<p><strong>ಚಂಡೀಗಢ</strong>: ‘10 ನೇ ಆವೃತ್ತಿಯ ಅಂತರರಾಷ್ಟ್ರೀಯ ಗೀತಾ ಮಹೋತ್ಸವ’ ಕಾರ್ಯಕ್ರಮ (IGM-2025) ನವೆಂಬರ್ 15 ರಿಂದ ಡಿಸೆಂಬರ್ 1 ರಿಂದ ಹರಿಯಾಣದ ಕುರುಕ್ಷೇತ್ರದಲ್ಲಿ ಆಯೋಜನೆಯಾಗಿದೆ.</p><p>ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕತೆಯ ಸಮಾಗಮವಾದ ಈ ಸಮಾವೇಶದಲ್ಲಿ ಮುಖ್ಯ ಕಾರ್ಯಕ್ರಮಗಳು ನವೆಂಬರ್ 24ರಿಂದ ಡಿಸೆಂಬರ್ 1 ರಿಂದ ನಡೆಯಲಿವೆ ಎಂದು ಕುರುಕ್ಷೇತ್ರ ಅಭಿವೃದ್ಧಿ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.</p><p>ಅಂತರರಾಷ್ಟ್ರೀಯ ಭಗವದ್ಗೀತೆ ಮಹೋತ್ಸವ ಕಾರ್ಯಕ್ರಮದಲ್ಲಿ 40 ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.</p><p>IGM-2025 ಪ್ರಯುಕ್ತ ಇಂದು ಮಂಡಳಿಯ ಮುಖ್ಯ ಕಚೇರಿಯಲ್ಲಿ ಹರಿಯಾಣ ರಾಜ್ಯಪಾಲ ಅಸೀಮ್ ಕುಮಾರ್ ಘೋಷ್ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಿಎಂ ನಯಾಬ್ ಸಿಂಗ್ ಶೈನಿ, ಸ್ವಾಮಿ ಜ್ಞಾನಾನಂದ ಮಹಾರಾಜ್ ಹಾಗೂ ಕುರುಕ್ಷೇತ್ರ ಸಂಸದ ನವೀನ್ ಜಿಂದಾಲ್ ಸಭೆಯಲ್ಲಿದ್ದರು.</p><p>ಕಾರ್ಯಕ್ರಮದ ಪ್ರಚಾರ ಹಾಗೂ ಸಂಘಟನೆಗಾಗಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಶೋಭಾ ಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯಪಾಲರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ</strong>: ‘10 ನೇ ಆವೃತ್ತಿಯ ಅಂತರರಾಷ್ಟ್ರೀಯ ಗೀತಾ ಮಹೋತ್ಸವ’ ಕಾರ್ಯಕ್ರಮ (IGM-2025) ನವೆಂಬರ್ 15 ರಿಂದ ಡಿಸೆಂಬರ್ 1 ರಿಂದ ಹರಿಯಾಣದ ಕುರುಕ್ಷೇತ್ರದಲ್ಲಿ ಆಯೋಜನೆಯಾಗಿದೆ.</p><p>ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕತೆಯ ಸಮಾಗಮವಾದ ಈ ಸಮಾವೇಶದಲ್ಲಿ ಮುಖ್ಯ ಕಾರ್ಯಕ್ರಮಗಳು ನವೆಂಬರ್ 24ರಿಂದ ಡಿಸೆಂಬರ್ 1 ರಿಂದ ನಡೆಯಲಿವೆ ಎಂದು ಕುರುಕ್ಷೇತ್ರ ಅಭಿವೃದ್ಧಿ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.</p><p>ಅಂತರರಾಷ್ಟ್ರೀಯ ಭಗವದ್ಗೀತೆ ಮಹೋತ್ಸವ ಕಾರ್ಯಕ್ರಮದಲ್ಲಿ 40 ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.</p><p>IGM-2025 ಪ್ರಯುಕ್ತ ಇಂದು ಮಂಡಳಿಯ ಮುಖ್ಯ ಕಚೇರಿಯಲ್ಲಿ ಹರಿಯಾಣ ರಾಜ್ಯಪಾಲ ಅಸೀಮ್ ಕುಮಾರ್ ಘೋಷ್ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಿಎಂ ನಯಾಬ್ ಸಿಂಗ್ ಶೈನಿ, ಸ್ವಾಮಿ ಜ್ಞಾನಾನಂದ ಮಹಾರಾಜ್ ಹಾಗೂ ಕುರುಕ್ಷೇತ್ರ ಸಂಸದ ನವೀನ್ ಜಿಂದಾಲ್ ಸಭೆಯಲ್ಲಿದ್ದರು.</p><p>ಕಾರ್ಯಕ್ರಮದ ಪ್ರಚಾರ ಹಾಗೂ ಸಂಘಟನೆಗಾಗಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಶೋಭಾ ಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯಪಾಲರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>