<p><strong>ಪುಣೆ</strong>: ‘ದಿ ಮಹಾರಾಷ್ಟ್ರ ಅಂಧಶ್ರದ್ಧೆ ನಿರ್ಮೂಲನಾ ಸಮಿತಿ’ ಎನ್ನುವ ಸಂಸ್ಥೆಯು ಅಂತರ್ಜಾತಿ ಮತ್ತು ಅಂತರ ಧರ್ಮೀಯ ಮದುವೆ ಆಗುವವರಿಗಾಗಿ ‘ವಧು–ವರರ ಕೇಂದ್ರ’ವನ್ನು ಆರಂಭಿಸಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಇಂಥದ್ದೊಂದು ಕೇಂದ್ರ ತೆರೆಯಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.</p>.<p>‘ಸಮಾಜದಲ್ಲಿ ವೈಚಾರಿಕತೆ ಮತ್ತು ಸಮಾನತೆಯನ್ನು ಪ್ರೋತ್ಸಾಹಿಸುವುದು ನಮ್ಮ ಸಂಸ್ಥೆಯ ಗುರಿಯಾಗಿದೆ. ಇದಕ್ಕಾಗಿಯೇ ಇಂಥ ಕೇಂದ್ರವೊಂದನ್ನು ಆರಂಭಿಸುವುದು ನಮ್ಮ ಬಹುಕಾಲದ ಆಕಾಂಕ್ಷೆಯಾಗಿತ್ತು. ಈ ಸೇವೆಯು ಸಂಪೂರ್ಣ ಉಚಿತವಾಗಿರಲಿದೆ’ ಎಂದು ಸಂಸ್ಥೆಯ ಸದಸ್ಯ ಹಮೀದ್ ದಾಬೋಲ್ಕರ್ ತಿಳಿಸಿದರು. ಇವರು ವಿಚಾರವಾದಿ ಡಾ. ನರೇಂದ್ರ ದಾಬೋಲ್ಕರ್ ಅವರ ಮಗ.</p>.<p>‘ನಮ್ಮ ಕೇಂದ್ರದಲ್ಲಿ ಹೆಸರು ನಮೂದಿಸಿಕೊಳ್ಳಿ’ ಎಂದು ಸಂಸ್ಥೆಯ ಸದಸ್ಯರಾದ ಶಂಕರ್ ಕಣಸೆ ಮತ್ತು ಡಾ. ದ್ಯಾನ್ದೇವ್ ಸರ್ವಡೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು. ‘ವಿಧವೆಯರು ಮತ್ತು ವಿಧುರರೂ ಈ ಕೇಂದ್ರದಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು’ ಎಂದರು.</p>.<p>‘ಪರಸ್ಪರರ ಇಚ್ಛೆಯ ಅನುಸಾರ ಸಂಗಾತಿಯನ್ನು ಹುಡುಕಲು ಸಹಕಾರ ನೀಡಲಾಗುತ್ತದೆ. ವ್ಯಕ್ತಿಗಳ ಹಿನ್ನೆಲೆ ಕುರಿತು ಸೂಕ್ತ ಪರಿಶೀಲನೆಯನ್ನೂ ನಡೆಸಲಾಗುವುದು. ವಿಶೇಷ ವಿವಾಹ ಕಾಯ್ದೆ ಅಥವಾ ಸತ್ಯಶೋಧಕ ಆಚರಣೆಗಳ ಮೂಲಕ ವಿವಾಹವಾಗಲು ಉತ್ತೇಜನ ನೀಡಲಾಗುವುದು’ ಎಂದು ಶಂಕರ್ ಕಣಸೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ</strong>: ‘ದಿ ಮಹಾರಾಷ್ಟ್ರ ಅಂಧಶ್ರದ್ಧೆ ನಿರ್ಮೂಲನಾ ಸಮಿತಿ’ ಎನ್ನುವ ಸಂಸ್ಥೆಯು ಅಂತರ್ಜಾತಿ ಮತ್ತು ಅಂತರ ಧರ್ಮೀಯ ಮದುವೆ ಆಗುವವರಿಗಾಗಿ ‘ವಧು–ವರರ ಕೇಂದ್ರ’ವನ್ನು ಆರಂಭಿಸಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಇಂಥದ್ದೊಂದು ಕೇಂದ್ರ ತೆರೆಯಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.</p>.<p>‘ಸಮಾಜದಲ್ಲಿ ವೈಚಾರಿಕತೆ ಮತ್ತು ಸಮಾನತೆಯನ್ನು ಪ್ರೋತ್ಸಾಹಿಸುವುದು ನಮ್ಮ ಸಂಸ್ಥೆಯ ಗುರಿಯಾಗಿದೆ. ಇದಕ್ಕಾಗಿಯೇ ಇಂಥ ಕೇಂದ್ರವೊಂದನ್ನು ಆರಂಭಿಸುವುದು ನಮ್ಮ ಬಹುಕಾಲದ ಆಕಾಂಕ್ಷೆಯಾಗಿತ್ತು. ಈ ಸೇವೆಯು ಸಂಪೂರ್ಣ ಉಚಿತವಾಗಿರಲಿದೆ’ ಎಂದು ಸಂಸ್ಥೆಯ ಸದಸ್ಯ ಹಮೀದ್ ದಾಬೋಲ್ಕರ್ ತಿಳಿಸಿದರು. ಇವರು ವಿಚಾರವಾದಿ ಡಾ. ನರೇಂದ್ರ ದಾಬೋಲ್ಕರ್ ಅವರ ಮಗ.</p>.<p>‘ನಮ್ಮ ಕೇಂದ್ರದಲ್ಲಿ ಹೆಸರು ನಮೂದಿಸಿಕೊಳ್ಳಿ’ ಎಂದು ಸಂಸ್ಥೆಯ ಸದಸ್ಯರಾದ ಶಂಕರ್ ಕಣಸೆ ಮತ್ತು ಡಾ. ದ್ಯಾನ್ದೇವ್ ಸರ್ವಡೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು. ‘ವಿಧವೆಯರು ಮತ್ತು ವಿಧುರರೂ ಈ ಕೇಂದ್ರದಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು’ ಎಂದರು.</p>.<p>‘ಪರಸ್ಪರರ ಇಚ್ಛೆಯ ಅನುಸಾರ ಸಂಗಾತಿಯನ್ನು ಹುಡುಕಲು ಸಹಕಾರ ನೀಡಲಾಗುತ್ತದೆ. ವ್ಯಕ್ತಿಗಳ ಹಿನ್ನೆಲೆ ಕುರಿತು ಸೂಕ್ತ ಪರಿಶೀಲನೆಯನ್ನೂ ನಡೆಸಲಾಗುವುದು. ವಿಶೇಷ ವಿವಾಹ ಕಾಯ್ದೆ ಅಥವಾ ಸತ್ಯಶೋಧಕ ಆಚರಣೆಗಳ ಮೂಲಕ ವಿವಾಹವಾಗಲು ಉತ್ತೇಜನ ನೀಡಲಾಗುವುದು’ ಎಂದು ಶಂಕರ್ ಕಣಸೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>