<p><strong>ನವದೆಹಲಿ</strong>: ಕೆಲಸದ ನಿಮಿತ್ತ ವಿದೇಶಕ್ಕೆ ಪ್ರಯಾಣಿಸಲು ಪಾಡ್ಕಾಸ್ಟರ್ ರಣವೀರ್ ಅಲಹಾಬಾದಿಯಾ ಅವರಿಗೆ ಪಾಸ್ಪೋರ್ಟ್ ಹಿಂದಿರುಗಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ.</p>.<p>ರಣವೀರ್ ವಿರುದ್ಧದ ತನಿಖೆ ಪೂರ್ಣಗೊಂಡಿದೆ ಎಂದು ಅಸ್ಸಾಂ ಮತ್ತು ಮಹಾರಾಷ್ಟ್ರ ಸರ್ಕಾರಗಳು ಹೇಳಿದ ಕಾರಣ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರ ಪೀಠವು ಷರತ್ತುಗಳನ್ನು ಸಡಿಲಿಸಲು ನಿರ್ಧರಿಸಿತು.</p>.<p>ಪಾಸ್ಪೋರ್ಟ್ ವಾಪಸ್ ಪಡೆಯಲು ಮಹಾರಾಷ್ಟ್ರ ಸೈಬರ್ ಪೊಲೀಸ್ ಬ್ಯೂರೊವನ್ನು ಸಂಪರ್ಕಿಸುವಂತೆಯೂ ಪೀಠವು ಅವರಿಗೆ ಸೂಚಿಸಿದೆ.</p>.<p>ತನ್ನ ವಿರುದ್ಧ ವಿವಿಧೆಡೆ ದಾಖಲಾಗಿರುವ ಎಫ್ಐಆರ್ಗಳನ್ನು ಒಗ್ಗೂಡಿಸಿ, ಒಂದೇ ಕಡೆ ವಿಚಾರಣೆಗೆ ಹಾಜರಾಗಲು ಅವಕಾಶ ನೀಡಬೇಕೆಂದು ಕೋರಿ ರಣವೀರ್ ಸಲ್ಲಿಸಿರುವ ಮನವಿಯನ್ನು ಪರಿಗಣಿಸುವುದಾಗಿ ಪೀಠವು, ಅವರ ಪರ ಹಾಜರಾದ ಹಿರಿಯ ವಕೀಲ ಅಭಿನವ್ ಚಂದ್ರಚೂಡ್ ಅವರಿಗೆ ತಿಳಿಸಿತು.</p>.<p>‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ಆಡಿದ ಅಶ್ಲೀಲ ಮಾತುಗಳ ಸಂಬಂಧ ರಣವೀರ್ ವಿರುದ್ಧ ಹಲವೆಡೆ ಎಫ್ಐಆರ್ ದಾಖಲಾಗಿದೆ. ತಮ್ಮ ವಿರುದ್ಧ ಕಠಿಣ ಕ್ರಮ ಜರುಗಿಸದಂತೆ ರಕ್ಷಣೆ ನೀಡಬೇಕು ಎಂದು ಕೋರಿ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.</p>.<p>ರಣವೀರ್ ಅವರನ್ನು ಬಂಧಿಸಬಾರದು ಎಂದು ಫೆ.18ರ ತನ್ನ ಆದೇಶದಲ್ಲಿ ಹೇಳಿದ್ದ ಸುಪ್ರೀಂ ಕೋರ್ಟ್, ಪಾಸ್ಪೋರ್ಟ್ ಅನ್ನು ಪ್ರಕರಣದ ವಿಚಾರಣೆ ನಡೆಸುತ್ತಿರುವ ಸೈಬರ್ ಅಪರಾಧ ಪೊಲೀಸ್ ಠಾಣೆಗೆ ಒಪ್ಪಿಸುವಂತೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೆಲಸದ ನಿಮಿತ್ತ ವಿದೇಶಕ್ಕೆ ಪ್ರಯಾಣಿಸಲು ಪಾಡ್ಕಾಸ್ಟರ್ ರಣವೀರ್ ಅಲಹಾಬಾದಿಯಾ ಅವರಿಗೆ ಪಾಸ್ಪೋರ್ಟ್ ಹಿಂದಿರುಗಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ.</p>.<p>ರಣವೀರ್ ವಿರುದ್ಧದ ತನಿಖೆ ಪೂರ್ಣಗೊಂಡಿದೆ ಎಂದು ಅಸ್ಸಾಂ ಮತ್ತು ಮಹಾರಾಷ್ಟ್ರ ಸರ್ಕಾರಗಳು ಹೇಳಿದ ಕಾರಣ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರ ಪೀಠವು ಷರತ್ತುಗಳನ್ನು ಸಡಿಲಿಸಲು ನಿರ್ಧರಿಸಿತು.</p>.<p>ಪಾಸ್ಪೋರ್ಟ್ ವಾಪಸ್ ಪಡೆಯಲು ಮಹಾರಾಷ್ಟ್ರ ಸೈಬರ್ ಪೊಲೀಸ್ ಬ್ಯೂರೊವನ್ನು ಸಂಪರ್ಕಿಸುವಂತೆಯೂ ಪೀಠವು ಅವರಿಗೆ ಸೂಚಿಸಿದೆ.</p>.<p>ತನ್ನ ವಿರುದ್ಧ ವಿವಿಧೆಡೆ ದಾಖಲಾಗಿರುವ ಎಫ್ಐಆರ್ಗಳನ್ನು ಒಗ್ಗೂಡಿಸಿ, ಒಂದೇ ಕಡೆ ವಿಚಾರಣೆಗೆ ಹಾಜರಾಗಲು ಅವಕಾಶ ನೀಡಬೇಕೆಂದು ಕೋರಿ ರಣವೀರ್ ಸಲ್ಲಿಸಿರುವ ಮನವಿಯನ್ನು ಪರಿಗಣಿಸುವುದಾಗಿ ಪೀಠವು, ಅವರ ಪರ ಹಾಜರಾದ ಹಿರಿಯ ವಕೀಲ ಅಭಿನವ್ ಚಂದ್ರಚೂಡ್ ಅವರಿಗೆ ತಿಳಿಸಿತು.</p>.<p>‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ಆಡಿದ ಅಶ್ಲೀಲ ಮಾತುಗಳ ಸಂಬಂಧ ರಣವೀರ್ ವಿರುದ್ಧ ಹಲವೆಡೆ ಎಫ್ಐಆರ್ ದಾಖಲಾಗಿದೆ. ತಮ್ಮ ವಿರುದ್ಧ ಕಠಿಣ ಕ್ರಮ ಜರುಗಿಸದಂತೆ ರಕ್ಷಣೆ ನೀಡಬೇಕು ಎಂದು ಕೋರಿ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.</p>.<p>ರಣವೀರ್ ಅವರನ್ನು ಬಂಧಿಸಬಾರದು ಎಂದು ಫೆ.18ರ ತನ್ನ ಆದೇಶದಲ್ಲಿ ಹೇಳಿದ್ದ ಸುಪ್ರೀಂ ಕೋರ್ಟ್, ಪಾಸ್ಪೋರ್ಟ್ ಅನ್ನು ಪ್ರಕರಣದ ವಿಚಾರಣೆ ನಡೆಸುತ್ತಿರುವ ಸೈಬರ್ ಅಪರಾಧ ಪೊಲೀಸ್ ಠಾಣೆಗೆ ಒಪ್ಪಿಸುವಂತೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>