ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಅವರು ಅನಾರೋಗ್ಯದ ಕಾರಣ ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್ಗೆ ಬುಧವಾರ ಅರ್ಜಿ ಸಲ್ಲಿಸಿದ್ದಾರೆ.
ಹಿರಿಯ ವಕೀಲ ಕಪಿಲ್ ಸಿಬಲ್, ಈ ಕುರಿತ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಸಿ. ಹರಿ ಶಂಕರ್ ಅವರ ಪೀಠಕ್ಕೆ ಸಲ್ಲಿಸಿದ್ದು, ವಿಚಾರಣೆ ಗುರುವಾರ ನಡೆಯಲಿದೆ.
ಮರಳಿ ತಿಹಾರ ಜೈಲಿಗೆ: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ವಶದಲ್ಲಿದ್ದ ಚಿದಂಬರಂ ಅವರನ್ನು ಬುಧವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿ ನ್ಯಾಯಾಲಯ ಆದೇಶ ನೀಡಿದೆ. ನ್ಯಾಯಾಂಗ ಬಂಧನ ಅವಧಿ ನ.13ರ ತನಕ ಇರಲಿದ್ದು, ಅವರನ್ನು ತಿಹಾರ ಜೈಲಿಗೆ ಪುನಃ ಕಳುಹಿಸಲಾಗಿದೆ.