<p><strong>ನವದೆಹಲಿ</strong>: ‘ಭಾರತದ ರಾಷ್ಟ್ರೀಯ ಭದ್ರತಾ ಹಿತಾಸಕ್ತಿಯ ದೃಷ್ಟಿಯಿಂದ ಖಾಲಿಸ್ತಾನ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನೂ ಹತ್ಯೆಯಲ್ಲಿ ದೇಶದ ಸರ್ಕಾರಿ ಅಧಿಕಾರಿ ಭಾಗಿಯಾಗಿದ್ದಾರೆ ಎಂಬ ಆರೋಪದ ತನಿಖೆ ನಡೆಯುತ್ತಿದೆ’ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಸೋಮವಾರ ಹೇಳಿದ್ದಾರೆ.</p>.<p>‘ಮತ್ತೊಂದು ದೇಶದ ಪ್ರಜೆಯ ಹತ್ಯೆಯಲ್ಲಿ ಸರ್ಕಾರಿ ಅಧಿಕಾರಿಯೊಬ್ಬ ಭಾಗಿಯಾಗಿರುವುದು ಸ್ವೀಕಾರಾರ್ಹವಲ್ಲ’ ಎಂದು ಭಾರತದಲ್ಲಿರುವ ಅಮೆರಿಕ ರಾಯಭಾರಿ ಎರಿಕ್ ಗ್ರಾಸೆಟ್ಟಿ ಅವರ ಹೇಳಿಕೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಅಮೆರಿಕ ರಾಯಭಾರಿ ಅವರು ತಮಗೆ ಏನನ್ನಿಸುತ್ತಿದೆಯೋ ಅದನ್ನು ಹೇಳುತ್ತಿದ್ದಾರೆ’ ಎಂದರು.</p>.<p>‘ಪನ್ನೂ ಹತ್ಯೆ ಪ್ರಕರಣದ ಕುರಿತು ಪ್ರಸ್ತುತ ನನ್ನ ದೇಶದ ಸ್ಥಿತಿ ಇದಾಗಿದೆ. ನಾವು ನಡೆಸುತ್ತಿರುವ ತನಿಖೆಯಿಂದ ಈಗಾಗಲೇ ಕೆಲವು ಮಾಹಿತಿಗಳು ತಿಳಿದುಬಂದಿವೆ. ಆದ್ದರಿಂದ ಈ ಪ್ರಕರಣದ ತನಿಖೆ ಏನೇ ಹೇಳುವುದಿದ್ದರೂ ಖುಷಿಯಿಂದ ಹೇಳುತ್ತೇವೆ. ಈ ಸಂದರ್ಭದಲ್ಲಿ, ತನಿಖೆ ಪ್ರಗತಿಯಲ್ಲಿದೆ ಎಂಬುದನ್ನು ಬಿಟ್ಟು ಬೇರೇನೂ ಹೇಳಲು ಸಾಧ್ಯವಿಲ್ಲ’ ಎಂದೂ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಭಾರತದ ರಾಷ್ಟ್ರೀಯ ಭದ್ರತಾ ಹಿತಾಸಕ್ತಿಯ ದೃಷ್ಟಿಯಿಂದ ಖಾಲಿಸ್ತಾನ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನೂ ಹತ್ಯೆಯಲ್ಲಿ ದೇಶದ ಸರ್ಕಾರಿ ಅಧಿಕಾರಿ ಭಾಗಿಯಾಗಿದ್ದಾರೆ ಎಂಬ ಆರೋಪದ ತನಿಖೆ ನಡೆಯುತ್ತಿದೆ’ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಸೋಮವಾರ ಹೇಳಿದ್ದಾರೆ.</p>.<p>‘ಮತ್ತೊಂದು ದೇಶದ ಪ್ರಜೆಯ ಹತ್ಯೆಯಲ್ಲಿ ಸರ್ಕಾರಿ ಅಧಿಕಾರಿಯೊಬ್ಬ ಭಾಗಿಯಾಗಿರುವುದು ಸ್ವೀಕಾರಾರ್ಹವಲ್ಲ’ ಎಂದು ಭಾರತದಲ್ಲಿರುವ ಅಮೆರಿಕ ರಾಯಭಾರಿ ಎರಿಕ್ ಗ್ರಾಸೆಟ್ಟಿ ಅವರ ಹೇಳಿಕೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಅಮೆರಿಕ ರಾಯಭಾರಿ ಅವರು ತಮಗೆ ಏನನ್ನಿಸುತ್ತಿದೆಯೋ ಅದನ್ನು ಹೇಳುತ್ತಿದ್ದಾರೆ’ ಎಂದರು.</p>.<p>‘ಪನ್ನೂ ಹತ್ಯೆ ಪ್ರಕರಣದ ಕುರಿತು ಪ್ರಸ್ತುತ ನನ್ನ ದೇಶದ ಸ್ಥಿತಿ ಇದಾಗಿದೆ. ನಾವು ನಡೆಸುತ್ತಿರುವ ತನಿಖೆಯಿಂದ ಈಗಾಗಲೇ ಕೆಲವು ಮಾಹಿತಿಗಳು ತಿಳಿದುಬಂದಿವೆ. ಆದ್ದರಿಂದ ಈ ಪ್ರಕರಣದ ತನಿಖೆ ಏನೇ ಹೇಳುವುದಿದ್ದರೂ ಖುಷಿಯಿಂದ ಹೇಳುತ್ತೇವೆ. ಈ ಸಂದರ್ಭದಲ್ಲಿ, ತನಿಖೆ ಪ್ರಗತಿಯಲ್ಲಿದೆ ಎಂಬುದನ್ನು ಬಿಟ್ಟು ಬೇರೇನೂ ಹೇಳಲು ಸಾಧ್ಯವಿಲ್ಲ’ ಎಂದೂ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>