<p>Windshield of IndiGo aircraft cracks ahead of its arrival in Chennai</p><p>ಚೆನ್ನೈ: ಮಧುರೈನಿಂದ 76 ಪ್ರಯಾಣಿಕರನ್ನು ಹೊತ್ತು ಬಂದಿದ್ದ ಇಂಡಿಗೊ ಸಂಸ್ಥೆಯ ವಿಮಾನದ ವಿಂಡ್ಶೀಲ್ಡ್ನಲ್ಲಿ ಲ್ಯಾಂಡಿಂಗ್ ವೇಳೆ ಬಿರುಕು ಕಾಣಿಸಿಕೊಂಡಿದೆ. ಬಿರುಕು ಬಿಟ್ಟಿರುವುದನ್ನು ಪೈಲಟ್ ಪತ್ತೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಮುಂಭಾಗದ ಗಾಜಿನಲ್ಲಿ ಬಿರುಕು ಕಾಣಿಸಿಕೊಂಡಿರುವುದನ್ನು ಪೈಲಟ್ ಗಮನಿಸಿ ವಿಮಾನ ನಿಲ್ದಾಣದಲ್ಲಿನ ವಾಯು ಸಂಚಾರ ನಿಯಂತ್ರಕರಿಗೆ ಮಾಹಿತಿ ನೀಡಿದರು.</p><p>ಮಾಹಿತಿ ಪಡೆದ ನಂತರ, ವಿಮಾನ ನಿಲ್ದಾಣದಲ್ಲಿ ಬೇಕಾದ ವ್ಯವಸ್ಥೆ ಮಾಡಿ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಯಿತು ಎಂದು ಅವರು ಹೇಳಿದ್ದಾರೆ.</p><p>ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ದು ಪಾರ್ಕಿಂಗ್ ಮಾಡಿ, ನಂತರ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಗಿದೆ. ಪ್ರಸ್ತುತ, ವಿಂಡ್ಶೀಲ್ಡ್ ಅನ್ನು ಬದಲಾಯಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p><p>ಘಟನೆಯ ಕಾರಣ ಇನ್ನೂ ತಿಳಿದುಬಂದಿಲ್ಲ, ಘಟನೆಯಿಂದಾಗಿ, ಮಧುರೈಗೆ ವಿಮಾನದ ಮರು ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p><p>ಈ ಮಧ್ಯೆ, ವಿಮಾನಯಾನ ಸಂಸ್ಥೆಯಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>Windshield of IndiGo aircraft cracks ahead of its arrival in Chennai</p><p>ಚೆನ್ನೈ: ಮಧುರೈನಿಂದ 76 ಪ್ರಯಾಣಿಕರನ್ನು ಹೊತ್ತು ಬಂದಿದ್ದ ಇಂಡಿಗೊ ಸಂಸ್ಥೆಯ ವಿಮಾನದ ವಿಂಡ್ಶೀಲ್ಡ್ನಲ್ಲಿ ಲ್ಯಾಂಡಿಂಗ್ ವೇಳೆ ಬಿರುಕು ಕಾಣಿಸಿಕೊಂಡಿದೆ. ಬಿರುಕು ಬಿಟ್ಟಿರುವುದನ್ನು ಪೈಲಟ್ ಪತ್ತೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಮುಂಭಾಗದ ಗಾಜಿನಲ್ಲಿ ಬಿರುಕು ಕಾಣಿಸಿಕೊಂಡಿರುವುದನ್ನು ಪೈಲಟ್ ಗಮನಿಸಿ ವಿಮಾನ ನಿಲ್ದಾಣದಲ್ಲಿನ ವಾಯು ಸಂಚಾರ ನಿಯಂತ್ರಕರಿಗೆ ಮಾಹಿತಿ ನೀಡಿದರು.</p><p>ಮಾಹಿತಿ ಪಡೆದ ನಂತರ, ವಿಮಾನ ನಿಲ್ದಾಣದಲ್ಲಿ ಬೇಕಾದ ವ್ಯವಸ್ಥೆ ಮಾಡಿ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಯಿತು ಎಂದು ಅವರು ಹೇಳಿದ್ದಾರೆ.</p><p>ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ದು ಪಾರ್ಕಿಂಗ್ ಮಾಡಿ, ನಂತರ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಗಿದೆ. ಪ್ರಸ್ತುತ, ವಿಂಡ್ಶೀಲ್ಡ್ ಅನ್ನು ಬದಲಾಯಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p><p>ಘಟನೆಯ ಕಾರಣ ಇನ್ನೂ ತಿಳಿದುಬಂದಿಲ್ಲ, ಘಟನೆಯಿಂದಾಗಿ, ಮಧುರೈಗೆ ವಿಮಾನದ ಮರು ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p><p>ಈ ಮಧ್ಯೆ, ವಿಮಾನಯಾನ ಸಂಸ್ಥೆಯಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>