<p><strong>ಪಿಲಿಭಿತ್ (ಉತ್ತರಪ್ರದೇಶ):</strong> ಗಡಿಯಲ್ಲಿ ನೇಪಾಳ ಪೊಲೀಸರು ನಡೆಸಿದ ಗುಂಡಿನ ದಾಳಿವೇಳೆ ಗಾಯಗೊಂಡಿದ್ದ ಭಾರತದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಗುರುವಾರ ತಿಳಿಸಿದ್ದಾರೆ.</p>.<p>ಮೃತ ವ್ಯಕ್ತಿಯನ್ನು ಗೋವಿಂದ (26) ಎಂದು ಗುರುತಿಸಲಾಗಿದೆ. ಅವರು, ಪಪ್ಪು ಸಿಂಗ್ ಮತ್ತು ಗುರ್ಮೀತ್ ಸಿಂಗ್ ಎನ್ನುವವರೊಂದಿಗೆ ನೇಪಾಳಕ್ಕೆ ಪ್ರವೇಶಿಸಿದ್ದರು.ಮೂವರನ್ನು ನೇಪಾಳ ಪೊಲೀಸರು ತಡೆದಿದ್ದರು. ಈ ವೇಳೆವಾಗ್ವಾದ ನಡೆದಿದ್ದು, ಗೋವಿಂದ ಅವರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.</p>.<p>ಪ್ರಕರಣ ಕುರಿತು ಮಾತನಾಡಿರುವ ಪಿಲಿಭಿತ್ನ ಪೊಲೀಸ್ ಸೂಪರಿಂಟೆಂಡೆಂಟ್ ಜೈ ಪ್ರಕಾಶ್ ಅವರು, ʼಭಾರತದ ಮೂವರು ನೇಪಾಳ ಗಡಿ ಪ್ರವೇಶಿಸಿದ್ದಾರೆ ಹಾಗೂ ಅಲ್ಲಿನಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ ಎಂಬ ವಿಚಾರ ತಿಳಿಯಿತು. ಈ ವೇಳೆ ಗುಂಡಿನ ದಾಳಿ ನಡೆದಿದ್ದು, ಗಾಯಗೊಂಡಿದ್ದವ್ಯಕ್ತಿಯು ಆಸ್ಪತ್ರೆಗೆ ಸೇರಿಸುವ ವೇಳೆ ಮೃತಪಟ್ಟಿದ್ದಾನೆ. ಮತ್ತೊಬ್ಬ ಭಾರತದ ಗಡಿಯತ್ತ ಧಾವಿಸಿ ಜೀವ ಉಳಿಸಿಕೊಂಡಿದ್ದಾನೆ. ಆದರೆ, ಮತ್ತೊಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾನೆʼ ಎಂದು ತಿಳಿಸಿದ್ದಾರೆ.</p>.<p>ಘಟನೆ ಬಳಿಕ ಈ ಪ್ರದೇಶದಲ್ಲಿ ಪರಿಸ್ಥಿತಿ ಬಿಗಡಾಯಿಸಿದ್ದು,ಪೊಲೀಸರನ್ನು ನಿಯೋಜಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿಲಿಭಿತ್ (ಉತ್ತರಪ್ರದೇಶ):</strong> ಗಡಿಯಲ್ಲಿ ನೇಪಾಳ ಪೊಲೀಸರು ನಡೆಸಿದ ಗುಂಡಿನ ದಾಳಿವೇಳೆ ಗಾಯಗೊಂಡಿದ್ದ ಭಾರತದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಗುರುವಾರ ತಿಳಿಸಿದ್ದಾರೆ.</p>.<p>ಮೃತ ವ್ಯಕ್ತಿಯನ್ನು ಗೋವಿಂದ (26) ಎಂದು ಗುರುತಿಸಲಾಗಿದೆ. ಅವರು, ಪಪ್ಪು ಸಿಂಗ್ ಮತ್ತು ಗುರ್ಮೀತ್ ಸಿಂಗ್ ಎನ್ನುವವರೊಂದಿಗೆ ನೇಪಾಳಕ್ಕೆ ಪ್ರವೇಶಿಸಿದ್ದರು.ಮೂವರನ್ನು ನೇಪಾಳ ಪೊಲೀಸರು ತಡೆದಿದ್ದರು. ಈ ವೇಳೆವಾಗ್ವಾದ ನಡೆದಿದ್ದು, ಗೋವಿಂದ ಅವರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.</p>.<p>ಪ್ರಕರಣ ಕುರಿತು ಮಾತನಾಡಿರುವ ಪಿಲಿಭಿತ್ನ ಪೊಲೀಸ್ ಸೂಪರಿಂಟೆಂಡೆಂಟ್ ಜೈ ಪ್ರಕಾಶ್ ಅವರು, ʼಭಾರತದ ಮೂವರು ನೇಪಾಳ ಗಡಿ ಪ್ರವೇಶಿಸಿದ್ದಾರೆ ಹಾಗೂ ಅಲ್ಲಿನಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ ಎಂಬ ವಿಚಾರ ತಿಳಿಯಿತು. ಈ ವೇಳೆ ಗುಂಡಿನ ದಾಳಿ ನಡೆದಿದ್ದು, ಗಾಯಗೊಂಡಿದ್ದವ್ಯಕ್ತಿಯು ಆಸ್ಪತ್ರೆಗೆ ಸೇರಿಸುವ ವೇಳೆ ಮೃತಪಟ್ಟಿದ್ದಾನೆ. ಮತ್ತೊಬ್ಬ ಭಾರತದ ಗಡಿಯತ್ತ ಧಾವಿಸಿ ಜೀವ ಉಳಿಸಿಕೊಂಡಿದ್ದಾನೆ. ಆದರೆ, ಮತ್ತೊಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾನೆʼ ಎಂದು ತಿಳಿಸಿದ್ದಾರೆ.</p>.<p>ಘಟನೆ ಬಳಿಕ ಈ ಪ್ರದೇಶದಲ್ಲಿ ಪರಿಸ್ಥಿತಿ ಬಿಗಡಾಯಿಸಿದ್ದು,ಪೊಲೀಸರನ್ನು ನಿಯೋಜಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>