<p><strong>ನವದೆಹಲಿ:</strong> ಬಡ್ತಿಯಲ್ಲಿ ಮೀಸಲಾತಿ ನೀಡುವಾಗ ಹಿಂದುಳಿದಿರುವಿಕೆ, ಪ್ರಾತಿನಿಧ್ಯದ ಕೊರತೆ ಹಾಗೂ ದಕ್ಷತೆ ಪರಿಗಣಿಸುವಂತೆ ಸುಪ್ರೀಂ ಕೋರ್ಟ್ನ ತೀರ್ಪು ಸೂಚಿಸಿದೆ. ಆದರೆ, ಈ ಬಗ್ಗೆ ಸ್ಪಷ್ಟತೆಯೇ ಇಲ್ಲ ಎಂದು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರರ ಪರ ವಕೀಲರಾದ ಇಂದಿರಾ ಜೈಸಿಂಗ್ ತಿಳಿಸಿದರು.</p>.<p>‘ಮೀಸಲಾತಿ ಆಧಾರದಲ್ಲಿ ಬಡ್ತಿ ಪಡೆದ ಸರ್ಕಾರಿ ನೌಕರರಿಗೆ ತತ್ಪರಿಣಾಮ ಜ್ಯೇಷ್ಠತೆ ವಿಸ್ತರಿಸುವ’ ನೂತನ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಬಿ.ಕೆ. ಪವಿತ್ರ ಸಲ್ಲಿಸಿರುವ ಮೇಲ್ಮನವಿಯ ಮುಂದುವರಿದ ವಿಚಾರಣೆ ವೇಳೆಮಂಗಳವಾರ ಅವರು ವಾದ ಮಂಡಿಸಿದರು.</p>.<p>ಆಯಾ ಪ್ರದೇಶಗಳ, ಸಮುದಾಯಗಳ ಜನಸಂಖ್ಯೆ ಆಧರಿಸಿ ಮೀಸಲಾತಿ ಪ್ರಮಾಣ ನಿಗದಿಪಡಿಸುವ ಅಗತ್ಯವಿದೆ. ಆದರೆ, ಮಹತ್ವದ ಮೂರು ಅಂಶಗಳ ಮಾಹಿತಿ ಒದಗಿಸುವಂತೆ ಸೂಚಿಸಲಾದ ತೀರ್ಪುಗಳಲ್ಲಿ ಈ ಕುರಿತ ವ್ಯಾಖ್ಯಾನ ಇಲ್ಲ ಎಂದು ಹೇಳಿದರು.</p>.<p>ಕೆನೆಪದರದ ತತ್ವ ಪಾಲಿಸುವಂತೆಯೂ ತೀರ್ಪುಗಳು ತಿಳಿಸಿವೆ. ಆದರೆ, ಈ ತತ್ವವು ಹಿಂದುಳಿದಿರುವಿಕೆಯನ್ನೇ ಆಧರಿಸಿದ್ದಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಿಂದುಳಿದಿರುವಿಕೆ ನಿರಂತರವಾಗಿದೆ. ಹಾಗಾಗಿ ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲೂ ಈ ತತ್ವವನ್ನು ವ್ಯಾಖ್ಯಾನಿಸಬಹುದಾಗಿದೆ ಎಂದರು.</p>.<p>ನಿಗಮ ಮತ್ತು ಮಂಡಳಿಗಳ ನೌಕರರಿಗೆ ಸಂಬಂಧಿಸಿದ ಮಾಹಿತಿಯು ರತ್ನಪ್ರಭಾ ಸಮಿತಿಯ ವರದಿಯಲ್ಲಿ ಇಲ್ಲ ಎಂದು ಅರ್ಜಿದಾರ ಬಿ.ಕೆ. ಪವಿತ್ರ ಪರ ವಕೀಲ ರಾಜೀವ್ ಧವನ್ ನ್ಯಾಯಪೀಠದ ಗಮನ ಸೆಳೆದರು.</p>.<p>ಇದಕ್ಕೂ ಮುನ್ನ ರಾಜ್ಯ ಸರ್ಕಾರದ ಪರ ವಕೀಲ ಬಸವಪ್ರಭು ಪಾಟೀಲ ತಮ್ಮ ವಾದ ಅಂತ್ಯಗೊಳಿಸಿದರು. ಬುಧವಾರ ಇಂದಿರಾ ವಾದ ಮುಂದುವರಿಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಡ್ತಿಯಲ್ಲಿ ಮೀಸಲಾತಿ ನೀಡುವಾಗ ಹಿಂದುಳಿದಿರುವಿಕೆ, ಪ್ರಾತಿನಿಧ್ಯದ ಕೊರತೆ ಹಾಗೂ ದಕ್ಷತೆ ಪರಿಗಣಿಸುವಂತೆ ಸುಪ್ರೀಂ ಕೋರ್ಟ್ನ ತೀರ್ಪು ಸೂಚಿಸಿದೆ. ಆದರೆ, ಈ ಬಗ್ಗೆ ಸ್ಪಷ್ಟತೆಯೇ ಇಲ್ಲ ಎಂದು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರರ ಪರ ವಕೀಲರಾದ ಇಂದಿರಾ ಜೈಸಿಂಗ್ ತಿಳಿಸಿದರು.</p>.<p>‘ಮೀಸಲಾತಿ ಆಧಾರದಲ್ಲಿ ಬಡ್ತಿ ಪಡೆದ ಸರ್ಕಾರಿ ನೌಕರರಿಗೆ ತತ್ಪರಿಣಾಮ ಜ್ಯೇಷ್ಠತೆ ವಿಸ್ತರಿಸುವ’ ನೂತನ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಬಿ.ಕೆ. ಪವಿತ್ರ ಸಲ್ಲಿಸಿರುವ ಮೇಲ್ಮನವಿಯ ಮುಂದುವರಿದ ವಿಚಾರಣೆ ವೇಳೆಮಂಗಳವಾರ ಅವರು ವಾದ ಮಂಡಿಸಿದರು.</p>.<p>ಆಯಾ ಪ್ರದೇಶಗಳ, ಸಮುದಾಯಗಳ ಜನಸಂಖ್ಯೆ ಆಧರಿಸಿ ಮೀಸಲಾತಿ ಪ್ರಮಾಣ ನಿಗದಿಪಡಿಸುವ ಅಗತ್ಯವಿದೆ. ಆದರೆ, ಮಹತ್ವದ ಮೂರು ಅಂಶಗಳ ಮಾಹಿತಿ ಒದಗಿಸುವಂತೆ ಸೂಚಿಸಲಾದ ತೀರ್ಪುಗಳಲ್ಲಿ ಈ ಕುರಿತ ವ್ಯಾಖ್ಯಾನ ಇಲ್ಲ ಎಂದು ಹೇಳಿದರು.</p>.<p>ಕೆನೆಪದರದ ತತ್ವ ಪಾಲಿಸುವಂತೆಯೂ ತೀರ್ಪುಗಳು ತಿಳಿಸಿವೆ. ಆದರೆ, ಈ ತತ್ವವು ಹಿಂದುಳಿದಿರುವಿಕೆಯನ್ನೇ ಆಧರಿಸಿದ್ದಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಿಂದುಳಿದಿರುವಿಕೆ ನಿರಂತರವಾಗಿದೆ. ಹಾಗಾಗಿ ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲೂ ಈ ತತ್ವವನ್ನು ವ್ಯಾಖ್ಯಾನಿಸಬಹುದಾಗಿದೆ ಎಂದರು.</p>.<p>ನಿಗಮ ಮತ್ತು ಮಂಡಳಿಗಳ ನೌಕರರಿಗೆ ಸಂಬಂಧಿಸಿದ ಮಾಹಿತಿಯು ರತ್ನಪ್ರಭಾ ಸಮಿತಿಯ ವರದಿಯಲ್ಲಿ ಇಲ್ಲ ಎಂದು ಅರ್ಜಿದಾರ ಬಿ.ಕೆ. ಪವಿತ್ರ ಪರ ವಕೀಲ ರಾಜೀವ್ ಧವನ್ ನ್ಯಾಯಪೀಠದ ಗಮನ ಸೆಳೆದರು.</p>.<p>ಇದಕ್ಕೂ ಮುನ್ನ ರಾಜ್ಯ ಸರ್ಕಾರದ ಪರ ವಕೀಲ ಬಸವಪ್ರಭು ಪಾಟೀಲ ತಮ್ಮ ವಾದ ಅಂತ್ಯಗೊಳಿಸಿದರು. ಬುಧವಾರ ಇಂದಿರಾ ವಾದ ಮುಂದುವರಿಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>