<p><strong>ಪುದುಚೇರಿ</strong>: ಮೂಲಸೌಕರ್ಯಗಳ ಗುಣಮಟ್ಟ ಮತ್ತು ಸರಿಯಾದ ವಿನ್ಯಾಸದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ಹೇಳಿದ್ದಾರೆ.</p>.<p>ಯೋಜನೆಗಳು ಪಾರದರ್ಶಕವಾಗಿ, ಕಾಲಮಿತಿಯೊಳಗೆ, ಭ್ರಷ್ಟಾಚಾರ ರಹಿತವಾಗಿ ಮತ್ತು ಫಲಿತಾಂಶ ಆಧಾರಿತವಾಗಿ ಕಾರ್ಯಗತಗೊಳ್ಳಬೇಕು ಎಂದು ತಮ್ಮ ಸರ್ಕಾರ ಬಯಸುತ್ತಿದೆ ಎಂದು ಅವರು ಹೇಳಿದ್ದಾರೆ.</p>.<p class="title">₹436 ಕೋಟಿ ವೆಚ್ಚದ ಎಲಿವೇಟೆಡ್ ಕಾರಿಡಾರ್ ಹಾಗೂ ಗ್ರೇಡ್ ಸಪರೇಟರ್ಗೆ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಗಡ್ಕರಿ, ‘ಈ ಯೋಜನೆಯು ಪುದುಚೇರಿಯ ಅಭಿವೃದ್ಧಿಗೆ ಗಮನಾರ್ಹ ಉತ್ತೇಜನ ನೀಡುತ್ತದೆ’ ಎಂದು ಹೇಳಿದ್ದಾರೆ.</p>.<p class="title">ದೇಶದಾದ್ಯಂತ ತ್ವರಿತ ಮತ್ತು ವಿಶಾಲವಾದ ಮೂಲಸೌಕರ್ಯಗಳ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಉತ್ಸುಕರಾಗಿದ್ದಾರೆ ಎಂದು ಗಡ್ಕರಿ ಹೇಳಿದ್ದು, ತಮ್ಮ ಇಲಾಖೆಯು ಪುದುಚೇರಿಯ ರಸ್ತೆಗಳು, ಸೇತುವೆಗಳು ಮತ್ತು ಇತರ ಸೌಕರ್ಯಗಳಿಗಾಗಿ ₹25,000 ಕೋಟಿ ವೆಚ್ಚ ಮಾಡಲು ಯೋಜಿಸಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುದುಚೇರಿ</strong>: ಮೂಲಸೌಕರ್ಯಗಳ ಗುಣಮಟ್ಟ ಮತ್ತು ಸರಿಯಾದ ವಿನ್ಯಾಸದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ಹೇಳಿದ್ದಾರೆ.</p>.<p>ಯೋಜನೆಗಳು ಪಾರದರ್ಶಕವಾಗಿ, ಕಾಲಮಿತಿಯೊಳಗೆ, ಭ್ರಷ್ಟಾಚಾರ ರಹಿತವಾಗಿ ಮತ್ತು ಫಲಿತಾಂಶ ಆಧಾರಿತವಾಗಿ ಕಾರ್ಯಗತಗೊಳ್ಳಬೇಕು ಎಂದು ತಮ್ಮ ಸರ್ಕಾರ ಬಯಸುತ್ತಿದೆ ಎಂದು ಅವರು ಹೇಳಿದ್ದಾರೆ.</p>.<p class="title">₹436 ಕೋಟಿ ವೆಚ್ಚದ ಎಲಿವೇಟೆಡ್ ಕಾರಿಡಾರ್ ಹಾಗೂ ಗ್ರೇಡ್ ಸಪರೇಟರ್ಗೆ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಗಡ್ಕರಿ, ‘ಈ ಯೋಜನೆಯು ಪುದುಚೇರಿಯ ಅಭಿವೃದ್ಧಿಗೆ ಗಮನಾರ್ಹ ಉತ್ತೇಜನ ನೀಡುತ್ತದೆ’ ಎಂದು ಹೇಳಿದ್ದಾರೆ.</p>.<p class="title">ದೇಶದಾದ್ಯಂತ ತ್ವರಿತ ಮತ್ತು ವಿಶಾಲವಾದ ಮೂಲಸೌಕರ್ಯಗಳ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಉತ್ಸುಕರಾಗಿದ್ದಾರೆ ಎಂದು ಗಡ್ಕರಿ ಹೇಳಿದ್ದು, ತಮ್ಮ ಇಲಾಖೆಯು ಪುದುಚೇರಿಯ ರಸ್ತೆಗಳು, ಸೇತುವೆಗಳು ಮತ್ತು ಇತರ ಸೌಕರ್ಯಗಳಿಗಾಗಿ ₹25,000 ಕೋಟಿ ವೆಚ್ಚ ಮಾಡಲು ಯೋಜಿಸಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>