ಶಿವಸೇನಾ ಸೇರಿದ ಕಾಂಗ್ರೆಸ್ ಶಾಸಕ (ಮುಂಬೈ ವರದಿ): ನಾಗಪುರ ಜಿಲ್ಲೆಯ ಉಮ್ರೇಡ್ ಶಾಸಕ ರಾಜು ಪರ್ವೆ ಅವರು ಭಾನುವಾರ ಕಾಂಗ್ರೆಸ್ ತೊರೆದು, ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಸೇರಿದರು. ಲೋಕಸಭಾ ಚುನಾವಣೆಯಲ್ಲಿ ಅವರನ್ನು ರಾಮ್ಟೆಕ್ ಕ್ಷೇತ್ರದಲ್ಲಿ, ಕಾಂಗ್ರೆಸ್ನ ರಶ್ಮಿ ಬಾರ್ವೆ ವಿರುದ್ದ ಕಣಕ್ಕಿಳಿಸುವ ಸಾಧ್ಯತೆಯಿದೆ.