'ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಪ್ಯಾಕೇಜ್' (ಪಿಎಂಜಿಕೆಪಿ) ಮಾರ್ಚ್ 30, 2020ಕ್ಕೆ ಅನುಷ್ಠಾನಗೊಂಡಿದ್ದು, ಕೋವಿಡ್ ವಿರುದ್ಧ ಹೋರಾಡಿದ ಆರೋಗ್ಯ ಕಾರ್ಯಕರ್ತರಿಗೆ ವಿಮೆ ನೀಡಲಾಗಿದೆ. ಕೋವಿಡ್ ಕಾರಣದಿಂದ ಮೃತರಾದ 1,905 ಆರೋಗ್ಯ ಕಾರ್ಯಕರ್ತರಿಗೆ ಸಂಬಂಧಿಸಿದ ಪರಿಹಾರವನ್ನು ವಿತರಿಸಲಾಗಿದೆ ಎಂದು ಕೇಂದ್ರ ಸಚಿವಾಲಯ ಮಂಗಳವಾರ ಹೇಳಿದೆ.