<p><strong>ನವದೆಹಲಿ:</strong> 1975ರ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ತಮ್ಮ ಅತ್ಯಂತ ಕಟು ವಿಮರ್ಶಕ, ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿ ವಿರೋಧಿ ಚಳವಳಿಯ ನಾಯಕ ಜಯಪ್ರಕಾಶ್ ನಾರಾಯಣ್ ಅವರ ಚಿಕಿತ್ಸೆಗಾಗಿ ಸದ್ದಿಲ್ಲದೆ ₹90,000 ಧನ ಸಹಾಯ ಮಾಡಿದ್ದರು ಎಂಬ ವಿಚಾರ ತಿಳಿದುಬಂದಿದೆ.</p><p>ಜಯಪ್ರಕಾಶ್ ನಾರಾಯಣ್ ಅವರ ಆರೋಗ್ಯ ಹದಗೆಟ್ಟಿದ್ದ ಸಮಯದಲ್ಲಿ ಜೀವ ಉಳಿಸುವ ಪೋರ್ಟಬಲ್ ಡಯಾಲಿಸಿಸ್ ಯಂತ್ರದ ಅಗತ್ಯವಿತ್ತು. ಆಗ ಇಂದಿರಾ ಗಾಂಧಿ ನೀಡಿದ್ದ ಹಣವನ್ನು ಬಳಸಲಾಯಿತು ಎಂದು ಪತ್ರಕರ್ತ ಸುಗತ ಶ್ರೀನಿವಾಸರಾಜು ಬರೆದಿರುವ ‘ದಿ ಕನ್ಸೈನ್ಸ್ ನೆಟ್ವರ್ಕ್: ಎ ಕ್ರಾನಿಕಲ್ ಆಫ್ ರೆಸಿಸ್ಟೆನ್ಸ್ ಟು ಎ ಡಿಕ್ಟೇಟರ್ಶಿಪ್’ ಎಂಬ ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ. </p><p>ತುರ್ತು ಪರಿಸ್ಥಿತಿ ಘೋಷಿಸಿದ ಕೆಲವೇ ಗಂಟೆಗಳ ನಂತರ 1975ರ ಜೂನ್ 26ರಂದು ಜಯಪ್ರಕಾಶ್ ನಾರಾಯಣ್ ಅವರನ್ನು ಬಂಧಿಸಿ ಚಂಡೀಗಢ ಜೈಲಿನಲ್ಲಿ ಇಡಲಾಗಿತ್ತು. ಬಳಿಕ ಆದೇ ವರ್ಷ ನವೆಂಬರ್ನಲ್ಲಿ 30 ದಿನಗಳ ಪೆರೋಲ್ ಮೇಲೆ ಬಿಡುಗಡೆಯಾಗಿದ್ದರು ಎಂದು ಪುಸ್ತಕದಲ್ಲಿ ತಿಳಿಸಲಾಗಿದೆ. </p><p>ಜೆಪಿ ಅವರು ಪೊಲೀಸ್ ಕಸ್ಟಡಿಯಲ್ಲಿದ್ದಾಗ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದರು. ಆಗ ಅವರಿಗೆ ಪೋರ್ಟಬಲ್ ಡಯಾಲಿಸಿಸ್ ಯಂತ್ರದ ಅಗತ್ಯವಿತ್ತು. ಇಂದಿರಾ ನೇತೃತ್ವದ ಸರ್ಕಾರ ನೆರವು ಒದಗಿಸಲು ಮುಂದಾದರೂ ಜೆಪಿ ನಿರಾಕರಿಸಿದ್ದರು. ಬಳಿಕ ಅವರ ಅಭಿಮಾನಿಗಳು ಡಯಾಲಿಸಿಸ್ ಯಂತ್ರಕ್ಕಾಗಿ ದೇಣಿಗೆ ಸಂಗ್ರಹಿಸಲು ಅಭಿಯಾನ ಆರಂಭಿಸಿದ್ದರು. </p><p>ಜೆಪಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿರುವ ಸುದ್ದಿ ಹರಡುತ್ತಿದ್ದಂತೆ ಭಾರತ ಸೇರಿದಂತೆ ವಿದೇಶಗಳಲ್ಲಿ ಇರುವ ಬೆಂಬಲಿಗರು ಡಯಾಲಿಸಿಸ್ ಯಂತ್ರಕ್ಕಾಗಿ ಪ್ರತಿಯೊಬ್ಬ ವ್ಯಕ್ತಿಯಿಂದ ₹1 ಸಂಗ್ರಹಿಸುವುದು ನಿರ್ಧರಿಸಿದ್ದರು. ಆದಾಗ್ಯೂ, ಇದು ತಡವಾಗಿತ್ತು. ಈ ವಿಚಾರ ತಿಳಿದ ಇಂದಿರಾ ಗಾಂಧಿ ಅವರು ತಮ್ಮ ಕೊಡುಗೆಯಾಗಿ ಒಂದು ದೊಡ್ಡ ಮೊತ್ತದೊಂದಿಗೆ ಚೆಕ್ ಅನ್ನು ಕಳುಹಿಸಿದ್ದರು ಎಂದು ಪುಸ್ತಕದಲ್ಲಿ ಪ್ರಸ್ತಾಪಿಸಲಾಗಿದೆ.</p>.ತುರ್ತು ಪರಿಸ್ಥಿತಿ: ಸಂವಿಧಾನ ಏನು ಹೇಳುತ್ತದೆ?.ತುರ್ತು ಪರಿಸ್ಥಿತಿ @50 | ನಿರಂಕುಶ ಪ್ರಭುತ್ವದ ನೆನಪು.ತುರ್ತು ಪರಿಸ್ಥಿತಿ ಸವಾಲು ಗೆದ್ದ ಪ್ರಜಾಪ್ರಭುತ್ವ- ಬಸವರಾಜ ಬೊಮ್ಮಾಯಿ ಅವರ ಬರಹ.ಮಹಾರಾಷ್ಟ್ರ | ತುರ್ತು ಪರಿಸ್ಥಿತಿ: ಜೈಲು ಸೇರಿದ್ದವರ ಗೌರವಧನ ಹೆಚ್ಚಳಕ್ಕೆ ಸಮ್ಮತಿ.'The Emergency Diaries' ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಅನುಭವ ಹಂಚಿದ ಮೋದಿ.Emergency @50 | ಪ್ರಜಾಪ್ರಭುತ್ವ ಇತಿಹಾಸದ ಅತ್ಯಂತ ಕರಾಳ ಅಧ್ಯಾಯ: ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 1975ರ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ತಮ್ಮ ಅತ್ಯಂತ ಕಟು ವಿಮರ್ಶಕ, ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿ ವಿರೋಧಿ ಚಳವಳಿಯ ನಾಯಕ ಜಯಪ್ರಕಾಶ್ ನಾರಾಯಣ್ ಅವರ ಚಿಕಿತ್ಸೆಗಾಗಿ ಸದ್ದಿಲ್ಲದೆ ₹90,000 ಧನ ಸಹಾಯ ಮಾಡಿದ್ದರು ಎಂಬ ವಿಚಾರ ತಿಳಿದುಬಂದಿದೆ.</p><p>ಜಯಪ್ರಕಾಶ್ ನಾರಾಯಣ್ ಅವರ ಆರೋಗ್ಯ ಹದಗೆಟ್ಟಿದ್ದ ಸಮಯದಲ್ಲಿ ಜೀವ ಉಳಿಸುವ ಪೋರ್ಟಬಲ್ ಡಯಾಲಿಸಿಸ್ ಯಂತ್ರದ ಅಗತ್ಯವಿತ್ತು. ಆಗ ಇಂದಿರಾ ಗಾಂಧಿ ನೀಡಿದ್ದ ಹಣವನ್ನು ಬಳಸಲಾಯಿತು ಎಂದು ಪತ್ರಕರ್ತ ಸುಗತ ಶ್ರೀನಿವಾಸರಾಜು ಬರೆದಿರುವ ‘ದಿ ಕನ್ಸೈನ್ಸ್ ನೆಟ್ವರ್ಕ್: ಎ ಕ್ರಾನಿಕಲ್ ಆಫ್ ರೆಸಿಸ್ಟೆನ್ಸ್ ಟು ಎ ಡಿಕ್ಟೇಟರ್ಶಿಪ್’ ಎಂಬ ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ. </p><p>ತುರ್ತು ಪರಿಸ್ಥಿತಿ ಘೋಷಿಸಿದ ಕೆಲವೇ ಗಂಟೆಗಳ ನಂತರ 1975ರ ಜೂನ್ 26ರಂದು ಜಯಪ್ರಕಾಶ್ ನಾರಾಯಣ್ ಅವರನ್ನು ಬಂಧಿಸಿ ಚಂಡೀಗಢ ಜೈಲಿನಲ್ಲಿ ಇಡಲಾಗಿತ್ತು. ಬಳಿಕ ಆದೇ ವರ್ಷ ನವೆಂಬರ್ನಲ್ಲಿ 30 ದಿನಗಳ ಪೆರೋಲ್ ಮೇಲೆ ಬಿಡುಗಡೆಯಾಗಿದ್ದರು ಎಂದು ಪುಸ್ತಕದಲ್ಲಿ ತಿಳಿಸಲಾಗಿದೆ. </p><p>ಜೆಪಿ ಅವರು ಪೊಲೀಸ್ ಕಸ್ಟಡಿಯಲ್ಲಿದ್ದಾಗ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದರು. ಆಗ ಅವರಿಗೆ ಪೋರ್ಟಬಲ್ ಡಯಾಲಿಸಿಸ್ ಯಂತ್ರದ ಅಗತ್ಯವಿತ್ತು. ಇಂದಿರಾ ನೇತೃತ್ವದ ಸರ್ಕಾರ ನೆರವು ಒದಗಿಸಲು ಮುಂದಾದರೂ ಜೆಪಿ ನಿರಾಕರಿಸಿದ್ದರು. ಬಳಿಕ ಅವರ ಅಭಿಮಾನಿಗಳು ಡಯಾಲಿಸಿಸ್ ಯಂತ್ರಕ್ಕಾಗಿ ದೇಣಿಗೆ ಸಂಗ್ರಹಿಸಲು ಅಭಿಯಾನ ಆರಂಭಿಸಿದ್ದರು. </p><p>ಜೆಪಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿರುವ ಸುದ್ದಿ ಹರಡುತ್ತಿದ್ದಂತೆ ಭಾರತ ಸೇರಿದಂತೆ ವಿದೇಶಗಳಲ್ಲಿ ಇರುವ ಬೆಂಬಲಿಗರು ಡಯಾಲಿಸಿಸ್ ಯಂತ್ರಕ್ಕಾಗಿ ಪ್ರತಿಯೊಬ್ಬ ವ್ಯಕ್ತಿಯಿಂದ ₹1 ಸಂಗ್ರಹಿಸುವುದು ನಿರ್ಧರಿಸಿದ್ದರು. ಆದಾಗ್ಯೂ, ಇದು ತಡವಾಗಿತ್ತು. ಈ ವಿಚಾರ ತಿಳಿದ ಇಂದಿರಾ ಗಾಂಧಿ ಅವರು ತಮ್ಮ ಕೊಡುಗೆಯಾಗಿ ಒಂದು ದೊಡ್ಡ ಮೊತ್ತದೊಂದಿಗೆ ಚೆಕ್ ಅನ್ನು ಕಳುಹಿಸಿದ್ದರು ಎಂದು ಪುಸ್ತಕದಲ್ಲಿ ಪ್ರಸ್ತಾಪಿಸಲಾಗಿದೆ.</p>.ತುರ್ತು ಪರಿಸ್ಥಿತಿ: ಸಂವಿಧಾನ ಏನು ಹೇಳುತ್ತದೆ?.ತುರ್ತು ಪರಿಸ್ಥಿತಿ @50 | ನಿರಂಕುಶ ಪ್ರಭುತ್ವದ ನೆನಪು.ತುರ್ತು ಪರಿಸ್ಥಿತಿ ಸವಾಲು ಗೆದ್ದ ಪ್ರಜಾಪ್ರಭುತ್ವ- ಬಸವರಾಜ ಬೊಮ್ಮಾಯಿ ಅವರ ಬರಹ.ಮಹಾರಾಷ್ಟ್ರ | ತುರ್ತು ಪರಿಸ್ಥಿತಿ: ಜೈಲು ಸೇರಿದ್ದವರ ಗೌರವಧನ ಹೆಚ್ಚಳಕ್ಕೆ ಸಮ್ಮತಿ.'The Emergency Diaries' ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಅನುಭವ ಹಂಚಿದ ಮೋದಿ.Emergency @50 | ಪ್ರಜಾಪ್ರಭುತ್ವ ಇತಿಹಾಸದ ಅತ್ಯಂತ ಕರಾಳ ಅಧ್ಯಾಯ: ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>