ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್‌ಗೆ ಅವಮಾನ: ‘ಮಹಾ’ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲಗೆ ಮಸಿ

Last Updated 10 ಡಿಸೆಂಬರ್ 2022, 16:51 IST
ಅಕ್ಷರ ಗಾತ್ರ

ಬೆಳಗಾವಿ: ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಅವರ ಮುಖಕ್ಕೆಪುಣೆ ನಗರದಲ್ಲಿ ಶನಿವಾರ ವ್ಯಕ್ತಿಯೊಬ್ಬರು ಮಸಿ ಬಳಿದಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಸಚಿವ ಹೊರಗೆ ಬರುತ್ತಿದ್ದಂತೆಯೇ ಎದುರಿನಿಂದ ನುಗ್ಗಿದ ವ್ಯಕ್ತಿ ಚೀರಾಡುತ್ತ ಮುಖಕ್ಕೆ ಮಸಿ ಬಳಿದರು. ಏಕಾಏಕಿ ದಾಳಿಯಿಂದ ವಿಚಲಿತರಾದ ಸಚಿವ ಚಂದ್ರಕಾಂತ ಅವರು ಪೊಲೀಸರ ಆಶ್ರಯ ಪಡೆದರು.

ತಕ್ಷಣ ಧಾವಿಸಿದ ಪೊಲೀಸರು ಸಚಿವರನ್ನು ದೂರ ಸರಿಸಿ, ಆರೋಪಿಯನ್ನು ನೆಲಕ್ಕೆ ಕೆಡವಿ ಹಿಡಿದರು. ಇದರಿಂದಾಗಿ ಸ್ಥಳದಲ್ಲಿ ಸಂಜೆಯವರೆಗೂ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು ಎಂದು ಪುಣೆಯ ನಿವಾಸಿಗಳು ಮಾಹಿತಿ ನೀಡಿದರು.

ಮಹಾರಾಷ್ಟ್ರದ ಪೈಠಾಣ ನಗರದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಸಚಿವ ಚಂದ್ರಕಾಂತ ಅವರು ಡಾ.ಬಿ.ಆರ್‌. ಅಂಬೇಡ್ಕರ್‌ ಹಾಗೂ ಜ್ಯೋತಿಬಾ ಫುಲೆ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಸಚಿವ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದವು. ಅದಕ್ಕೆ ಬೆಲೆ ಕೊಡದ ಸಚಿವ ‘ಧೈರ್ಯವಿದ್ದವರು ಮುಂದೆ ಬರುವಂತೆ’ ಸವಾಲು ಹಾಕಿದ್ದರು. ಹೀಗಾಗಿ, ಮಸಿ ಬಳಿಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬೆಳಗಾವಿಗೆ ಭೇಟಿ ನೀಡಿ, ಎಂಇಎಸ್‌ ನೇತೃತ್ವದಲ್ಲಿ ಮಹಾ ಸಮಾವೇಶ ಮಾಡಿಯೇ ಸಿದ್ಧ ಎಂದು ಪಟ್ಟು ಹಿಡಿಯುವ ಮೂಲಕ, ಚಂದ್ರಕಾಂತ ಪಾಟೀಲ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಶನಿವಾರ ಅವರ ಮುಖಕ್ಕೆ ಮಸಿ ಬಳಿದ ವಿಡಿಯೊ ತುಣುಕುಗಳು ಜಿಲ್ಲೆಯಲ್ಲಿಯೂ ಕಾಳ್ಗಿಚ್ಚಿನಂತೆ ಹರಿದಾಡಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT