<p><strong>ಭೋಪಾಲ್:</strong> ‘ಭಾರತ ಮತ್ತು ಪಾಕಿಸ್ತಾನ ನಡುವಣ ಸೇನಾ ಸಂಘರ್ಷದ ಸಂದರ್ಭದಲ್ಲಿ ಅಮೆರಿಕದಿಂದ ದೂರವಾಣಿ ಕರೆ ಬಂದ ಹಿಂದೆಯೇ ಪ್ರಧಾನಿ ಮೋದಿ ಶರಣಾದರು’ ಎಂದು ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್ಗಾಂಧಿ ಟೀಕಿಸಿದರು. </p>.<p>ಇಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಅವರು, ‘1971ರ ಯುದ್ಧದ ಅವಧಿಯಲ್ಲಿ ಅಮೆರಿಕದಿಂದ ಒತ್ತಡ ಬಂದರೂ ಆಗಿನ ಪ್ರಧಾನಿ ಇಂದಿರಾಗಾಂಧಿ ಅವರು ಮಣಿದಿರಲಿಲ್ಲ’ ಎಂದು ಹೇಳಿದರು.</p>.<p class="title">‘ಈಗ ಟ್ರಂಪ್ ಅವರಿಂದ ಒಂದು ಕರೆ ಬಂತು. ನರೇಂದ್ರ ಮೋದಿ ತಕ್ಷಣ ಶರಣಾದರು. ತಲೆಬಾಗುವುದೇ ಬಿಜೆಪಿ ಮತ್ತು ಆರ್ಎಸ್ಎಸ್ನ ವ್ಯಕ್ತಿತ್ವವಾಗಿದೆ. 1971ರಲ್ಲಿ ಅಮೆರಿಕದ ಒತ್ತಡದ ನಡುವೆಯೂ ಭಾರತವು ಪಾಕಿಸ್ತಾನವನ್ನು ವಿಭಜಿಸಿತ್ತು’ ಎಂದು ಹೇಳಿದರು.</p>.<p class="title">ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ಸಂಘಟನೆ ಸೃಜನ ಅಭಿಯಾನಕ್ಕೆ ಚಾಲನೆ ನೀಡಿದ ಅವರು, ‘ಸ್ವಾತಂತ್ರ್ಯ ಹೋರಾಟದ ದಿನದಿಂದಲೂ ಶರಣಾಗತಿ ಪತ್ರ ಬರೆಯುವುದು ಆರ್ಎಸ್ಎಸ್–ಬಿಜೆಪಿಯವರಿಗೆ ಅಭ್ಯಾಸವಾಗಿದೆ’ ಎಂದರು.</p>.<p class="title">‘ಆರ್ಎಸ್ಎಸ್ ಮತ್ತು ಬಿಜೆಪಿ ವ್ಯಕ್ತಿತ್ವ ಹಾಗೂ ಕಾಂಗ್ರೆಸ್ ನಡುವೆ ಇರುವ ವ್ಯತ್ಯಾಸ ಇದೇ ಆಗಿದೆ. ಕಾಂಗ್ರೆಸ್ ಎಂದಿಗೂ ಶರಣಾಗಿಲ್ಲ. ಮಹಾತ್ಮಗಾಂಧಿ, ಜವಹರಲಾಲ್ ನೆಹರೂ, ವಲ್ಲಭಬಾಯಿ ಪಟೇಲ್ ಶರಣಾಗಿರಲಿಲ್ಲ. ಅವರು ಹೋರಾಡಿದರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong> ‘ಭಾರತ ಮತ್ತು ಪಾಕಿಸ್ತಾನ ನಡುವಣ ಸೇನಾ ಸಂಘರ್ಷದ ಸಂದರ್ಭದಲ್ಲಿ ಅಮೆರಿಕದಿಂದ ದೂರವಾಣಿ ಕರೆ ಬಂದ ಹಿಂದೆಯೇ ಪ್ರಧಾನಿ ಮೋದಿ ಶರಣಾದರು’ ಎಂದು ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್ಗಾಂಧಿ ಟೀಕಿಸಿದರು. </p>.<p>ಇಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಅವರು, ‘1971ರ ಯುದ್ಧದ ಅವಧಿಯಲ್ಲಿ ಅಮೆರಿಕದಿಂದ ಒತ್ತಡ ಬಂದರೂ ಆಗಿನ ಪ್ರಧಾನಿ ಇಂದಿರಾಗಾಂಧಿ ಅವರು ಮಣಿದಿರಲಿಲ್ಲ’ ಎಂದು ಹೇಳಿದರು.</p>.<p class="title">‘ಈಗ ಟ್ರಂಪ್ ಅವರಿಂದ ಒಂದು ಕರೆ ಬಂತು. ನರೇಂದ್ರ ಮೋದಿ ತಕ್ಷಣ ಶರಣಾದರು. ತಲೆಬಾಗುವುದೇ ಬಿಜೆಪಿ ಮತ್ತು ಆರ್ಎಸ್ಎಸ್ನ ವ್ಯಕ್ತಿತ್ವವಾಗಿದೆ. 1971ರಲ್ಲಿ ಅಮೆರಿಕದ ಒತ್ತಡದ ನಡುವೆಯೂ ಭಾರತವು ಪಾಕಿಸ್ತಾನವನ್ನು ವಿಭಜಿಸಿತ್ತು’ ಎಂದು ಹೇಳಿದರು.</p>.<p class="title">ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ಸಂಘಟನೆ ಸೃಜನ ಅಭಿಯಾನಕ್ಕೆ ಚಾಲನೆ ನೀಡಿದ ಅವರು, ‘ಸ್ವಾತಂತ್ರ್ಯ ಹೋರಾಟದ ದಿನದಿಂದಲೂ ಶರಣಾಗತಿ ಪತ್ರ ಬರೆಯುವುದು ಆರ್ಎಸ್ಎಸ್–ಬಿಜೆಪಿಯವರಿಗೆ ಅಭ್ಯಾಸವಾಗಿದೆ’ ಎಂದರು.</p>.<p class="title">‘ಆರ್ಎಸ್ಎಸ್ ಮತ್ತು ಬಿಜೆಪಿ ವ್ಯಕ್ತಿತ್ವ ಹಾಗೂ ಕಾಂಗ್ರೆಸ್ ನಡುವೆ ಇರುವ ವ್ಯತ್ಯಾಸ ಇದೇ ಆಗಿದೆ. ಕಾಂಗ್ರೆಸ್ ಎಂದಿಗೂ ಶರಣಾಗಿಲ್ಲ. ಮಹಾತ್ಮಗಾಂಧಿ, ಜವಹರಲಾಲ್ ನೆಹರೂ, ವಲ್ಲಭಬಾಯಿ ಪಟೇಲ್ ಶರಣಾಗಿರಲಿಲ್ಲ. ಅವರು ಹೋರಾಡಿದರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>