<p><strong>ಕೊಚ್ಚಿ/ತಿರುವನಂತಪುರ:</strong> ಕೊಚ್ಚಿ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವಿಮಾನದಲ್ಲಿ ಕೋವಿಡ್–19 –ಪೀಡಿತ ಬ್ರಿಟನ್ ಪ್ರಜೆಯೊಬ್ಬರು ಇರುವ ಮಾಹಿತಿ ಅರಿತ ಅಧಿಕಾರಿಗಳು ಆ ವ್ಯಕ್ತಿ ಹಾಗೂ ಜೊತೆಗಿದ್ದ 18 ಮಂದಿಯನ್ನು ಭಾನುವಾರ ವಿಮಾನದಿಂದ ಕೆಳಗಿಳಿಸಿದ್ದಾರೆ.</p>.<p>ಸೋಂಕಿತ ವ್ಯಕ್ತಿ ಹಾಗೂ ಆತನ ಪತ್ನಿಯನ್ನು ಸಮೀಪದ ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿರಿಸಲಾಗಿದೆ. ಉಳಿದ 17 ಮಂದಿಯನ್ನು ಪ್ರತ್ಯೇಕವಾಗಿ ನಿಗಾದಲ್ಲಿರಿಸಲಾಗಿದೆ ಎಂದು ಸಚಿವ ವಿ.ಎಸ್. ಸುನಿಲ್ ಕುಮಾರ್ ತಿಳಿಸಿದ್ದಾರೆ.</p>.<p>ಸೋಂಕು ತಗುಲಿದ್ದ ವ್ಯಕ್ತಿಯನ್ನು ಮುನ್ನಾರ್ನ ರೆಸಾರ್ಟ್ನ ಪ್ರತ್ಯೇಕ ಕೊಠಡಿಯಲ್ಲಿರಿಸಲಾಗಿತ್ತು. ಅಲ್ಲಿಂದ ಅವರು ತಪ್ಪಿಸಿಕೊಂಡು ವಿಮಾನ ಹತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ವಿಮಾನದಲ್ಲಿದ್ದ ಕೇರಳದ ಪ್ರಯಾ ಣಿಕರೊಬ್ಬರು ಕೂಡ ಪ್ರಯಾಣ ರದ್ದು ಮಾಡಿ ಪತ್ಯೇಕವಾಗಿರಲು ಒಪ್ಪಿಕೊಂಡಿ ದ್ದಾರೆ.ವಿಮಾನದಲ್ಲಿ ಒಟ್ಟು 270 ಮಂದಿ ಇದ್ದರು’ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.</p>.<p>ಸೋಂಕಿತ ವ್ಯಕ್ತಿಯಿದ್ದ ರೆಸಾರ್ಟ್ ಅನ್ನು ಮುಚ್ಚಲಾಗಿದೆ. ಅಲ್ಲಿನ ಸಿಬ್ಬಂದಿ ಯನ್ನು ಪತ್ಯೇಕವಾಗಿರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಸೋಂಕಿತ ವ್ಯಕ್ತಿ ಆರೋಗ್ಯ ಇಲಾಖೆಗೆ ಯಾವುದೇ ಮಾಹಿತಿ ನೀಡದೆ ರೆಸಾರ್ಟ್ ತೊರೆದಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುವುದು ಎಂದು’ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ/ತಿರುವನಂತಪುರ:</strong> ಕೊಚ್ಚಿ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವಿಮಾನದಲ್ಲಿ ಕೋವಿಡ್–19 –ಪೀಡಿತ ಬ್ರಿಟನ್ ಪ್ರಜೆಯೊಬ್ಬರು ಇರುವ ಮಾಹಿತಿ ಅರಿತ ಅಧಿಕಾರಿಗಳು ಆ ವ್ಯಕ್ತಿ ಹಾಗೂ ಜೊತೆಗಿದ್ದ 18 ಮಂದಿಯನ್ನು ಭಾನುವಾರ ವಿಮಾನದಿಂದ ಕೆಳಗಿಳಿಸಿದ್ದಾರೆ.</p>.<p>ಸೋಂಕಿತ ವ್ಯಕ್ತಿ ಹಾಗೂ ಆತನ ಪತ್ನಿಯನ್ನು ಸಮೀಪದ ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿರಿಸಲಾಗಿದೆ. ಉಳಿದ 17 ಮಂದಿಯನ್ನು ಪ್ರತ್ಯೇಕವಾಗಿ ನಿಗಾದಲ್ಲಿರಿಸಲಾಗಿದೆ ಎಂದು ಸಚಿವ ವಿ.ಎಸ್. ಸುನಿಲ್ ಕುಮಾರ್ ತಿಳಿಸಿದ್ದಾರೆ.</p>.<p>ಸೋಂಕು ತಗುಲಿದ್ದ ವ್ಯಕ್ತಿಯನ್ನು ಮುನ್ನಾರ್ನ ರೆಸಾರ್ಟ್ನ ಪ್ರತ್ಯೇಕ ಕೊಠಡಿಯಲ್ಲಿರಿಸಲಾಗಿತ್ತು. ಅಲ್ಲಿಂದ ಅವರು ತಪ್ಪಿಸಿಕೊಂಡು ವಿಮಾನ ಹತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ವಿಮಾನದಲ್ಲಿದ್ದ ಕೇರಳದ ಪ್ರಯಾ ಣಿಕರೊಬ್ಬರು ಕೂಡ ಪ್ರಯಾಣ ರದ್ದು ಮಾಡಿ ಪತ್ಯೇಕವಾಗಿರಲು ಒಪ್ಪಿಕೊಂಡಿ ದ್ದಾರೆ.ವಿಮಾನದಲ್ಲಿ ಒಟ್ಟು 270 ಮಂದಿ ಇದ್ದರು’ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.</p>.<p>ಸೋಂಕಿತ ವ್ಯಕ್ತಿಯಿದ್ದ ರೆಸಾರ್ಟ್ ಅನ್ನು ಮುಚ್ಚಲಾಗಿದೆ. ಅಲ್ಲಿನ ಸಿಬ್ಬಂದಿ ಯನ್ನು ಪತ್ಯೇಕವಾಗಿರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಸೋಂಕಿತ ವ್ಯಕ್ತಿ ಆರೋಗ್ಯ ಇಲಾಖೆಗೆ ಯಾವುದೇ ಮಾಹಿತಿ ನೀಡದೆ ರೆಸಾರ್ಟ್ ತೊರೆದಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುವುದು ಎಂದು’ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>