<p><strong>ಲಖನೌ(ಪಿಟಿಐ):</strong> ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಬುಧವಾರ ಮತ್ತೊಂದು ಚೀತಾ ಮೃತಪಟ್ಟಿರುವ ಬೆನ್ನಲ್ಲೇ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ‘ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ವರ್ಚಸ್ಸು ಹಾಳಾಗುತ್ತಿದೆ’ ಎಂದು ಹೇಳಿದ್ದಾರೆ.</p>.<p>ಕುನೊ ಉದ್ಯಾನದಲ್ಲಿ ‘ಧಾತ್ರಿ’ ಎಂಬ ಹೆಣ್ಣು ಚೀತಾದ ಮೃತದೇಹ ಬುಧವಾರ ಬೆಳಿಗ್ಗೆ ದೊರೆತಿತ್ತು. ಇದರ ಸಾವಿನ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಅರಣ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ. ಮಾರ್ಚ್ನಿಂದ ಇಲ್ಲಿಯವರೆಗೆ ಉದ್ಯಾನದಲ್ಲಿರುವ ಒಟ್ಟು ಚೀತಾಗಳ ಪೈಕಿ ಒಂಬತ್ತು ಸಾವಿಗೀಡಾಗಿವೆ.</p>.<p>ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅಖಿಲೇಶ್ ಅವರು, ‘ಈ ಚೀತಾಗಳ ಸಾವಿಗೆ ಯಾರು ಜವಾಬ್ದಾರರು? ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಚೀತಾಗಳನ್ನು ಕರೆತಂದು ಬಿಡುವ ಕಾರ್ಯಕ್ರಮದ ಪ್ರಚಾರದಲ್ಲಿ ನಿರತರಾಗಿದ್ದವರೆಲ್ಲರೂ ಈಗ ಎಲ್ಲಿದ್ದಾರೆ?’ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ(ಪಿಟಿಐ):</strong> ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಬುಧವಾರ ಮತ್ತೊಂದು ಚೀತಾ ಮೃತಪಟ್ಟಿರುವ ಬೆನ್ನಲ್ಲೇ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ‘ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ವರ್ಚಸ್ಸು ಹಾಳಾಗುತ್ತಿದೆ’ ಎಂದು ಹೇಳಿದ್ದಾರೆ.</p>.<p>ಕುನೊ ಉದ್ಯಾನದಲ್ಲಿ ‘ಧಾತ್ರಿ’ ಎಂಬ ಹೆಣ್ಣು ಚೀತಾದ ಮೃತದೇಹ ಬುಧವಾರ ಬೆಳಿಗ್ಗೆ ದೊರೆತಿತ್ತು. ಇದರ ಸಾವಿನ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಅರಣ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ. ಮಾರ್ಚ್ನಿಂದ ಇಲ್ಲಿಯವರೆಗೆ ಉದ್ಯಾನದಲ್ಲಿರುವ ಒಟ್ಟು ಚೀತಾಗಳ ಪೈಕಿ ಒಂಬತ್ತು ಸಾವಿಗೀಡಾಗಿವೆ.</p>.<p>ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅಖಿಲೇಶ್ ಅವರು, ‘ಈ ಚೀತಾಗಳ ಸಾವಿಗೆ ಯಾರು ಜವಾಬ್ದಾರರು? ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಚೀತಾಗಳನ್ನು ಕರೆತಂದು ಬಿಡುವ ಕಾರ್ಯಕ್ರಮದ ಪ್ರಚಾರದಲ್ಲಿ ನಿರತರಾಗಿದ್ದವರೆಲ್ಲರೂ ಈಗ ಎಲ್ಲಿದ್ದಾರೆ?’ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>