ಭಾನುವಾರದ ರ್ಯಾಲಿಯಲ್ಲಿ ಮಾತನಾಡಿದ್ದ ಕೇಜ್ರಿವಾಲ್, ‘ಕಾಶ್ಮೀರ ಸಮಸ್ಯೆಯನ್ನು ನಿರ್ವಹಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಕಾಶ್ಮೀರಿ ಪಂಡಿತರನ್ನು ಗುರಿ ಮಾಡಿ ಉಗ್ರರು ಹತ್ಯೆ ಮಾಡುತ್ತಿದ್ದಾರೆ. ಇದರಿಂದ ಪಂಡಿತರು ಅನಿವಾರ್ಯವಾಗಿ ಕಣಿವೆ ತೊರೆಯುವಂತಾಗಿದೆ. ಪಂಡಿತರ ಹತ್ಯೆ ತಡೆಯಲು ಕೇಂದ್ರ ಸರ್ಕಾರವು ಕ್ರಿಯಾ ಯೋಜನೆ ರೂಪಿಸಬೇಕು. ಬಿಜೆಪಿಗೆ ಕೊಳಕು ರಾಜಕೀಯ ಮಾಡುವುದು ಮಾತ್ರ ಗೊತ್ತು’ ಎಂದು ಹೇಳಿದ್ದರು.