<p class="title"><strong>ಮುಂಬೈ: </strong>ಮಹಾರಾಷ್ಟ್ರದ ಶಿವಸೇನಾ ನೇತೃತ್ವದ ಸರ್ಕಾರವು ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯ ಒಂದು ಅಧ್ಯಾಯವನ್ನು ಪರಿಚಯಿಸಬೇಕು ಎಂದು ಬಿಜೆಪಿ ಶಾಸಕ ಮಂಗಲ್ ಪ್ರಭಾತ್ ಲೋಧಾಮಂಗಳವಾರ ಬೇಡಿಕೆಯಿಟ್ಟಿದ್ದಾರೆ.</p>.<p class="title">ಇದೊಂದು ಧಾರ್ಮಿಕ ಗ್ರಂಥ ಮಾತ್ರವಲ್ಲ, ಬದಲಿಗೆ ಜೀವನದ ಸಾರವನ್ನು ತಿಳಿಸುತ್ತದೆ ಎಂದೂ ಅವರು ಹೇಳಿದ್ದಾರೆ.</p>.<p class="title">ವಿಧಾನಸಭೆಯಲ್ಲಿ ಈ ಕುರಿತು ಪ್ರಸ್ತಾಪಿಸಿದ ಅವರು, ‘ಭಾರತದಾದ್ಯಂತ ಶಾಲಾ ಶಿಕ್ಷಣದಲ್ಲಿ ಗೀತೆಯನ್ನು ಅಳವಡಿಸಲಾಗುತ್ತಿದೆ. ಮಹಾರಾಷ್ಟ್ರ ಸರ್ಕಾರ ಶಾಲಾ ಪಠ್ಯಕ್ರಮದಲ್ಲಿ ಗೀತೆಯನ್ನು ಪರಿಚಯಿಸುತ್ತದೆಯೇ? ಸರ್ಕಾರವು ಗೀತೆಯ ಒಂದು ಅಧ್ಯಾಯವನ್ನಾದರೂ ಶಿಕ್ಷಣದಲ್ಲಿ ಅಳವಡಿಸಲು ನಾನು ಮನವಿ ಮಾಡುತ್ತೇನೆ’ ಎಂದು ಹೇಳಿದರು.</p>.<p class="title">‘ಮಹಾರಾಷ್ಟ್ರದ ಶೈಕ್ಷಣಿಕ ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆಯನ್ನು ಅಳವಡಿಸಬೇಕು. ಈ ಬಗ್ಗೆ ಬೇಡಿಕೆ ಸಲ್ಲಿಸಿದ್ದೇನೆ’ ಎಂದು ಲೋಧಾ ಟ್ವೀಟ್ ಮಾಡಿದ್ದಾರೆ.</p>.<p class="title">ಗುಜರಾತ್ನಲ್ಲಿ 2022–23ರ ಶೈಕ್ಷಣಿಕ ಸಾಲಿನಿಂದ ಭಗವದ್ಗೀತೆಯು 6–12ನೇ ತರಗತಿಯ ಪಠ್ಯಕ್ರಮದ ಭಾಗವಾಗಲಿದೆ ಎಂದು ಇಲ್ಲಿಯ ಬಿಜೆಪಿ ನೇತೃತ್ವದ ಸರ್ಕಾರ ಗುರುವಾರ ಘೋಷಿಸಿದೆ.ಕರ್ನಾಟಕ ಸರ್ಕಾರದಲ್ಲಿ ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ: </strong>ಮಹಾರಾಷ್ಟ್ರದ ಶಿವಸೇನಾ ನೇತೃತ್ವದ ಸರ್ಕಾರವು ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯ ಒಂದು ಅಧ್ಯಾಯವನ್ನು ಪರಿಚಯಿಸಬೇಕು ಎಂದು ಬಿಜೆಪಿ ಶಾಸಕ ಮಂಗಲ್ ಪ್ರಭಾತ್ ಲೋಧಾಮಂಗಳವಾರ ಬೇಡಿಕೆಯಿಟ್ಟಿದ್ದಾರೆ.</p>.<p class="title">ಇದೊಂದು ಧಾರ್ಮಿಕ ಗ್ರಂಥ ಮಾತ್ರವಲ್ಲ, ಬದಲಿಗೆ ಜೀವನದ ಸಾರವನ್ನು ತಿಳಿಸುತ್ತದೆ ಎಂದೂ ಅವರು ಹೇಳಿದ್ದಾರೆ.</p>.<p class="title">ವಿಧಾನಸಭೆಯಲ್ಲಿ ಈ ಕುರಿತು ಪ್ರಸ್ತಾಪಿಸಿದ ಅವರು, ‘ಭಾರತದಾದ್ಯಂತ ಶಾಲಾ ಶಿಕ್ಷಣದಲ್ಲಿ ಗೀತೆಯನ್ನು ಅಳವಡಿಸಲಾಗುತ್ತಿದೆ. ಮಹಾರಾಷ್ಟ್ರ ಸರ್ಕಾರ ಶಾಲಾ ಪಠ್ಯಕ್ರಮದಲ್ಲಿ ಗೀತೆಯನ್ನು ಪರಿಚಯಿಸುತ್ತದೆಯೇ? ಸರ್ಕಾರವು ಗೀತೆಯ ಒಂದು ಅಧ್ಯಾಯವನ್ನಾದರೂ ಶಿಕ್ಷಣದಲ್ಲಿ ಅಳವಡಿಸಲು ನಾನು ಮನವಿ ಮಾಡುತ್ತೇನೆ’ ಎಂದು ಹೇಳಿದರು.</p>.<p class="title">‘ಮಹಾರಾಷ್ಟ್ರದ ಶೈಕ್ಷಣಿಕ ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆಯನ್ನು ಅಳವಡಿಸಬೇಕು. ಈ ಬಗ್ಗೆ ಬೇಡಿಕೆ ಸಲ್ಲಿಸಿದ್ದೇನೆ’ ಎಂದು ಲೋಧಾ ಟ್ವೀಟ್ ಮಾಡಿದ್ದಾರೆ.</p>.<p class="title">ಗುಜರಾತ್ನಲ್ಲಿ 2022–23ರ ಶೈಕ್ಷಣಿಕ ಸಾಲಿನಿಂದ ಭಗವದ್ಗೀತೆಯು 6–12ನೇ ತರಗತಿಯ ಪಠ್ಯಕ್ರಮದ ಭಾಗವಾಗಲಿದೆ ಎಂದು ಇಲ್ಲಿಯ ಬಿಜೆಪಿ ನೇತೃತ್ವದ ಸರ್ಕಾರ ಗುರುವಾರ ಘೋಷಿಸಿದೆ.ಕರ್ನಾಟಕ ಸರ್ಕಾರದಲ್ಲಿ ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>