<p><strong>ಇಂದೋರ್:</strong> ಮಧ್ಯಪ್ರದೇಶದ ಇಂದೋರ್ನಲ್ಲಿ ಕಲುಷಿತ ನೀರು ಸೇವನೆಯಿಂದ ಉಂಟಾದ ಅತಿಸಾರ ಮತ್ತು ವಾಂತಿಯಿಂದ ಈವರೆಗೆ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಇಲ್ಲಿನ ಮೇಯರ್ ಪುಷ್ಯಮಿತ್ರ ಭಾರ್ಗವ ಬುಧವಾರ ದೃಢಪಡಿಸಿದ್ದಾರೆ.</p>.<p>ಅತಿಸಾರದಿಂದಾಗಿ ಭಗೀರಥಪುರದಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ. ಆದರೆ ನನಗೆ ಇರುವ ಮಾಹಿತಿ ಪ್ರಕಾರ ಅತಿಸಾರ ಮತ್ತು ವಾಂತಿಯಿಂದ ಬಳಲುತ್ತಿರುವ ಇನ್ನೂ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರೂ ಮೃತಪಟ್ಟಿದ್ದಾರೆ ಎಂದು ಮೇಯರ್ ಭಾರ್ಗವ ತಿಳಿಸಿದ್ದಾರೆ.</p>.<p>ಪ್ರಾಥಮಿಕ ಮೂಲಗಳ ಪ್ರಕಾರ, ಕುಡಿಯುವ ನೀರಿನ ಪೈಪ್ಲೈನ್ಗೆ ಒಳಚರಂಡಿ ನೀರು ಸೇರಿದ್ದರಿಂದ ಘಟನೆ ನಡೆದಿದೆ ಎಂದು ವರದಿಯಾಗಿದೆ.</p>.<p>ಏತನ್ಮಧ್ಯೆ, ಕಲುಷಿತ ನೀರು ಸೇವನೆಯಿಂದ ಉಂಟಾದ ಅತಿಸಾರದಿಂದ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಶಿವಂ ವರ್ಮಾ ತಿಳಿಸಿದ್ದಾರೆ.</p>.<p>ಅತಿಸಾರದಿಂದ ಬಳಲುತ್ತಿರುವ 149 ಜನರನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿಯ ಮೇಲೆ ನಿಗಾ ವಹಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p>.<p>ಕಲುಷಿತ ನೀರು ಸೇವನೆಯಿಂದ ಭಗೀರಥಪುರ ಪ್ರದೇಶದಲ್ಲಿ ಕಳೆದ ಒಂದು ವಾರದಲ್ಲಿ 6 ಮಹಿಳೆಯರು ಸೇರಿದಂತೆ ಕನಿಷ್ಠ 8 ಜನ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.</p>.<h2>ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ</h2> <p>ಘಟನೆಯ ಬಗ್ಗೆ ಮುಖ್ಯಮಂತ್ರಿ ಮೋಹನ್ ಯಾದವ್ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಆಸ್ಪತ್ರೆಯಲ್ಲಿ ದಾಖಲಾಗಿರುವ ಎಲ್ಲಾ ರೋಗಿಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ.</p>.<p>ಸಿಎಂ ಸೂಚನೆ ಮೇರೆಗೆ ಭಾಗೀರಥಪುರದ ಪುರಸಭೆಯ ವಲಯ ಅಧಿಕಾರಿ ಮತ್ತು ಸಹಾಯಕ ಎಂಜಿನಿಯರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ . ಘಟನೆಯ ತನಿಖೆಗಾಗಿ ಐಎಎಸ್ ಅಧಿಕಾರಿಯ ನೇತೃತ್ವದಲ್ಲಿ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಘಟನೆಯಲ್ಲಿ ತನ್ನ ನಿರ್ಲಕ್ಷ್ಯವನ್ನು ಮುಚ್ಚಿಹಾಕಲು ಸರ್ಕಾರ ಸಾವಿನ ನೈಜ ಸಂಖ್ಯೆಯನ್ನು ಮರೆ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ನೀಲಭ್ ಶುಕ್ಲಾ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್:</strong> ಮಧ್ಯಪ್ರದೇಶದ ಇಂದೋರ್ನಲ್ಲಿ ಕಲುಷಿತ ನೀರು ಸೇವನೆಯಿಂದ ಉಂಟಾದ ಅತಿಸಾರ ಮತ್ತು ವಾಂತಿಯಿಂದ ಈವರೆಗೆ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಇಲ್ಲಿನ ಮೇಯರ್ ಪುಷ್ಯಮಿತ್ರ ಭಾರ್ಗವ ಬುಧವಾರ ದೃಢಪಡಿಸಿದ್ದಾರೆ.</p>.<p>ಅತಿಸಾರದಿಂದಾಗಿ ಭಗೀರಥಪುರದಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ. ಆದರೆ ನನಗೆ ಇರುವ ಮಾಹಿತಿ ಪ್ರಕಾರ ಅತಿಸಾರ ಮತ್ತು ವಾಂತಿಯಿಂದ ಬಳಲುತ್ತಿರುವ ಇನ್ನೂ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರೂ ಮೃತಪಟ್ಟಿದ್ದಾರೆ ಎಂದು ಮೇಯರ್ ಭಾರ್ಗವ ತಿಳಿಸಿದ್ದಾರೆ.</p>.<p>ಪ್ರಾಥಮಿಕ ಮೂಲಗಳ ಪ್ರಕಾರ, ಕುಡಿಯುವ ನೀರಿನ ಪೈಪ್ಲೈನ್ಗೆ ಒಳಚರಂಡಿ ನೀರು ಸೇರಿದ್ದರಿಂದ ಘಟನೆ ನಡೆದಿದೆ ಎಂದು ವರದಿಯಾಗಿದೆ.</p>.<p>ಏತನ್ಮಧ್ಯೆ, ಕಲುಷಿತ ನೀರು ಸೇವನೆಯಿಂದ ಉಂಟಾದ ಅತಿಸಾರದಿಂದ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಶಿವಂ ವರ್ಮಾ ತಿಳಿಸಿದ್ದಾರೆ.</p>.<p>ಅತಿಸಾರದಿಂದ ಬಳಲುತ್ತಿರುವ 149 ಜನರನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿಯ ಮೇಲೆ ನಿಗಾ ವಹಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p>.<p>ಕಲುಷಿತ ನೀರು ಸೇವನೆಯಿಂದ ಭಗೀರಥಪುರ ಪ್ರದೇಶದಲ್ಲಿ ಕಳೆದ ಒಂದು ವಾರದಲ್ಲಿ 6 ಮಹಿಳೆಯರು ಸೇರಿದಂತೆ ಕನಿಷ್ಠ 8 ಜನ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.</p>.<h2>ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ</h2> <p>ಘಟನೆಯ ಬಗ್ಗೆ ಮುಖ್ಯಮಂತ್ರಿ ಮೋಹನ್ ಯಾದವ್ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಆಸ್ಪತ್ರೆಯಲ್ಲಿ ದಾಖಲಾಗಿರುವ ಎಲ್ಲಾ ರೋಗಿಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ.</p>.<p>ಸಿಎಂ ಸೂಚನೆ ಮೇರೆಗೆ ಭಾಗೀರಥಪುರದ ಪುರಸಭೆಯ ವಲಯ ಅಧಿಕಾರಿ ಮತ್ತು ಸಹಾಯಕ ಎಂಜಿನಿಯರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ . ಘಟನೆಯ ತನಿಖೆಗಾಗಿ ಐಎಎಸ್ ಅಧಿಕಾರಿಯ ನೇತೃತ್ವದಲ್ಲಿ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಘಟನೆಯಲ್ಲಿ ತನ್ನ ನಿರ್ಲಕ್ಷ್ಯವನ್ನು ಮುಚ್ಚಿಹಾಕಲು ಸರ್ಕಾರ ಸಾವಿನ ನೈಜ ಸಂಖ್ಯೆಯನ್ನು ಮರೆ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ನೀಲಭ್ ಶುಕ್ಲಾ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>