ಮುಂಬೈ: ಸಾಮಾಜಿಕ ಜಾಲತಾಣಗಳಿಂದ ಸಂಗ್ರಹಿಸಿದ ಮಾಹಿತಿಯು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆಗೆ ಪರಿಗಣಿಸಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಮಂಗಳವಾರ ಹೇಳಿದೆ.
ಮಹಾರಾಷ್ಟ್ರದಲ್ಲಿ ಕಲುಷಿತ ಮೂಲಗಳಿಂದ ನೀರು ಕುಡಿದು ಪ್ರತೀ ವರ್ಷ 1500–1200 ಮಂದಿ ಸಾವಿಗೀಡಾಗುತ್ತಾರೆ ಎಂದು ಹೇಳಿದ್ದ ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ಹೀಗೆ ನುಡಿದಿದೆ.
ಜಲಪಾತ ಹಾಗೂ ನೀರಿನ ಮೂಲಗಳನ್ನು ರಕ್ಷಣೆ ಮಾಡಲು ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ವಕೀಲ ಅಜಿತ್ ಸಿಂಗ್ ಘೋರ್ಪಡೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಡಿ.ಕೆ ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ಆರೀಫ್ ಡಾಕ್ಟರ್ ಅವರಿದ್ದ ವಿಭಾಗೀಯ ಪೀಠ ಹೀಗೆ ನುಡಿದು, ಪಿಐಎಲ್ ವಿಚಾರಣೆಗೆ ನಿರಾಕರಿಸಿತು.