ಕಾಂಗ್ರೆಸ್, ಶಿವಸೇನೆ (ಉದ್ಧವ್), ಎನ್ಸಿಪಿ(ಎಸ್ಪಿ) ಮಾತುಕತೆ ನಡೆಸಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಿವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗ್ಪುರ:</strong> ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ದೇಶಗಳಲ್ಲಿ ಆದ ಸ್ಥಿತಿಯನ್ನು ಹೋಲಿಸಿದ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರು, ಭಾರತದಲ್ಲಿಯೂ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಹೇಳಿದರು. </p>.<p>ಈ ವಿಷಯ ಜಾಗತಿಕವಾಗಿಯೂ ಚರ್ಚೆಗೆ ಒಳಪಟ್ಟಿದೆ ಎಂದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸೋಲಾಪುರ ಜಿಲ್ಲೆಯ ಮರಕಡವಾಡಿ ನಿವಾಸಿಗಳು ಇವಿಎಂ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದಾರೆ ಮತ್ತು ಮತಪತ್ರ ಬಳಸಿ ಮರು ಚುನಾವಣೆ ನಡೆಸಲು ಬಯಸಿದ್ದಾರೆ. ಈ ಬಗ್ಗೆ ಬೃಹತ್ ಚಳವಳಿಯೇ ರೂಪುಗೊಂಡಿದೆ’ ಎಂದು ಹೇಳಿದರು.</p>.<p>ಮರು ಚುನಾವಣೆಗೆ ಯೋಜನೆ ರೂಪಿಸಿದ ಆರೋಪದ ಮೇಲೆ ಹಲವು ಗ್ರಾಮಸ್ಥರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದನ್ನು ಉಲ್ಲೇಖಿಸಿ, ಮರಕಡವಾಡಿ ಜನರ ಧ್ವನಿಯನ್ನು ಸರ್ಕಾರ ಹತ್ತಿಕ್ಕುತ್ತಿದೆ ಎಂದು ಆರೋಪಿಸಿದರು.</p>.<p>ವಿರೋಧ ಪಕ್ಷದ ನಾಯಕನ ಆಯ್ಕೆ ಕುರಿತ ಪ್ರಶ್ನೆಗೆ, ‘ಮಹಾವಿಕಾಸ್ ಆಘಾಡಿ ಮಿತ್ರಪಕ್ಷಗಳಾದ ಕಾಂಗ್ರೆಸ್, ಶಿವಸೇನೆ (ಉದ್ಧವ್), ಎನ್ಸಿಪಿ(ಎಸ್ಪಿ) ಮಾತುಕತೆ ನಡೆಸಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಿವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>