<p><strong>ಕೋಲ್ಕತ್ತ:</strong> ‘ಕಷ್ಟಕಾಲದಲ್ಲಿ ಜೊತೆಗೆ ನಿಲ್ಲದ ತೃಣಮೂಲ ಕಾಂಗ್ರೆಸ್ ಪಕ್ಷ ಮತ್ತು ನಾಯಕಿ ಮಮತಾ ಬ್ಯಾನರ್ಜಿ ಅವರ ನಡೆಯಿಂದ ತೀವ್ರ ನೋವು, ಅಪಮಾನವಾಗಿದೆ’ ಎಂದು ಹೇಳಿರುವ ಟಿಎಂಸಿ ಮುಖಂಡ ತಪಸ್ ರಾಯ್, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.</p>.<p>ಟಿಎಂಸಿ ಉಪ ಮುಖ್ಯ ಸಚೇತಕರೂ ಆಗಿದ್ದ ಅವರು ರಾಜೀನಾಮೆ ಪತ್ರವನ್ನು ಸ್ಪೀಕರ್ ಬಿಮನ್ ಬ್ಯಾನರ್ಜಿ ಅವರಿಗೆ ಸಲ್ಲಿಸಿದರು. ಲೋಕಸಭೆ ಚುನಾವಣೆ ಘೋಷಣೆಗೂ ಮೊದಲು ನಡೆದಿರುವ ಈ ಬೆಳವಣಿಗೆಯು ಟಿಎಂಸಿ ಪಕ್ಷಕ್ಕೆ ಹಿನ್ನಡೆ ಎಂದೇ ವ್ಯಾಖ್ಯಾನಿಸಲಾಗಿದೆ.</p>.<p>ಹಿರಿಯ ನಾಯಕ ತಪಸ್ ರಾಯ್, ಟಿಎಂಸಿಗೆ ರಾಜೀನಾಮೆ ನೀಡಿ ಬಿಜೆಪಿ ಅಥವಾ ಬೇರೆ ಇತರೆ ಪಕ್ಷಕ್ಕೆ ಸೇರ್ಪಡೆಯಾಗುವರು ಎಂದು ಕೇಳಿಬರುತ್ತಿದ್ದ ವದಂತಿಗೆ ಈ ಬೆಳವಣಿಗೆ ಬಲ ನೀಡಿದೆ. ‘ಸಕಾಲದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇನೆ’ ಎಂದು ರಾಯ್ ಪ್ರತಿಕ್ರಿಯಿಸಿದ್ದಾರೆ.</p>.<p>ವಿಧಾನಸಭೆಯಲ್ಲಿ ಬಾರಾನಗರ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಅವರ ಮನವೊಲಿಸಲು ಸಚಿವ ಬ್ರಾತ್ಯಾ ಬಸು ಮತ್ತು ಟಿಎಂಸಿಯ ಮಾಜಿ ವಕ್ತಾರ ಕುನಾಲ್ ಘೋಷ್ ಸೋಮವಾರ ರಾತ್ರಿ ಅವರ ಮನೆಗೆ ತೆರಳಿದ್ದರು. ಆದರೆ, ಅವರ ಯತ್ನ ಫಲ ನೀಡಿಲ್ಲ.</p>.<p>ರಾಯ್ ಮತ್ತು ಪಕ್ಷದ ಸಂಸದ ಸುದೀಪ್ ಬಂಡೋಪಾಧ್ಯಾಯ ನಡುವೆ ಭಿನ್ನಾಭಿಪ್ರಾಯವಿತ್ತು. ಕೆಲ ದಿನಗಳಿಂದ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಕ್ಷೇತ್ರಕ್ಕೂ ಭೇಟಿ ನೀಡಿರಲಿಲ್ಲ.</p>.<p>ರಾಯ್ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ಜನವರಿ 12ರಂದು ದಾಳಿ ಮಾಡಿದ್ದರು. ಸುದ್ದಿಗಾರರ ಜೊತೆಗೆ ಮಾತನಾಡಿದ ರಾಯ್, ‘ದಾಳಿ ವೇಳೆ ಪಕ್ಷ, ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಅವರು ತಮಗೆ ಬೆಂಬಲವಾಗಿ ನಿಲ್ಲಲಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ‘ಕಷ್ಟಕಾಲದಲ್ಲಿ ಜೊತೆಗೆ ನಿಲ್ಲದ ತೃಣಮೂಲ ಕಾಂಗ್ರೆಸ್ ಪಕ್ಷ ಮತ್ತು ನಾಯಕಿ ಮಮತಾ ಬ್ಯಾನರ್ಜಿ ಅವರ ನಡೆಯಿಂದ ತೀವ್ರ ನೋವು, ಅಪಮಾನವಾಗಿದೆ’ ಎಂದು ಹೇಳಿರುವ ಟಿಎಂಸಿ ಮುಖಂಡ ತಪಸ್ ರಾಯ್, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.</p>.<p>ಟಿಎಂಸಿ ಉಪ ಮುಖ್ಯ ಸಚೇತಕರೂ ಆಗಿದ್ದ ಅವರು ರಾಜೀನಾಮೆ ಪತ್ರವನ್ನು ಸ್ಪೀಕರ್ ಬಿಮನ್ ಬ್ಯಾನರ್ಜಿ ಅವರಿಗೆ ಸಲ್ಲಿಸಿದರು. ಲೋಕಸಭೆ ಚುನಾವಣೆ ಘೋಷಣೆಗೂ ಮೊದಲು ನಡೆದಿರುವ ಈ ಬೆಳವಣಿಗೆಯು ಟಿಎಂಸಿ ಪಕ್ಷಕ್ಕೆ ಹಿನ್ನಡೆ ಎಂದೇ ವ್ಯಾಖ್ಯಾನಿಸಲಾಗಿದೆ.</p>.<p>ಹಿರಿಯ ನಾಯಕ ತಪಸ್ ರಾಯ್, ಟಿಎಂಸಿಗೆ ರಾಜೀನಾಮೆ ನೀಡಿ ಬಿಜೆಪಿ ಅಥವಾ ಬೇರೆ ಇತರೆ ಪಕ್ಷಕ್ಕೆ ಸೇರ್ಪಡೆಯಾಗುವರು ಎಂದು ಕೇಳಿಬರುತ್ತಿದ್ದ ವದಂತಿಗೆ ಈ ಬೆಳವಣಿಗೆ ಬಲ ನೀಡಿದೆ. ‘ಸಕಾಲದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇನೆ’ ಎಂದು ರಾಯ್ ಪ್ರತಿಕ್ರಿಯಿಸಿದ್ದಾರೆ.</p>.<p>ವಿಧಾನಸಭೆಯಲ್ಲಿ ಬಾರಾನಗರ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಅವರ ಮನವೊಲಿಸಲು ಸಚಿವ ಬ್ರಾತ್ಯಾ ಬಸು ಮತ್ತು ಟಿಎಂಸಿಯ ಮಾಜಿ ವಕ್ತಾರ ಕುನಾಲ್ ಘೋಷ್ ಸೋಮವಾರ ರಾತ್ರಿ ಅವರ ಮನೆಗೆ ತೆರಳಿದ್ದರು. ಆದರೆ, ಅವರ ಯತ್ನ ಫಲ ನೀಡಿಲ್ಲ.</p>.<p>ರಾಯ್ ಮತ್ತು ಪಕ್ಷದ ಸಂಸದ ಸುದೀಪ್ ಬಂಡೋಪಾಧ್ಯಾಯ ನಡುವೆ ಭಿನ್ನಾಭಿಪ್ರಾಯವಿತ್ತು. ಕೆಲ ದಿನಗಳಿಂದ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಕ್ಷೇತ್ರಕ್ಕೂ ಭೇಟಿ ನೀಡಿರಲಿಲ್ಲ.</p>.<p>ರಾಯ್ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ಜನವರಿ 12ರಂದು ದಾಳಿ ಮಾಡಿದ್ದರು. ಸುದ್ದಿಗಾರರ ಜೊತೆಗೆ ಮಾತನಾಡಿದ ರಾಯ್, ‘ದಾಳಿ ವೇಳೆ ಪಕ್ಷ, ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಅವರು ತಮಗೆ ಬೆಂಬಲವಾಗಿ ನಿಲ್ಲಲಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>