<p><strong>ಇಂದೋರ್</strong>: ಇಲ್ಲಿನ ಭಾಗೀರಥಿಪುರದಲ್ಲಿ ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟಿರುವ ಘಟನೆಯನ್ನು ‘ವ್ಯವಸ್ಥೆ ಸೃಷ್ಟಿಸಿದ ವಿಪತ್ತು’ ಎಂದು ಬಣ್ಣಿಸಿರುವ ಜಲತಜ್ಞ ರಾಜೇಂದ್ರ ಸಿಂಗ್, ‘ಭ್ರಷ್ಟಾಚಾರವೇ ಈ ದುರ್ಘಟನೆಯ ಮೂಲ’ ಎಂದು ಆರೋಪಿಸಿದ್ದಾರೆ.</p>.<p>ಭಾನುವಾರ ಪಿಟಿಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ‘ದೇಶದ ಅತ್ಯಂತ ಸ್ವಚ್ಚ ನಗರದಲ್ಲೇ ಇಂಥ ದುರಂತ ಸಂಭವಿಸಿದರೆ, ಉಳಿದ ನಗರಗಳಲ್ಲಿ ಕುಡಿಯುವ ನೀರು ಸರಬರಾಜು ವ್ಯಸ್ಥೆಗಳ ಸ್ಥಿತಿ ಎಷ್ಟು ಗಂಭೀರವಾಗಿದೆ ಎಂಬುದನ್ನು ಅಂದಾಜಿಸಬಹುದಾಗಿದೆ’ ಎಂದು ವಿಶ್ಲೇಷಿಸಿದ್ದಾರೆ.</p>.<p>ಭಾಗೀರಥಿಪುರ ಪ್ರದೇಶದ ಪೊಲೀಸ್ ಹೊರ ಠಾಣೆ ಸಮೀಪದ ಮುಖ್ಯ ಕುಡಿಯುವ ನೀರು ಸರಬರಾಜು ಕೊಳವೆ ಪಕ್ಕದಲ್ಲೇ ಶೌಚಾಲಯ ನಿರ್ಮಿಸಲಾಗಿದ್ದು, ಅದರ ನೀರು ಕುಡಿಯುವ ನೀರಿನ ಕೊಳವೆಯಲ್ಲಿ ಸೇರಿ ಕಲುಷಿತಗೊಂಡಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.</p>.<p>‘ಹಣ ಉಳಿಸಲು, ಗುತ್ತಿಗೆದಾರರು ಒಳಚರಂಡಿ ಮಾರ್ಗಗಳ ಬಳಿ ಕುಡಿಯುವ ನೀರಿನ ಪೈಪ್ಲೈನ್ಗಳನ್ನು ಅಳವಡಿಸುತ್ತಾರೆ. ಭ್ರಷ್ಟಾಚಾರ ಇಡೀ ವ್ಯವಸ್ಥೆಯನ್ನು ಹಾಳುಮಾಡಿದೆ. ಈ ಭ್ರಷ್ಟ ವ್ಯವಸ್ಥೆಯ ಪರಿಣಾಮವೇ ಇಂದೋರ್ ದುರಂತ’ ಎಂದು ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಇಂದೋರ್ನ ಭಾಗೀರಥಪುರ ಪ್ರದೇಶದಲ್ಲಿ ಡಿಸೆಂಬರ್ ಕೊನೆಯ ವಾರ ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟಿದ್ದಾರೆಂದು ಸ್ಥಳೀಯ ಆಡಳಿತ ದೃಢಪಡಿಸಿದೆ. ಜನವರಿ 2ರಂದು ಮೇಯರ್ ಭಾರ್ಗವ ಅವರು, ಈ ಘಟನೆಯಿಂದ ಸಾಂಕ್ರಾಮಿಕ ರೋಗ ಹರಡಿ, 10 ರೋಗಿಗಳು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಆದರೆ ಘಟನೆಯಲ್ಲಿ 6 ತಿಂಗಳ ಮಗು ಸೇರಿದಂತೆ 16 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್</strong>: ಇಲ್ಲಿನ ಭಾಗೀರಥಿಪುರದಲ್ಲಿ ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟಿರುವ ಘಟನೆಯನ್ನು ‘ವ್ಯವಸ್ಥೆ ಸೃಷ್ಟಿಸಿದ ವಿಪತ್ತು’ ಎಂದು ಬಣ್ಣಿಸಿರುವ ಜಲತಜ್ಞ ರಾಜೇಂದ್ರ ಸಿಂಗ್, ‘ಭ್ರಷ್ಟಾಚಾರವೇ ಈ ದುರ್ಘಟನೆಯ ಮೂಲ’ ಎಂದು ಆರೋಪಿಸಿದ್ದಾರೆ.</p>.<p>ಭಾನುವಾರ ಪಿಟಿಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ‘ದೇಶದ ಅತ್ಯಂತ ಸ್ವಚ್ಚ ನಗರದಲ್ಲೇ ಇಂಥ ದುರಂತ ಸಂಭವಿಸಿದರೆ, ಉಳಿದ ನಗರಗಳಲ್ಲಿ ಕುಡಿಯುವ ನೀರು ಸರಬರಾಜು ವ್ಯಸ್ಥೆಗಳ ಸ್ಥಿತಿ ಎಷ್ಟು ಗಂಭೀರವಾಗಿದೆ ಎಂಬುದನ್ನು ಅಂದಾಜಿಸಬಹುದಾಗಿದೆ’ ಎಂದು ವಿಶ್ಲೇಷಿಸಿದ್ದಾರೆ.</p>.<p>ಭಾಗೀರಥಿಪುರ ಪ್ರದೇಶದ ಪೊಲೀಸ್ ಹೊರ ಠಾಣೆ ಸಮೀಪದ ಮುಖ್ಯ ಕುಡಿಯುವ ನೀರು ಸರಬರಾಜು ಕೊಳವೆ ಪಕ್ಕದಲ್ಲೇ ಶೌಚಾಲಯ ನಿರ್ಮಿಸಲಾಗಿದ್ದು, ಅದರ ನೀರು ಕುಡಿಯುವ ನೀರಿನ ಕೊಳವೆಯಲ್ಲಿ ಸೇರಿ ಕಲುಷಿತಗೊಂಡಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.</p>.<p>‘ಹಣ ಉಳಿಸಲು, ಗುತ್ತಿಗೆದಾರರು ಒಳಚರಂಡಿ ಮಾರ್ಗಗಳ ಬಳಿ ಕುಡಿಯುವ ನೀರಿನ ಪೈಪ್ಲೈನ್ಗಳನ್ನು ಅಳವಡಿಸುತ್ತಾರೆ. ಭ್ರಷ್ಟಾಚಾರ ಇಡೀ ವ್ಯವಸ್ಥೆಯನ್ನು ಹಾಳುಮಾಡಿದೆ. ಈ ಭ್ರಷ್ಟ ವ್ಯವಸ್ಥೆಯ ಪರಿಣಾಮವೇ ಇಂದೋರ್ ದುರಂತ’ ಎಂದು ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಇಂದೋರ್ನ ಭಾಗೀರಥಪುರ ಪ್ರದೇಶದಲ್ಲಿ ಡಿಸೆಂಬರ್ ಕೊನೆಯ ವಾರ ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟಿದ್ದಾರೆಂದು ಸ್ಥಳೀಯ ಆಡಳಿತ ದೃಢಪಡಿಸಿದೆ. ಜನವರಿ 2ರಂದು ಮೇಯರ್ ಭಾರ್ಗವ ಅವರು, ಈ ಘಟನೆಯಿಂದ ಸಾಂಕ್ರಾಮಿಕ ರೋಗ ಹರಡಿ, 10 ರೋಗಿಗಳು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಆದರೆ ಘಟನೆಯಲ್ಲಿ 6 ತಿಂಗಳ ಮಗು ಸೇರಿದಂತೆ 16 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>